LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ ಬಿಡುಗಡೆ

ಚಿತ್ರದುರ್ಗ, ಅಕ್ಟೋಬರ್​​​ 07: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ  ಅವರನ್ನು ಬಿಡುಗಡೆಗೆ ನ್ಯಾಯಾಲಯ ಆದೇಶ ಹೊರಡಿಸಿದೆ. ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಆದೇಶವನ್ನು ಹೊರಡಿಸಿದೆ

ಈ ಹಿಂದೆ ಹೈಕೋರ್ಟ್ ಮುರುಘಾಶ್ರೀಗೆ ಜಾಮೀನು ನೀಡಿತ್ತು. ಆದರೆ, ಸಾಕ್ಷ ವಿಚಾರಣೆ ನಡೆಸುವವರೆಗೆ ಬಂಧನದಲ್ಲಿಡಲು ಸುಪ್ರೀಂಕೋರ್ಟ್​ ಆದೇಶಿಸಿತ್ತು. ಇದೀಗ, ಸಂತ್ರಸ್ತೆಯರಿಬ್ಬರು ಸೇರಿದಂತೆ 12 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್​ ಜಾಮೀನಿನ ಆದೇಶದ ಪ್ರಕಾರ ಮುರುಘಾಶ್ರೀ ಬಿಡುಗಡೆಯಾಗಿದ್ದಾರೆ.

ಆದೇಶದ ಪ್ರತಿ ಜಿಲ್ಲಾ ಕಾರಾಗೃಹ ಅಧಿಕಾರಿಗಳ ಕೈ ಸೇರಿದ ಬಳಿಕ ತಲುಪಿದ ಬಳಿಕ ಬಿಡುಗಡೆ ಮುರುಘಾಶ್ರೀ ಜೈಲಿನಿಂದ ಹೊರಗೆ ಬರಲಿದ್ದಾರೆ. ಹೊರಬಂದ ಬಳಿಕ ಶ್ರೀಗಳು ದಾವಣಗೆರೆಯ ಶಿವಯೋಗಿ ಮಂದಿರಕ್ಕೆ ತೆರಳಲಿದ್ದಾರೆ.

ಫೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು. ಜಾಮೀನು ರದ್ದು ಕೋರಿ ಸಂತ್ರಸ್ತೆ ಪರವಾಗಿ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಮುರುಘಾಶ್ರೀ ಅವರ ಜಾಮೀನು ರದ್ದುಗೊಳಿಸಿತ್ತು. ಸಾಕ್ಷಗಳ ವಿಚಾರಣೆ ಮುಗಿಯುವವರೆಗೆ ಮುರುಘಾಶ್ರೀ ಬಂಧನದಲ್ಲಿರಲು ಸುಪ್ರೀಂಕೋರ್ಟ್​ ಸೂಚಿಸಿತ್ತು. ಇಂದಿಗೆ 13 ಮುಖ್ಯ ಸಾಕ್ಷಗಳ ವಿಚಾರಣೆ ಮುಗಿದಿದೆ. ಈ ಹಿನ್ನೆಲೆಯಲ್ಲಿ ಮುರುಘಾಶ್ರೀ ಅವರ ಬಿಡುಗಡೆಗೆ ನ್ಯಾಯಾಲಯ ಆದೇಶ ನೀಡಿದೆ ಎಂದು ಮುರುಘಾಶ್ರೀ ಪರ ವಕೀಲ ಕೆ. ವಿಶ್ವನಾಥಯ್ಯ ಹೇಳಿದರು.

ಚಿತ್ರದುರ್ಗ ಜೈಲಿಗೆ ಕೋರ್ಟ್​ನಿಂದ ಬಿಡುಗಡೆ ಆದೇಶ ಬಂದಿದೆ. ಹೈಕೋರ್ಟ್ ನೀಡಿದ ಷರತ್ತುಬದ್ಧ ಜಾಮೀನಿನ್ವಯ ಮಧ್ಯಾಹ್ನ 4ಗಂಟೆ ವೇಳೆಗೆ ಮುರುಘಾಶ್ರೀ ಬಿಡುಗಡೆಯಾಗುತ್ತಾರೆ. ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯಲ್ಲಿ ಮುರುಘಾಶ್ರೀ ಇರುವಂತಿಲ್ಲ. ಹೀಗಾಗಿ ಮುರುಘಾಶ್ರೀಗಳು ಬಿಡುಗಡೆ ಬಳಿಕ ದಾವಣಗೆರೆಗೆ ತೆರಳುತ್ತಾರೆ ಎಂದು ತಿಳಿಸಿದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್