Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ ಸಂಕಷ್ಟಕ್ಕೆ ಸಹಕಾರಿ ಸಂಘ ಆರ್ಥಿಕವಾಗಿ ನೆರವಾಗುತ್ತದೆ : ಕಾಶಪ್ಪನವರ

ಹುನಗುಂದ;: ರೈತರ ಸಂಕ?ಕ್ಕೆ ಸಹಕಾರಿ ಸಂಘ ಆರ್ಥಿಕವಾಗಿ ನೆರವಾಗುತ್ತದೆ. ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವನ್ನು ಆರಂಭಿಸಬೇಕು ಎನ್ನುವ ಬಹುದಿನಗಳ ಬೇಡಿಕೆ ಈಡೇರಿಸಲಾಗಿದೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ತಾಲ್ಲೂಕಿನ ಹಿರೇಬಾದವಾಡಗಿ ಗ್ರಾಮದಲ್ಲಿ ನೂತನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ರೈತರ ಅನುಕೂಲಕ್ಕಾಗಿ ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಿ. ಸಂಘದ ಪ್ರಗತಿಗೆ ಗ್ರಾಮಸ್ಥರು ಕೈಜೋಡಿಸಬೇಕು. ಹಿರೇಬಾದವಾಡಗಿ ಸೇರಿದಂತೆ ಮತಕ್ಷೇತ್ರದ ರಕ್ಕಸಗಿ, ಹಿರೇಮಳಗಾವಿಯಲ್ಲಿ ಹೊಸದಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು ಆರಂಭಿಸಲಾಗಿದೆ. ಎಂದರು.
ವಸತಿ ನಿಲಯ, ಸಮುದಾಯ ಭವನ ನಿರ್ಮಾಣ, ಪ್ರೌಢಶಾಲೆಗೆ ವಿಜ್ಞಾನ ಪ್ರಯೋಗಾಲಯ ಹಾಗೂ ಪ್ರಾಥಮಿಕ ಶಾಲಾ ಕೊಠಡಿಗಳ ಶೀಥಿಲಾವ್ಯಸ್ಥೆಯಿಂದ ದುರಸ್ಥಿ ಸೇರಿದಂತೆ ಇತರೆ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಗ್ರಾಮಸ್ಥರು ಹಾಗೂ ಶಿಕ್ಷಕರು ಶಾಸಕರಿಗೆಮನವಿ ಸಲ್ಲಿಸಿದರು. ಹಂತ ಹಂತವಾಗಿ ಬೇಡಿಕೆಗಳನ್ನು ಈಡೇರಿಸುವುದಾಗಿ ಶಾಸಕರು ಭರವಸೆ ನೀಡಿದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ ಮುತ್ತಣ್ಣ ಕಲಗೋಡಿ, ರಾಜಶೇಖರ ಪರೂತಿ, ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಮಹಾದೇವ ಕುಂಬಾರ, ಹುನಗುಂದ ಶಾಖೆಯ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಬಿ.ಎಸ್. ಪಾಟೀಲ, ಮುಖಂಡರಾದ ಶಿವಾನಂದ ಕಂಠಿ, ಮಹಾಂತೇಶ ಅವಾರಿ, ಸಂಗಣ್ಣ ಗಂಜೀಹಾಳ, ಮಹಾಂತೇಶ ನರಗುಂದ, ಬಸವಂತಪ್ಪ ಅಂಟರತಾನಿ, ಹಿರೇಬಾದವಾಡಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗಪ್ಪ ಕಲಗೋಡಿ, ಉಪಾಧ್ಯಕ್ಷೆ ಪದ್ಮಾವತಿ ಸಿಂಗನಗುತ್ತಿ, ಸಿ. ಡಿ. ಕಂದಕೂರ, ಎಸ್. ಆರ್. ಬಾಡಗಿ, ಜಿ.ಎಚ್ ಇಲಕಲ್ ಇತರರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ