Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೌಡಿಶೀಟರ್​​ಗಳ ನಡುವೆ ಮಾರಾಮಾರಿ; ಪೊಲೀಸರ ಗುಂಡೇಟು

ಹುಬ್ಬಳ್ಳಿ, ಆಗಸ್ಟ್​ 19: ನಗರದಲ್ಲಿ ತಡರಾತ್ರಿ ರೌಡಿಶೀಟರ್​​ಗಳ ನಡುವೆ ಮಾರಾಮಾರಿ ನಡೆದಿದ್ದು, ಪೊಲೀಸರು ಗುಂಡು ಹಾರಿಸಿ ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರೌಡಿಶೀಟರ್​ಗಳಾದ ಜಾವೂರ್ ಮತ್ತು ಅಫ್ತಾಬ್​ ಕರಡಿಗುಡ್ಡ ನಡುವೆ ತಡರಾತ್ರಿ ಮಾರಾಮಾರಿ ನಡೆದಿದೆ. ಗಲಾಟೆ ವೇಳೆ ರೌಡಿಶೀಟರ್ ಅಫ್ತಾಬ್​ ಕರಡಿಗುಡ್ಡ ರೌಡಿಶೀಟರ್ ಜಾವೂರ್​ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದನು.

ವಿಚಾರ ತಿಳಿದು ಸೋಮವಾರ ಬೆಳಗ್ಗೆ ಪೊಲೀಸರು ರೌಡಿಶೀಟರ್ ಅಫ್ತಾಬ್​ನನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದಾನೆ. ಈ ವೇಳೆ ಕಸಬಾಪೇಟೆ ಪೊಲೀಸರು ಆತ್ಮರಕ್ಷಣೆಗಾಗಿ ರೌಡಿಶೀಟರ್ ಅಫ್ತಾಬ್​ ಕರಡಿಗುಡ್ಡ ಕಾಲಿಗೆ ಗುಂಡು ಹೊಡೆದಿದ್ದಾರೆ. ಗಾಯಾಳು ರೌಡಿಶೀಟರ್ ಅಫ್ತಾಬ್​ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುಬ್ಬಳ್ಳಿಯ ಮದಿನಿ ಕಾಲೋನಿಯಲ್ಲಿ ಇಬ್ಬರು ಅಪ್ತಾಪ್ತ ಬಾಲಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿದ್ದು, ಓರ್ವನ ಕುತ್ತಿಗೆಗೆ ಚಾಕು ಇರಿಯಲಾಗಿದೆ. ಸಲೀಂ ಚಾಕು ಇರಿದ ಅಪ್ರಾಪ್ತ ಬಾಲಕ. ಮೊಹಮ್ಮದ್ ಸೋಫಿಯಾನ್ ಗಾಯಾಳು. ಗಾಯಗೊಂಡ ಮೊಹಮ್ಮದ್​ನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಕು ಇರಿದ ಅಪ್ರಾಪ್ತ ಬಾಲಕ ಸಲೀಂನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪ್ರಾಪ್ತ ಬಾಲಕನ ಮೇಲೆ ಚಾಕು ಇರಿತ ಪ್ರಕರಣ ಸಂಬಂಧ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಮಾತನಾಡಿ, 15 ವರ್ಷದ ಬಾಲಕನಿಗೆ ಚಾಕು ಇರಿಯಲಾಗಿದೆ. ಪರಿಚಯಸ್ಥ ಹುಡಗನಿಗೆ ಚಾಕು ಇರಿಯಲಾಗಿದೆ. ಚಾಕು ಇರಿದು ಅಪ್ರಾಪ್ತ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ. ಹತ್ತು ಸಾವಿರ ಸಾಲದ ವಿಷಯಕ್ಕಾಗಿ ಗಲಾಟೆ ನಡೆದಿದೆ. ಸಾಲಕ್ಕೆ ಪ್ರತಿಯಾಗಿ ಒಂದು ಸಾವಿರ ಬಡ್ಡಿ ಕಟ್ಟಬೇಕಿತ್ತು. ಅಪ್ರಾಪ್ತರನ್ನು ಬಳಸಿಕೊಂಡು ಕೆಲವರು ಬಡ್ಡಿ ವ್ಯವಹಾರ ಮಾಡುತ್ತಿದ್ದಾರೆ. ಚಾಕು ಇರಿದ ಸಲೀಂ ಸೇರಿ ಐವರನ್ನು ಬಂಧಿಸಲಾಗಿದೆ. ಬಂಧಿತರೆಲ್ಲರೂ ಅಪ್ರಾಪ್ತರು. ಬಡ್ಡಿ ಹಣ ನೀಡಿದ ಎಲ್ಲರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*