Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಾಂಧಿ ಕುಟುಂಬವನ್ನು ಮೆಚ್ಚಿಸಲು ಸಿಎಂ ವಯನಾಡಲ್ಲಿ ಮನೆ: ವಿಜಯೇಂದ್ರ ವಾಗ್ದಾಳಿ

ಬೆಳಗಾವಿ: "ಸಿಎಂ ಸಿದ್ದರಾಮಯ್ಯ ಕೇರಳ ಸಿಎಂ? ಅಥವಾ ಕನ್ನಡಿಗರ ಸಿಎಂ? ಎಂಬ ಬಗ್ಗೆ ರಾಜ್ಯದ ಜನರಿಗೆ ಅನುಮಾನ ಮೂಡಿದೆ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.


ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಕೇರಳ ಸಿಎಂಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿರುವ ವಿಚಾರವಾಗಿ ಪ್ರತಿಕ್ರಿಯಿಸಿ, "ಮಳೆಗೆ ನಮ್ಮ ರಾಜ್ಯದಲ್ಲಿ ಅನೇಕ ಬಡವರು ಮನೆ ಕಳೆದುಕೊಂಡಿದ್ದಾರೆ.‌ ಅವರಿಗೆ 1 ಲಕ್ಷ ರೂ. ಪರಿಹಾರವನ್ನೂ ಕೊಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಆದರೆ ಗಾಂಧಿ ಕುಟುಂಬವನ್ನು ಖುಷಿ ಪಡಿಸಲು, ಕೇರಳ ರಾಜ್ಯದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಅವರನ್ನು ಖುಷಿ ಪಡಿಸಲು ಅಲ್ಲಿ ಬಡವರಿಗೆ ಮನೆ ಕಟ್ಟಿಸುವುದಾಗಿ ಹೇಳಿದ್ದಾರೆ" ಎಂದು ಕಿಡಿ ಕಾರಿದರು.


"ಇದರ ಜೊತೆಗೆ ಕೇರಳ ಉಪಚುನಾವಣೆ ಪ್ರಚಾರದ ವೇಳೆ ಡಿಸಿಎಂ ಡಿಕೆಶಿ ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ನೀಡುವುದಾಗಿ ಹೇಳಿಕೆ ನೀಡಿದ್ದರು. ಇದು ಸರಿಯಲ್ಲ. ಸುಪ್ರೀಂ‌ ಕೋರ್ಟ್​ನಲ್ಲಿ ಈ ಬಗ್ಗೆ ತೀರ್ಮಾನ ಆಗಿದೆ. ಸಿಎಂ ಹಾಗೂ ಡಿಸಿಎಂ ರಾಜ್ಯದ ಹಿತಾಸಕ್ತಿಯನ್ನು ಸಂಪೂರ್ಣವಾಗಿ ಮರೆತಿದ್ದಾರೆ. ಈ ವಿಚಾರವನ್ನೂ ಸದನದಲ್ಲಿ ಪ್ರಸ್ತಾಪಿಸುತ್ತೇವೆ. ಈ ಬಗ್ಗೆ ಪತ್ರವನ್ನೂ ಬರೆಯುತ್ತಿದ್ದೇನೆ" ಎಂದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ