Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಜ್ವಲ್ ವಿದೇಶಕ್ಕೆ ಹೋಗುವುದರ ಹಿಂದೆ ದೇವೇಗೌಡರ ಪ್ಲ್ಯಾನ್ ಇದೆ: ಸಿಎಂ ಸಿದ್ದರಾಮಯ್ಯ

ಯಾದಗಿರಿ01: ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್​​ ರೇವಣ್ಣರನ್ನು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರೇ ಪ್ಲಾನ್ ಮಾಡಿ ವಿದೇಶಕ್ಕೆ ಕಳುಹಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್​ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ವಿದೇಶಕ್ಕೆ ಹೋಗುವವರಿಗೆ ವೀಸಾ ಕೊಡುವುದು ಯಾರು ಕೇಂದ್ರದ ಬಿಜೆಪಿಯವರೇ ತಾನೇ ಎಂದರು, ಪ್ರಜ್ವಲ್ ಪ್ರಕರಣಕ್ಕೂ ಡಿಸಿಎಂ ಡಿಕೆ ಶಿವಕುಮಾರ್​ಗೂ ಯಾವುದೇ ಸಂಬಂಧ ಇಲ್ಲ ಎಂದರು.

ಸೂರಜ್ ರೇವಣ್ಣ ಜೊತೆ ಫೋಟೋ ಇದ್ದರೆ ಏನಾಗುತ್ತೆ ಕುಮಾರಸ್ವಾಮಿ ಜೊತೆಗೂ ಡಿಕೆ ಶಿವಕುಮಾರ್ ಫೋಟೋ ಇದೆ. ನನ್ನ ಜೊತೆಗೆ ಹೆಚ್​ಡಿ ರೇವಣ್ಣ ಇರುವ ಫೋಟೋ ಕೂಡ ಇದೆ. ಹಾಗಾದ್ರೆ ಅವರನ್ನು ರಕ್ಷಣೆ ಮಾಡುತ್ತೇನೆ ಎಂದು ಅರ್ಥವಾ ಎಂದು ಪ್ರಶ್ನಿಸಿದರು.

ಪೆನ್​ಡ್ರೈವ್ ಹಿಂದೆ ಡಿಕೆ ಶಿವಕುಮಾರ್ ಕೈವಾಡ ಇದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕಾರ್ತಿಕ್ ಎಂಬಾತ ಪ್ರಜ್ವಲ್ ರೇವಣ್ಣರ ಕಾರು ಚಾಲಕ ಆಗಿದ್ದ. ಕಾರ್ತಿಕ್ ಬಿಜೆಪಿ ಮುಖಂಡನ ಕೈಯಲ್ಲಿ ಪೆನ್​ಡ್ರೈವ್ ಕೊಟ್ಟಿದ್ದ. ಅದನ್ನು ಆತನೇ ಹೇಳಿಕೊಂಡಿದ್ದಾನೆ. ಹೆಚ್​​ಡಿಕೆ ಕೇವಲ ರಾಜಕಾರಣಕ್ಕಾಗಿ ಡಿಕೆ ಶಿವಕುಮಾರ್ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಎಲ್ಲ ವಿಚಾರ ಗೊತ್ತಿದ್ದರೂ ಯಾಕೆ ಪ್ರಜ್ವಲ್​ಗೆ ಟಿಕೆಟ್​ ಕೊಟ್ಟರು, ಪ್ರಕರಣದ ತನಿಖೆಗೆ ಎಸ್​​ಐಟಿ ರಚನೆ ಮಾಡಲಾಗಿದೆ. ಎಸ್​ಐಟಿ ಅಧಿಕಾರಿಗಳು ಪಾರದರ್ಶಕವಾಗಿ ತನಿಖೆ ಮಾಡುತ್ತಾರೆ. ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಎಂದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ