Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತ ಮತ್ತು ಚೀನಾ ನಡುವಿನ ಗಡಿ ವಿಚಾರ: ಮೋದಿ ಅಭಿಪ್ರಾಯ ಸ್ವಾಗತಿಸಿದ ಚೀನಾ

ಬೀಜಿಂಗ್, ಏಪ್ರಿಲ್ 11: ಚೀನಾ ಜೊತೆಗಿನ ಸಂಬಂಧ ಮುಖ್ಯವಾಗಿದ್ದು, ಗಡಿ ಸಮಸ್ಯೆಗಳಿಂದ ಆದಷ್ಟೂ ಬೇಗ ದೂರ ಮಾಡಬೇಕು ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ನೀಡಿದ್ದ ಹೇಳಿಕೆಗೆ ಚೀನಾ ಸಹಮತ ವ್ಯಕ್ತಪಡಿಸಿದೆ. ಭಾರತ ಮತ್ತು ಚೀನಾ ಮಧ್ಯೆ ಆರೋಗ್ಯಯುತ ಮತ್ತು ಸ್ಥಿರ ಸಂಬಂಧ ಇದ್ದರೆ ಎರಡೂ ದೇಶಗಳ ಹಿತಾಸಕ್ತಿಗೆ ಅನುಕೂಲವಾಗುತ್ತದೆ ಎಂದು ಚೀನಾದ ವಿದೇಶಾಂಗ ಇಲಾಖೆಯ ವಕ್ತಾರೆ ಮಾವೋ ನಿಂಗ್ ಹೇಳಿದ್ದಾರೆ.

ಪ್ರಧಾನಿಗಳು ನೀಡಿದ ಹೇಳಿಕೆಯನ್ನು ಚೀನಾ ಗಮನಿಸಿದೆ. ಭಾರತ ಮತ್ತು ಚೀನಾ ನಡುವೆ ಗಟ್ಟಿ ಸಂಬಂಧ ಇದ್ದರೆ ಎರಡೂ ದೇಶಗಳಿಗೆ ಸಹಾಯವಾಗುತ್ತದೆ. ಈ ಪ್ರದೇಶ ಹಾಗೂ ಅದರಾಚೆ ಶಾಂತಿ ಮತ್ತು ಅಭಿವೃದ್ಧಿ ಸಾಧ್ಯ ಮಾಡಿಕೊಡುತ್ತದೆ,’ ಎಂದು ಚೀನಾದ ಈ ವಕ್ತಾರೆ ಅಭಿಪ್ರಾಯಪಟ್ಟಿದ್ದಾರೆ.

ಅಮೆರಿಕದ ನ್ಯೂಸ್​ವೀಕ್ ಮ್ಯಾಗಝಿನ್​ಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಚೀನಾ ಸಂಬಂಧದ ಮಹತ್ವದ ಬಗ್ಗೆ ಮಾತನಾಡಿದ್ದರು. ಚೀನಾದೊಂದಿಗೆ ಉತ್ತಮ ಸಂಬಂಧ ಹೊಂದಿರುವುದು ಭಾರತಕ್ಕೆ ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ನಮ್ಮ ಗಡಿಭಾಗದಲ್ಲಿ ದೀರ್ಘಕಾಲದಿಂದ ಇರುವ ಸಮಸ್ಯೆಗಳನ್ನು ಆದಷ್ಟೂ ಬೇಗ ನಿವಾರಿಸುವ ಅವಶ್ಯಕತೆ ಇದೆ ಎನ್ನುವುದು ನನ್ನ ಭಾವನೆ. ಇದರಿಂದ ನಮ್ಮೆರಡು ದೇಶಗಳ ದ್ವಿಪಕ್ಷೀಯ ವ್ಯವಹಾರದಲ್ಲಿನ ಅಸ್ವಾಭಾವಿಕತೆಯನ್ನು ನೀಗಿಸಬಹುದು.ಭಾರತ ಮತ್ತು ಚೀನಾ ಮಧ್ಯೆ ಸ್ಥಿರ ಮತ್ತು ಶಾಂತಿಯು ಸಂಬಂಧವು ಕೇವಲ ನಮ್ಮೆರಡು ದೇಶಗಳಿಗೆ ಮಾತ್ರವಲ್ಲ, ಇಡೀ ಪ್ರದೇಶ ಮತ್ತು ವಿಶ್ವಕ್ಕೂ ಮುಖ್ಯವಾಗಿದೆ,’ ಎಂದು ನರೇಂದ್ರ ಮೋದಿ ಆ ಸಂದರ್ಶನದಲ್ಲಿ ಹೇಳಿದ್ದಾರೆ.

ಗಡಿವಿಚಾರವು ಭಾರತ ಮತ್ತು ಚೀನಾದ ಇಡೀ ಸಂಬಂಧವನ್ನು ಪ್ರತಿನಿಧಿಸುವುದಿಲ್ಲ. ದ್ವಿಪಕ್ಷೀಯ ಸಂಬಂಧದಲ್ಲಿ ಸೂಕ್ತ ಜಾಗದಲ್ಲಿ ಈ ಗಡಿ ವಿಚಾರವನ್ನು ಇರಿಸಬೇಕು. ಅದನ್ನು ಸರಿಯಾಗಿ ನಿರ್ವಹಿಸಬೇಕು. ಚೀನಾದ ದಾರಿಯಲ್ಲೇ ಭಾರತವೂ ಸಾಗಿ ಬರುತ್ತದೆ ಎಂದು ಆಶಿಸುತ್ತೇನೆ. ದೀರ್ಘಕಾಲೀನ ದೃಷ್ಟಿಕೋನ, ಪರಸ್ಪರ ನಂಬಿಕೆ, ಮಾತುಕತೆ ಮತ್ತು ಸಹಕಾರ, ವೈಭಿನ್ಯತೆಯ ನಿರವಹಣೆ, ಸರಿಯಾದ ಮಾರ್ಗದಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಮುಂದಕ್ಕೆ ಕೊಂಡೊಯ್ಯುವುದು, ಇದು ಸರಿಯಾಗಿ ನಡೆಯಲಿ ಎಂಬುದು ನಮ್ಮ ನಿರೀಕ್ಷೆ, ಎಂದು ಮಾವೋ ನಿಂಗ್ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ