Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿನ್ಮಯ ಕಲಾಶ್ರೀ' ಪ್ರಶಸ್ತಿಗೆ ಭಾಜನರಾದ ಬಸವರಾಜ ಅಡವಳ್ಳಿ 


ಗದಗ, 23 : ಜಿಲ್ಲೆಯ ಸಾಂಸ್ಕೃತಿಕ ಪರಿಸರದಲ್ಲಿ ರಂಗಭೂಮಿಯನ್ನು ಪ್ರಮುಖವಾಗಿಸಿಕೊಂಡು ತನ್ನದೇ ಆದ ವೈಶಿಷ್ಟ್ಯಪೂರ್ಣ ಕಾರ್ಯಕ್ರಮಗಳ ಮೂಲಕ ಸಾಂಸ್ಕೃತಿಕ ಲೊಕದ ಸೇವೆ ಸಲ್ಲಿಸುತ್ತಿರುವ ಚಿನ್ಮಯ ಸಾಂಸ್ಕೃತಿಕ ಅಕಾಡೆಮಿಯು ಕಳೆದ ಹತ್ತು ವರ್ಷಗಳಿಂದ ವಿಶ್ವರಂಗಭೂಮಿ ದಿನಾಚರಣೆಯನ್ನು ಆಚರಿಸುತ್ತ, ರಂಗಭೂಮಿ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಹಿರಿಯ ರಂಗಕಲಾವಿದರಿಗೆ 'ಚಿನ್ಮಯ ಕಲಾಶ್ರೀ' ಪ್ರಶಸ್ತಿ ನೀಡುವ ಮೂಲಕ ಕಲೆ, ಕಲಾವಿದರನ್ನು ಉತ್ತೇಜಿಸುವ ಕೆಲಸ ಮಾಡುತ್ತ ಬಂದಿದ್ದು, ಪ್ರಸಕ್ತ 2026 ರ ಹನ್ನೊಂದನೇ ವರ್ಷದ ರಂಗಭೂಮಿ ದಿನಾಚರಣೆಯ ಅಂಗವಾಗಿ 'ಚಿನ್ಮಯ ಕಲಾಶ್ರೀ' ಪ್ರಶಸ್ತಿಗೆ ಹಿರಿಯ ರಂಗಕಲಾವಿದರಾದ ಬಸವರಾಜ ಶಿ. ಅಡವಳ್ಳಿ ಅವರನ್ನು ಆಯ್ಕೆ ಮಾಡಿದೆ ಎಂದು ಚಿನ್ಮಯ ಸಾಂಸ್ಕೃತಿಕ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

ರಂಗಭೂಮಿ ಕ್ಷೇತ್ರದಲ್ಲಿ ಸಂಗೀತ ನಿರ್ದೇಶಕರಾಗಿ ಸೇವೆ ಸಲ್ಲಿಸುವುದರೊಂದಿಗೆ ನಟರಾಗಿ ನಿರ್ದೇಶಕರಾಗಿ ಕೂಡಾ ಬಸವರಾಜ ಶಿ. ಅಡವಳ್ಳಿ ಅವರು ಗಣನೀಯ ಸೇವೆ ಸಲ್ಲಿಸಿರುವರು.

ಪ್ರಶಸ್ತಿಗೆ ಆಯ್ಕೆಯಾದ ಬಸವರಾಜ ಶಿ. ಅಡವಳ್ಳಿ ಅವರಿಗೆ ಚಿನ್ಮಯ ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷರಾದ ಮೌನೇಶ ಸಿ. ಬಡಿಗೇರ(ನರೇಗಲ್ಲ), ಆರ್ ಎನ್ ಕೆ ಮಿತ್ರ ಮಂಡಳಿಯ ಉಪಾಧ್ಯಕ್ಷರಾದ ಎಸ್. ಬಿ. ಕುಲಕರ್ಣಿ, ಹಿರಿಯ ಸಾಹಿತಿಗಳಾದ ಅಂದಾನೆಪ್ಪ ವಿಭೂತಿ, ಐ. ಕೆ. ಕಮ್ಮಾರ,  ರಂಗ ನಿರ್ದೇಶಕರಾದ ಫಣೀಂದ್ರಚಾರ್ಯ ದ್ಯಮೇನಹಳ್ಳಿ, ನಿವೃತ್ತ ಪ್ರಾಂಶುಪಾಲರಾದ ಆರ್. ಡಿ. ಕಡ್ಲಿಕೊಪ್ಪ,  ರಂಗಕಲಾವಿದರಾದ ಮುರಲೀಧರ ಸಂಕನೂರ, ಡಾ.ದತ್ತಪ್ರಸನ್ನ ಪಾಟೀಲ, ಡಾ. ಗಿರೀಶ ಬಡಿಗೇರ, ಜಾನಪದ ಕಲಾವಿದರಾದ ಶಿವಪ್ಪ ಭಜಂತ್ರಿ,

ಶ್ರೀಧರ ಕೊಣ್ಣೂರ, ವಿಶ್ವನಾಥ ಕಮ್ಮಾರ, ಮಹೇಶ ಕಮ್ಮಾರ, ಕಲಾವಿದರಾದ ರಾಚಯ್ಯ ಹೊಸಮಠ, ವಿಶ್ವನಾಥ ಬೇಂದ್ರೆ, ವೀರಯ್ಯ ಹೊಸಮಠ, ಸುಭಾಸ ಮಳಗಿ, ಸೂರಜ್ ಮಯೇಕರ, ಚಿನ್ಮಯ ಸಾಂಸ್ಕೃತಿಕ ಅಕಾಡೆಮಿಯ ನಿರ್ದೇಶಕರಾದ ಶರಣಪ್ಪ ಗಂಗರಗೊಂಡ, ರಿಯಾಜ್ ಅಹ್ಮದ್ ರಾಹುತ್, ಗಣೇಶ ಕಾಂಬಳೆ, ವಿಷ್ಣುಆಚಾರ್ಯ ಮೌನೇಶ ಬಡಿಗೇರ,

ಅಮರೇಶ ರಾಮಪೂರ, ದುರ್ಗೇಶ ಭೈರಮ್ಮನವರ ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಅಭಿನಂದಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ