Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಲೂಕ ಪಂಚಾಯತ  ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಸತ್ತಿಗೇರಿ ಗ್ರಾಮ ಪಂಚಾಯತ ಆವರಣ ಸ್ವಚ್ಛತೆ

ಯರಗಟ್ಟಿ ತಾಲೂಕಿನಾದ್ಯಂತ ಸ್ವಚ್ಛ ಶನಿವಾರ ಕಾರ್ಯಕ್ರಮ ಆಚರಣೆ

 

 

ಯರಗಟ್ಟಿ : ಜಿಲ್ಲಾ ಪಂಚಾಯತ ಬೆಳಗಾವಿಯ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ ಶಿಂಧೆ ರವರವ ನಿರ್ದೇಶನದಂತೆ ಯರಗಟ್ಟಿ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಹಾಗೂ ಸವದತ್ತಿ ತಾಲೂಕಿನ ೩೨ ಹಾಗೂ ಯರಗಟ್ಟಿ ತಾಲೂಕಿನ ೧೨ ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛ ಶನಿವಾರ ಅಭಿಯಾನದ ಶನಿವಾರದಂದು  ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ 

Advertisement

ಮಾನ್ಯ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಆನಂದ ಬಡಕುಂದ್ರಿ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ತಾಲೂಕ ಪಂಚಾಯತ ಆವರಣದಲ್ಲಿ ಹಾಗೂ  ಸವದತ್ತಿ ತಾಲೂಕಿನ ೩೨ ಹಾಗೂ ಯರಗಟ್ಟಿ ತಾಲೂಕಿನ ೧೨ ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛ ಶನಿವಾರ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.  ಸರ್ಕಾರಿ ಕಚೇರಿಗಳ ಸ್ವಚ್ಛತೆ ಹಾಗೂ ನಮ್ಮ ಸುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕೆಂಬುದು ಕಾರ್ಯಕ್ರಮದ ಉದ್ದೇಶವಾಗಿದೆ. ತಾಪಂನ ಅಧೀನದ ಎಲ್ಲ ಸರ್ಕಾರಿ ಕಚೇರಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಲಯದ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕಾರ್ಯಾಲಯಗಳ ಆವರಣದಲ್ಲಿ ಪರಿಸರಸ್ನೇಹಿ ವಾತಾವರಣ ನಿರ್ಮಿಸಬೇಕು ಎಂದು ತಿಳಿಸಿದರು.

ಬಳಿಕ ಯರಗಟ್ಟಿ ತಾಲೂಕ ಪಂಚಾಯತಿಯಿಂದ ಸತ್ತಿಗೇರಿ ಆವರಣದಲ್ಲಿ ತಾಲೂಕ ಪಂಚಾಯತ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ತಾಲೂಕ ಪಂಚಾಯತ ಆವರಣವನ್ನು ಸ್ವಚ್ಛಗೊಳಿಸಿದರು. ತಮ್ಮ ವಿಭಾಗದ ದಾಖಲಾತಿಗಳನ್ನು ಕೂಡ ಸೂಕ್ತ ರೀತಿಯಲ್ಲಿ ಹೊಂದಿಸಿಕೊಂಡರು. 

ಈ ಸಂದರ್ಭದಲ್ಲಿ ಮಾನ್ಯ ಸಹಾಯಕ ನಿರ್ದೇಶಕರಾದ ಆರ್. ಎ. ಪಾಟೀಲ, ಅಕ್ಷರ ದಾಸೋಹ ಅಧಿಕಾರಿ ಮೈತ್ರಾದೇವಿ ವಸ್ತ್ರದ, ತಾ. ಪಂ. ವವ್ಯಸ್ಥಾಪಕರಾದೂ ಮಲ್ಲಿಕಾರ್ಜುನ ಕಂಬಿ, ಸತ್ತಿಗೇರಿ ಪಿಡಿಓ ಎ. ಬಿ. ಬಂಗಾರಿ, ಸಿದ್ದಪ್ಪ ಬೆಕ್ಕನ್ನವರ, ಚಂದ್ರಗೌಡ ಪಾಟೀಲ, ರಮೇಶ ಕೊಟ್ರಶೆಟ್ಟಿ, ಹಾಗೂ ತಾಲೂಕ ಪಂಚಾಯತ ಎಲ್ಲ ಸಿಬ್ಬಂದಿಗಳು ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*