Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿನ್ಮಯ ಕಲಾಶ್ರೀ' ಪ್ರಶಸ್ತಿಗೆ ಭಾಜನರಾದ ಬಸವರಾಜ ಅಡವಳ್ಳಿ 


ಗದಗ, 23 : ಜಿಲ್ಲೆಯ ಸಾಂಸ್ಕೃತಿಕ ಪರಿಸರದಲ್ಲಿ ರಂಗಭೂಮಿಯನ್ನು ಪ್ರಮುಖವಾಗಿಸಿಕೊಂಡು ತನ್ನದೇ ಆದ ವೈಶಿಷ್ಟ್ಯಪೂರ್ಣ ಕಾರ್ಯಕ್ರಮಗಳ ಮೂಲಕ ಸಾಂಸ್ಕೃತಿಕ ಲೊಕದ ಸೇವೆ ಸಲ್ಲಿಸುತ್ತಿರುವ ಚಿನ್ಮಯ ಸಾಂಸ್ಕೃತಿಕ ಅಕಾಡೆಮಿಯು ಕಳೆದ ಹತ್ತು ವರ್ಷಗಳಿಂದ ವಿಶ್ವರಂಗಭೂಮಿ ದಿನಾಚರಣೆಯನ್ನು ಆಚರಿಸುತ್ತ, ರಂಗಭೂಮಿ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಹಿರಿಯ ರಂಗಕಲಾವಿದರಿಗೆ 'ಚಿನ್ಮಯ ಕಲಾಶ್ರೀ' ಪ್ರಶಸ್ತಿ ನೀಡುವ ಮೂಲಕ ಕಲೆ, ಕಲಾವಿದರನ್ನು ಉತ್ತೇಜಿಸುವ ಕೆಲಸ ಮಾಡುತ್ತ ಬಂದಿದ್ದು, ಪ್ರಸಕ್ತ 2026 ರ ಹನ್ನೊಂದನೇ ವರ್ಷದ ರಂಗಭೂಮಿ ದಿನಾಚರಣೆಯ ಅಂಗವಾಗಿ 'ಚಿನ್ಮಯ ಕಲಾಶ್ರೀ' ಪ್ರಶಸ್ತಿಗೆ ಹಿರಿಯ ರಂಗಕಲಾವಿದರಾದ ಬಸವರಾಜ ಶಿ. ಅಡವಳ್ಳಿ ಅವರನ್ನು ಆಯ್ಕೆ ಮಾಡಿದೆ ಎಂದು ಚಿನ್ಮಯ ಸಾಂಸ್ಕೃತಿಕ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

ರಂಗಭೂಮಿ ಕ್ಷೇತ್ರದಲ್ಲಿ ಸಂಗೀತ ನಿರ್ದೇಶಕರಾಗಿ ಸೇವೆ ಸಲ್ಲಿಸುವುದರೊಂದಿಗೆ ನಟರಾಗಿ ನಿರ್ದೇಶಕರಾಗಿ ಕೂಡಾ ಬಸವರಾಜ ಶಿ. ಅಡವಳ್ಳಿ ಅವರು ಗಣನೀಯ ಸೇವೆ ಸಲ್ಲಿಸಿರುವರು.

ಪ್ರಶಸ್ತಿಗೆ ಆಯ್ಕೆಯಾದ ಬಸವರಾಜ ಶಿ. ಅಡವಳ್ಳಿ ಅವರಿಗೆ ಚಿನ್ಮಯ ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷರಾದ ಮೌನೇಶ ಸಿ. ಬಡಿಗೇರ(ನರೇಗಲ್ಲ), ಆರ್ ಎನ್ ಕೆ ಮಿತ್ರ ಮಂಡಳಿಯ ಉಪಾಧ್ಯಕ್ಷರಾದ ಎಸ್. ಬಿ. ಕುಲಕರ್ಣಿ, ಹಿರಿಯ ಸಾಹಿತಿಗಳಾದ ಅಂದಾನೆಪ್ಪ ವಿಭೂತಿ, ಐ. ಕೆ. ಕಮ್ಮಾರ,  ರಂಗ ನಿರ್ದೇಶಕರಾದ ಫಣೀಂದ್ರಚಾರ್ಯ ದ್ಯಮೇನಹಳ್ಳಿ, ನಿವೃತ್ತ ಪ್ರಾಂಶುಪಾಲರಾದ ಆರ್. ಡಿ. ಕಡ್ಲಿಕೊಪ್ಪ,  ರಂಗಕಲಾವಿದರಾದ ಮುರಲೀಧರ ಸಂಕನೂರ, ಡಾ.ದತ್ತಪ್ರಸನ್ನ ಪಾಟೀಲ, ಡಾ. ಗಿರೀಶ ಬಡಿಗೇರ, ಜಾನಪದ ಕಲಾವಿದರಾದ ಶಿವಪ್ಪ ಭಜಂತ್ರಿ,

ಶ್ರೀಧರ ಕೊಣ್ಣೂರ, ವಿಶ್ವನಾಥ ಕಮ್ಮಾರ, ಮಹೇಶ ಕಮ್ಮಾರ, ಕಲಾವಿದರಾದ ರಾಚಯ್ಯ ಹೊಸಮಠ, ವಿಶ್ವನಾಥ ಬೇಂದ್ರೆ, ವೀರಯ್ಯ ಹೊಸಮಠ, ಸುಭಾಸ ಮಳಗಿ, ಸೂರಜ್ ಮಯೇಕರ, ಚಿನ್ಮಯ ಸಾಂಸ್ಕೃತಿಕ ಅಕಾಡೆಮಿಯ ನಿರ್ದೇಶಕರಾದ ಶರಣಪ್ಪ ಗಂಗರಗೊಂಡ, ರಿಯಾಜ್ ಅಹ್ಮದ್ ರಾಹುತ್, ಗಣೇಶ ಕಾಂಬಳೆ, ವಿಷ್ಣುಆಚಾರ್ಯ ಮೌನೇಶ ಬಡಿಗೇರ,

ಅಮರೇಶ ರಾಮಪೂರ, ದುರ್ಗೇಶ ಭೈರಮ್ಮನವರ ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಅಭಿನಂದಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ