Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಸರ ರಕ್ಷಣೆಗೆ ಸಾಮೂಹಿಕ ಕಾಳಜಿ ಅಗತ್ಯ: ಪ್ರೊ.ತಿಪ್ಪೇರುದ್ರಪ್ಪ

ಬಳ್ಳಾರಿ,ಏ.24 ಪರಿಸರ ಸಂರಕ್ಷಣೆಗೆ ಮಾನವನ ಕೊಡುಗೆಗಳು ಗಣನೀಯವಾಗಿ ಕ್ಷೀಣಿಸುತ್ತಿದ್ದು, ಇದು ಮನುಕುಲಕ್ಕೆ ಸಂಕಷ್ಟ ತಂದೊಡ್ಡುತ್ತದೆ ಎಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಗಳಾದ ಪ್ರೊ.ತಿಪ್ಪೇರುದ್ರಪ್ಪ.ಜೆ ಅವರು ಅಭಿಪ್ರಾಯ ಪಟ್ಟರು.

ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಮಂಗಳವಾರ ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ ಯೋಜನೆಯ ಭಾಗವಾಗಿ ಆಯೋಜಿಸಿದ್ದ ‘ಯುವಮಂಥನ’ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸ್ತುತ ದಿನಗಳಲ್ಲಿ ಪರಿಸರ ರಕ್ಷಣೆಯ ಕುರಿತು ಸಾಮೂಹಿಕವಾಗಿ ಕಾಳಜಿ ವಹಿಸಬೇಕು. ಸ್ವಚ್ಛ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬರು ತಮ್ಮ ಅಳಿಲು ಸೇವೆ ಸಲ್ಲಿಸುವುದು ಅಗತ್ಯ, ಈ ನಿಟ್ಟಿನಲ್ಲಿ ಸ್ವಯಂಪ್ರೇರಿತರಾಗಿ ಪರಿಸರ ರಕ್ಷಣೆಗೆ ಮುಂದಾಗಬೇಕು ಎಂದು ಕರೆ ನೀಡಿದರು.

ವಿಶ್ವವಿದ್ಯಾಲಯದ ಕುಲಸಚಿವರಾದ ಎಸ್.ಎನ್ ರುದ್ರೇಶ್ ಅವರು ಮಾತನಾಡಿ, ಪರಿಸರದಲ್ಲಿನ ಹಲವಾರು ಜೀವರಾಶಿಗಳ ಉಳಿವಿಗಾಗಿ ನೈಸರ್ಗಿಕ ಸಂಪನ್ಮೂಲಗಳನ್ನು ಸಾಧ್ಯವಾದಷ್ಟು ಕಡಿಮೆ ಬಳಸಬೇಕು. ಸುಸ್ಥಿರ ಬದುಕಿಗೆ ಪ್ಲಾಸ್ಟಿಕ್ ಮುಕ್ತ ವಾತಾವರಣ ನಿರ್ಮಾಣವಾಗಬೇಕು ಎಂದು ಹೇಳಿದರು.
ನೈಸರ್ಗಿಕ ತಾಪಮಾನ ನಿಯಂತ್ರಣ ಮಾಡಲು ಮರ-ಗಿಡಗಳನ್ನು ನೆಟ್ಟು ಪೋಷಿಸಬೇಕು. ಇಲ್ಲವಾದಲ್ಲಿ ಮುಂಬರುವ ಪೀಳಿಗೆಗೆ ಪರಿಸರ ಕಾಳಜಿಗೆ ನಾವು ನೀಡುವ ಕೊಡುಗೆ ಶೂನ್ಯವಾಗುತ್ತದೆ ಎಂದು ತಿಳಿಸಿದರು.

ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ.ವಿಜಯಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಯಕ್ರಮದ ಸಂಯೋಜಕರಾದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ನಿರಂಜನ್ ಅತಿಥಿಗಳನ್ನು ಸ್ವಾಗತಿಸಿದರು.

ಜಾಗತಿಕ ತಾಪಮಾನ ಏರಿಕೆ, ಹವಾಮಾನ ಬದಲಾವಣೆ, ಸುಸ್ಥಿರ ಅಭಿವೃದ್ಧಿ ಗುರಿಗಳು ಸೇರಿದಂತೆ ಪರಿಸರ ರಕ್ಷಣೆಯ ಕುರಿತಾದ 10 ವಿವಿಧ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಂದ ಸಂವಾದ ಕಾರ್ಯಕ್ರಮ ನಡೆಯಿತು.

ವಿವಿಧ ವಿಭಾಗಗಳ 50 ವಿದ್ಯಾರ್ಥಿಗಳು ತಮ್ಮ ವಿಚಾರಧಾರೆ ಮಂಡಿಸಿದರು. ಸಂವಾದ ಗೋಷ್ಠಿಗೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕರುಗಳಾದ ಡಾ.ಹನುಮೇಶ್ ವೈದ್ಯ, ಡಾ.ಕೆ.ಎಸ್ ಲೋಕೇಶ್, ಡಾ.ಅಂಶುಮಾಲಿ ಅವರು ತೀರ್ಪುಗಾರರಾಗಿ ಆಗಮಿಸಿದ್ದರು.

ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ