LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸಿಎಂ ಬದಲಾವಣೆ ಹೈ ಕಮಾಂಡ್ ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಇಬ್ಬರೂ ನಮ್ಮ ಪಕ್ಷದ ಎರಡು ಕಣ್ಣುಗಳಿದ್ದಂತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು. ಕೊರೊನಾ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ರಾಜ್ಯಾದ್ಯಂತ​ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡಿ ಪಕ್ಷ ಸಂಘ​ಟನೆ ಮಾಡಿದ್ದಾರೆ. ​ಮಾಸ್ ಲೀಡರ್ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ​ಸಹ ಪಕ್ಷಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಇಬ್ಬರೂ ಕಾಂಗ್ರೆಸ್ ನ ಎರಡೂ ಕಣ್ಣು ಇದ್ದ​ ಹಾಗೆ‌. ​ಸಿದ್ದರಾಮಯ್ಯನವರು ನಮ್ಮ ಪಕ್ಷ ಕೊಟ್ಟ ಮಾತಿನಂತೆ ಅತ್ಯಂತ ಸಮರ್ಥವಾಗಿ ಯೋಜನೆಗಳನ್ನು ಜಾರಿ ಮಾಡಿ ಸಮರ್ಥವಾಗಿ ಆಡಳಿತ ಮಾಡುತ್ತಿದ್ದಾರೆ ಎಂದು ಹೆಬ್ಬಾಳಕರ್ ಹೇಳಿದರು.

ನಮ್ಮ ಪಕ್ಷದಲ್ಲಿ 136 ಜನ ಶಾಸಕರಿದ್ದಾರೆ. ಎಲ್ಲರ ಅಭಿಪ್ರಾಯ ತೆಗೆದುಕೊಂಡು ಒಳ್ಳೆಯ ಮುಖ್ಯಮಂತ್ರಿಯನ್ನು ನೇಮಕ ಮಾಡಿದ್ದಾರೆ. ನಮ್ಮಲ್ಲಿ ಹೈಕಮಾಂಡ್ ತೀರ್ಮಾನವೆ ಅಂತಿಮ. ಈಗಾಗಲೇ ಸಿದ್ದರಾಮಯ್ಯನವರು ಒಳ್ಳೆಯ ಆಡಳಿತ ನಡೆಸುತ್ತಿದ್ದಾರೆ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುನ್ನ ನೀಡಿದ ಆಶ್ವಾಸನೆಯನ್ನು ಈಡೇರಿಸಿ ಮುಂದೆ ಹೋಗುತ್ತಿದ್ದೇವೆ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್