Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಕ್ರೀದ್ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ

ಬೆಂಗಳೂರು: ಬಕ್ರೀದ್ ಹಬ್ಬದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿನ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆಯುತ್ತಿರುವ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದ ಸಿದ್ದರಾಮಯ್ಯ ಬಕ್ರೀದ್ ಹಬ್ಬದ ಶುಭ ಕೋರಿದರು. ಈ ವೇಳೆ ಸಚಿವ ಜಮೀರ್ ಅಹಮದ್ ಉಪಸ್ಥಿತರಿದ್ದರು. ಇದೇ ವೇಳೆ, ಮುಸ್ಲಿಂ ಮುಖಂಡರು ಮುಸಲ್ಮಾನರ ಅಮಾಮ್ ಶಾಲು, ಟೋಪಿ, ಹಾಕಿ ಸಿಎಂಗೆ ಸನ್ಮಾನಿಸಿದರು.

ಬಳಿಕ ಮುಸಲ್ಮಾನ ಬಾಂಧವರನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ''ಇವತ್ತು ಇಡೀ ಭಾರತದಲ್ಲಿ ಬಕ್ರೀದ್ ಹಬ್ಬದ ಆಚರಣೆ ಮಾಡಲಾಗುತ್ತಿದೆ. ನೀವೆಲ್ಲರೂ ಮನುಕುಲಕ್ಕೆ ಒಳ್ಳೆಯದಾಗಲಿ ಅಂತ ಪ್ರಾರ್ಥನೆ ಮಾಡಿದ್ದೀರಿ. ಈ ಸಮಯದಲ್ಲಿ ನಾನು ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರುತ್ತೇನೆ. ಈದ್ ಉಲ್ ಅದಾ ತಿಳಿಸಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದೀರಿ. ಸಮಾಜದಲ್ಲಿ ನಾವೆಲ್ಲರೂ ಅಣ್ಣ ತಮ್ಮಂದಿರ ರೀತಿ ಬಾಳಬೇಕು'' ಎಂದು ಕರೆ ನೀಡಿದರು.

ನಾವು ಯಾವುದೇ ತಾರತಮ್ಯ ಮಾಡಲ್ಲ: ''ಇದು ಬಹುತ್ವದ ದೇಶ. ಎಲ್ಲಾ ಭಾಷೆ, ಧರ್ಮಕ್ಕೆ ಸಮಾನತೆ ಕೊಡುವ ದೇಶ. ಮನುಷ್ಯತ್ವ ಬಹಳ ದೊಡ್ಡ. ಎಲ್ಲರಲ್ಲೂ ಸಹಿಷ್ಣುತೆ ಬರಬೇಕು. ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವ ಬೆಳೆಸಬೇಕು. ಆಗ ರಾಷ್ಟ್ರ, ಸಮಾಜ ಏಳಿಗೆ ಆಗುತ್ತೆ. ನಾವು ಸಂವಿಧಾನದ ಮೇಲೆ ನಂಬಿಕೆ ಇಟ್ಟವರು. ನಾವು ಯಾವುದೇ ತಾರತಮ್ಯ ಮಾಡಲ್ಲ. ರಾಜ್ಯದ 7 ಕೋಟಿ ಜನರನ್ನು ರಕ್ಷಣೆ ಮಾಡುವ ಜವಾಬ್ದಾರಿ ಸರ್ಕಾರದ್ದು. ಈ‌ ಕೆಲಸವನ್ನು ನಾವು ತಾರತಮ್ಯ ಇಲ್ಲದೇ ಮಾಡುತ್ತೇವೆ. ಅಲ್ಪಸಂಖ್ಯಾತರನ್ನು ಸಮಾನರನ್ನಾಗಿ ನೋಡುವ ಮನೋಭಾವ ನಮ್ಮದು. ಈ ವರ್ಷ ಒಳ್ಳೆಯ ಮಳೆ, ಬೆಳೆ ಆಗಲಿ ಎಂದು ಆಶಿಸುತ್ತೇನೆ ಎಂದು ಹಾರೈಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ