Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಫುಟ್ ಪಾತ್ ರಸ್ತೆಗಳ ಅತಿಕ್ರಮಣ ಕಾಲಮಿತಿಯೊಳಗೆ ತೆರವುಗೊಳಿಸಿ : ನಾಗೇಂದ್ರ ಪ್ರಸಾದ್.ಕೆ





ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಡಿಸಿ ನಾಗೇಂದ್ರ ಪ್ರಸಾದ್.ಕೆ ಸೂಚನೆ
ಸಾರ್ವಜನಿಕರಿಗೆ ಸಂಚಾರಿ ನಿಯಮ ಪಾಲಿಸಲು ಜಾಗೃತಿ ಮೂಡಿಸಿ

ಬಳ್ಳಾರಿ,ಜ.14- ಸಾರ್ವಜನಿಕರ ಸಂಚಾರಕ್ಕೆ ರಸ್ತೆಗಳನ್ನು ದುರಸ್ತಿಪಡಿಸಿ, ಅಪಘಾತಗಳಾಗದಂತೆ ಎಚ್ಚರಿಕೆ ಫಲಕಗಳನ್ನು ಅಳವಡಿಸಿ,  ಜನರಲ್ಲಿ ರಸ್ತೆ ಅಪಘಾತಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಬೇಕು ಎಂದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ನೂತನ ಜಿಲ್ಲಾಡಳಿತ ಭವನದ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದ ಹೊರಭಾಗದ ಸಾರ್ವಜನಿಕರು ಹೆಚ್ಚಾಗಿ ಬಳಸುವ ಸರ್ವೀಸ್ ರಸ್ತೆಗಳ ರಿಪೇರಿಯಾಗಬೇಕಿದೆ. ಅಗತ್ಯವಿರುವ ಕಡೆ ಗುರುತಿಸಿದಂತಹ ರಸ್ತೆಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಕೈಗೊಳ್ಳಬೇಕು ಎಂದು ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದ ವಿವಿಧೆಡೆ ಬಸ್ ಬೇ ನಿರ್ಮಿಸಲು ಪೊಲೀಸ್ ಅಧಿಕಾರಿಗಳು ಕೋರಿದ್ದು, ಪಾಲಿಕೆ ಅಧಿಕಾರಿಗಳು ಸೂಕ್ತ ಸಮನ್ವಯದೊಂದಿಗೆ ಕ್ರಮ ವಹಿಸಬೇಕು. ಅದೇರೀತಿಯಾಗಿ ಜಿಲ್ಲೆಯಲ್ಲಿನ ಆಸ್ಪತ್ರೆ ಮತ್ತು ಶಾಲೆಗಳ ಮುಂಭಾಗ ವೇಗದ ಮಿತಿಯ ಅಧಿಸೂಚನೆ ಹೊರಡಿಸಲು ಮತ್ತು ವೇಗದ ಮಿತಿಯ ಬಗ್ಗೆ ಸೂಚನಾ ಫಲಕ ಅಳವಡಿಸಲು ಸ್ಥಳ ಗುರುತಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಬಳ್ಳಾರಿ ನಗರದಲ್ಲಿ ಅತಿಕ್ರಮಣ ಮಾಡಿರುವ ಫುಟ್ ಪಾತ್ ರಸ್ತೆಗಳನ್ನು ಒಂದು ಕಾಲಮಿತಿಯೊಳಗೆ ತೆರವುಗೊಳಿಸಬೇಕು. ಇಲ್ಲವಾದಲ್ಲಿ ಸಂಬAಧಿಸಿದ ಅಧಿಕಾರಿಗಳೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಯವರು ಎಚ್ಚರಿಸಿದರು.
ನಗರದಿಂದ ಹೊರ ಹೋಗುವ ಹಾಗೂ ಒಳ ಬರುವ ವಾಹನಗಳ ಮೇಲೆ ನಿಗಾವಹಿಸಬೇಕು. ನಗರದಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧವಿದ್ದು, ಅಂತಹ ವಾಹನಗಳು ಕಂಡುಬAದಲ್ಲಿ ತಪಾಸಣೆ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಆಟೋ ಚಾಲಕರು, ತಮಗೆ ಅನುಕೂಲವಾಗುವ ಕಡೆಗಳಲ್ಲಿ ತಾವೇ ಜಾಗ ಗುರುತಿಸಿಕೊಂಡು, ನಿಲ್ಲಿಸುತ್ತಿದ್ದಾರೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಆಟೋ ಚಾಲಕ ಸಂಘದವರೊAದಿಗೆ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆ ನೀಡಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಹೇಳಿದರು.
ಜಿಲ್ಲೆಯಲ್ಲಿ ರಸ್ತೆ ಬದಿ ವಿದ್ಯುತ್ ಕಂಬ ಮತ್ತು ಗಿಡ ನೆಡುವ ಕಾರ್ಯಕ್ಕೆ ರಸ್ತೆ ಅಗೆಯುವ ಕಾರ್ಯಕ್ಕೆ ಕಡ್ಡಾಯವಾಗಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಂದ ಅನುಮತಿ ಪಡೆಯಲೇಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಖಲೀಲ್ ಸಾಬ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರು, ಮಹಾನಗರ ಪಾಲಿಕೆಯ ಅಧಿಕಾರಿಗಳು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.











Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ