Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಭೂತಪೂರ್ವವಾಗಿ ರಕ್ಷಾ ರಾಮಯ್ಯ ಗೆಲ್ಲುತ್ತಾರೆ: ಸಿ.ಎಂ.ಸಿದ್ದರಾಮಯ್ಯ 







ಚಿಕ್ಕಬಳ್ಳಾಪುರ, ಏ 18: ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಅಭೂತಪೂರ್ವವಾಗಿ ರಕ್ಷಾ ರಾಮಯ್ಯ ಗೆಲ್ಲುತ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಸ್ಪಷ್ಟವಾದ ಮಾತುಗಳಲ್ಲಿ ಘೋಷಿಸಿದರು.‌


ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ಬೃಹತ್ ರೋಡ್ ದಲ್ಲಿ ಮಾತನಾಡಿದರು. ನೀವೇ ತಿರಸ್ಕರಿಸಿದ NDA ಅಭ್ಯರ್ಥಿ ಸುಧಾಕರ್ ಮತ್ತೆ ಪ್ರಭಾವ ಬಳಸಿ ಲೋಕಸಭೆಗೆ ನಿಂತಿದ್ದಾರೆ. ಇವರನ್ನು ಈ ಬಾರಿಯೂ ಸೋಲಿಸಿದರೆ ನಿಮ್ಮ ಮತಕ್ಕೆ ಹೆಚ್ಚು ಗೌರವ ಬರುತ್ತದೆ ಎಂದು ಕರೆ ನೀಡಿದರು.


ಭ್ರಷ್ಟಾಚಾರಿ ಎನ್ನುವ ಕಾರಣಕ್ಕೇ ಇಲ್ಲಿಯ ಜನತೆ ಸುಧಾಕರ್ ಅವರನ್ನು ಸೋಲಿಸಿದ್ದೀರಿ. ಇವರ ಭ್ರಷ್ಟಾಚಾರದ ವಿರುದ್ಧ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಇವರ ಭ್ರಷ್ಟಾಚಾರ ಸಾಬೀತಾಗುತ್ತದೆ. ಬಳಿಕ ಸುಧಾಕರ್ ಎಲ್ಲಿಗೆ ಹೋಗಬೇಕೋ ಅಲ್ಲಿಗೇ ಹೋಗ್ತಾರೆ ಎಂದರು.


NDA ಅಭ್ಯರ್ಥಿ ಸುಧಾಕರ್  ಅವರಿಗೆ ಜನತಾ ನ್ಯಾಯಾಲಯದಲ್ಲಿ ನೀವೂ ಶಿಕ್ಷೆ ಕೊಡಬೇಕು. ಶಿಕ್ಷೆ ಕೊಟ್ಟರೆ ಮಾತ್ರ ಕ್ಷೇತ್ರದ ಜನತೆಯ ಹೆಸರಿನಲ್ಲಿ ಮಾಡಿದ ಮೋಸಕ್ಕೆ ಮತ್ತು ಮಂತ್ರಿಯಾಗಿ ಮಾಡಿದ ಭ್ರಷ್ಟಾಚಾರಕ್ಕೆ ತಕ್ಕ ಶಾಸ್ತಿ ಮಾಡಿದಂತಾಗುತ್ತದೆ ಎಂದರು.


ಈ ಬಾರಿ ಕೇಂದ್ರದಲ್ಲೂ BJP ಅಧಿಕಾರಕ್ಕೆ ಬರೋದಿಲ್ಲ: ಕೇಂದ್ರದಲ್ಲಿ INDIA ಅಧಿಕಾರಕ್ಕೆ ಬರುವುದರಿಂದ ಇಲ್ಲಿ ಸುಧಾಕರ್ ಸೋಲಿಸಿ.


ನಮ್ಮ ಸರ್ಕಾರ ರಾಜ್ಯದಲ್ಲಿ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುತ್ತಿದೆ. ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತೀ ಅರ್ಹ ಕುಟುಂಬದ ಮಹಿಳೆಯರ ಅಕೌಂಟಿಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಜಮೆ ಆಗುತ್ತದೆ. ರಾಜ್ಯ ಸರ್ಕಾರ ಕೊಡುವ ಪ್ರತಿ ತಿಂಗಳ 2 ಸಾವಿರ ರೂಪಾಯಿ ಕೂಡ ಇದಕ್ಕೆ ಸೇರಿ ವರ್ಷಕ್ಕೆ ಒಂದು ಲಕ್ಷದ 24 ಸಾವಿರ ರೂಪಾಯಿ ಪ್ರತೀ ಕುಟುಂಬಗಳ ಖಾತೆಗೆ ಬರುತ್ತದೆ ಎಂದು ಘೋಷಿಸಿದರು.


*ಇಡೀ ದೇಶದ ಅಷ್ಟೂ ರೈತರ ಸಾಲ ಮನ್ನಾ ಮಾಡಲಾಗುವುದು. ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ಲಕ್ಷ ನಿರುದ್ಯೋಗ ಭತ್ಯೆ ಸಿಗುತ್ತದೆ. ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಚಿತವಾಗಿ ನೀಡಲಾಗುವುದು. ಪ್ರಧಾನಿ ಮೋದಿಯವರ ಕೆಟ್ಟ ನೀತಿಯಿಂದಾಗಿ ಹದಗೆಟ್ಟಿರುವ ಭಾರತದ ಆರ್ಥಿಕತೆಯನ್ನು ಸರಿ ದಾರಿಗೆ ತಂದು ಜನರ ಪರವಾದ ಆರದಥಿಕತೆಯನ್ನು ಪುನರ್ ಸ್ಥಾಪಿಸಲಾಗುವುದು. ನೂರಕ್ಕೆ ನೂರು ಈ ಬಾರಿ ರಕ್ಷಾ ರಾಮಯ್ಯ ಗೆಲ್ಲುತ್ತಾರೆ. ಇವರಿಗೆ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ನಿಮ್ಮ ಆಶೀರ್ವಾದ ಇರಲಿ ಎಂದು ಕೋರಿದರು.



















Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ