ಯರಗಟ್ಟಿ : ಜಿಲ್ಲಾ ಪಂಚಾಯತ ಬೆಳಗಾವಿಯ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ ಶಿಂಧೆ ರವರವ ನಿರ್ದೇಶನದಂತೆ ಯರಗಟ್ಟಿ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಹಾಗೂ ಸವದತ್ತಿ ತಾಲೂಕಿನ ೩೨ ಹಾಗೂ ಯರಗಟ್ಟಿ ತಾಲೂಕಿನ ೧೨ ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛ ಶನಿವಾರ ಅಭಿಯಾನದ ಶನಿವಾರದಂದು ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ
ಮಾನ್ಯ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಆನಂದ ಬಡಕುಂದ್ರಿ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ತಾಲೂಕ ಪಂಚಾಯತ ಆವರಣದಲ್ಲಿ ಹಾಗೂ ಸವದತ್ತಿ ತಾಲೂಕಿನ ೩೨ ಹಾಗೂ ಯರಗಟ್ಟಿ ತಾಲೂಕಿನ ೧೨ ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛ ಶನಿವಾರ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಸರ್ಕಾರಿ ಕಚೇರಿಗಳ ಸ್ವಚ್ಛತೆ ಹಾಗೂ ನಮ್ಮ ಸುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕೆಂಬುದು ಕಾರ್ಯಕ್ರಮದ ಉದ್ದೇಶವಾಗಿದೆ. ತಾಪಂನ ಅಧೀನದ ಎಲ್ಲ ಸರ್ಕಾರಿ ಕಚೇರಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಲಯದ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕಾರ್ಯಾಲಯಗಳ ಆವರಣದಲ್ಲಿ ಪರಿಸರಸ್ನೇಹಿ ವಾತಾವರಣ ನಿರ್ಮಿಸಬೇಕು ಎಂದು ತಿಳಿಸಿದರು.
ಬಳಿಕ ಯರಗಟ್ಟಿ ತಾಲೂಕ ಪಂಚಾಯತಿಯಿಂದ ಸತ್ತಿಗೇರಿ ಆವರಣದಲ್ಲಿ ತಾಲೂಕ ಪಂಚಾಯತ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ತಾಲೂಕ ಪಂಚಾಯತ ಆವರಣವನ್ನು ಸ್ವಚ್ಛಗೊಳಿಸಿದರು. ತಮ್ಮ ವಿಭಾಗದ ದಾಖಲಾತಿಗಳನ್ನು ಕೂಡ ಸೂಕ್ತ ರೀತಿಯಲ್ಲಿ ಹೊಂದಿಸಿಕೊಂಡರು.
ಈ ಸಂದರ್ಭದಲ್ಲಿ ಮಾನ್ಯ ಸಹಾಯಕ ನಿರ್ದೇಶಕರಾದ ಆರ್. ಎ. ಪಾಟೀಲ, ಅಕ್ಷರ ದಾಸೋಹ ಅಧಿಕಾರಿ ಮೈತ್ರಾದೇವಿ ವಸ್ತ್ರದ, ತಾ. ಪಂ. ವವ್ಯಸ್ಥಾಪಕರಾದೂ ಮಲ್ಲಿಕಾರ್ಜುನ ಕಂಬಿ, ಸತ್ತಿಗೇರಿ ಪಿಡಿಓ ಎ. ಬಿ. ಬಂಗಾರಿ, ಸಿದ್ದಪ್ಪ ಬೆಕ್ಕನ್ನವರ, ಚಂದ್ರಗೌಡ ಪಾಟೀಲ, ರಮೇಶ ಕೊಟ್ರಶೆಟ್ಟಿ, ಹಾಗೂ ತಾಲೂಕ ಪಂಚಾಯತ ಎಲ್ಲ ಸಿಬ್ಬಂದಿಗಳು ಉಪಸ್ಥಿತರಿದ್ದರು.
