Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಗರಹಾಳು: ಲಿಂಗೈಕ್ಯ ಸಿದ್ದಲಿಂಗ ಶಿವಾಚಾರ್ಯರ ಪುಣ್ಯಸಂಸ್ಮರಣೋತ್ಸವ


ಸಿರುಗುಪ್ಪ09..: ‘ಅಖಂಡ ಬಳ್ಳಾರಿ ಜಿಲ್ಲೆಯ ವೀರಶೈವ ವಿದ್ಯಾವರ್ಧಕ ಸಂಘದ ಆರಂಭಕ್ಕೆ ಉಜ್ಜಯಿನಿ ಜಗದ್ಗುರು ಲಿಂಗೈಕ್ಯ ಸಿದ್ದಲಿಂಗ ಶಿವಾಚಾರ್ಯರು ಮೂಲ ನಿಧಿಯಾಗಿ ಐದು ಸಹಸ್ರ ರೂಪಾಯಿಗಳನ್ನಿತ್ತು ಹಾರೈಸಿದ್ದರು’ ಎಂದು ಸಿರುಗುಪ್ಪ ನಗರದ ಗುರುಬಸವ ಮಠದ ಬಸವಭೂಷಣ ಸ್ವಾಮೀಜಿ ಸ್ಮರಿಸಿದರು.

ತಾಲ್ಲೂಕಿನ ನಾಗರಹಾಳು ಬೃಹನ್ಮಠದಲ್ಲಿ ಬುಧವಾರ ಆಯೋಜಿಸಿದ್ದ ಉಜ್ಜಯಿನಿ ಜಗದ್ಗುರು ಲಿಂಗೈಕ್ಯ ಸಿದ್ದಲಿಂಗ ಶಿವಾಚಾರ್ಯರ 90ನೇ ಪುಣ್ಯಸಂಸ್ಮರಣೋತ್ಸವ ಉದ್ಘಾಟಿಸಿ ಶ್ರೀಗಳು ಆಶೀರ್ವಚನ ನೀಡಿದರು.

‘ಸಂಘ ಹಲವು ಶಾಲಾ, ಕಾಲೇಜು, ವಿದ್ಯಾಲಯಗಳನ್ನು ಸ್ಥಾಪಿಸಿ ಇಂದು ಹೆಮ್ಮರವಾಗಿ ಬೆಳೆದಿದ್ದು, ಆ ಮೂಲಕ ಮಕ್ಕಳ ಭವಿಷ್ಯ ಉಜ್ವಲಗೊಳಿಸುವಲ್ಲಿ ನಿರತವಾಗಿದೆ’ ಎಂದರು.

ಗಡಿನಾಡ ಸಾಹಿತಿ ನಾ.ಮ. ಮರುಳಾರಾಧ್ಯ ಮಾತನಾಡಿ, ಸನಾತನ ಸಂಸ್ಕೃತಿಯಲ್ಲಿ ಗುರು-ಹಿರಿಯರನ್ನು, ಪ್ರಾಜ್ಞರನ್ನು ಗೌರವಿಸುವ ಪರಂಪರೆ ಉದಾತ್ತವಾಗಿ ಬೆಳೆದು ಬಂದಿದೆ. ಎಲ್ಲರಿಗಿಂತ ಕಿರಿಯ ನಾನೆಂಬ ಮನೋಭಾವ ಪ್ರತಿಯೊಬ್ಬರಲ್ಲೂ ನೆಲೆಗೊಂಡಾಗ, ಅಹಂ ನಾಶಗೊಂಡು ಭಗವಂತನನ್ನು ಕಾಣಲು ಸಾಧ್ಯವಾಗುತ್ತದೆ. ಜೀವನದಲ್ಲಿ ಧನಾತ್ಮಕ ಚಿಂತನೆಗಳು ಬೆಳೆದಷ್ಟು ಸತ್ಕರ್ಮಗಳು ಹೆಚ್ಚಿ ಪುಣ್ಯ ಪ್ರಾಪ್ತಿಯಾಗುವುದು ಎಂದು ಹೇಳಿದರು.

ನಾ.ಮ. ಜಗದೀಶ ಗವಾಯಿಗಳ ವಚನ ಗಾಯನಕ್ಕೆ ಅಂಬಣ್ಣ ತಬಲಸಾಥ್ ನೀಡಿದರು. ಇದಕ್ಕು ಮುನ್ನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಬೃಹನ್ಮಠದ ನಾ.ಮ. ಬಸವರಾಜತಾತ ಅವರ 90ನೇ ಜನ್ಮದಿನ ಅಂಗವಾಗಿ ಭಕ್ತರು ಸತ್ಕರಿಸಿದರು.

ಶ್ರೀಮಠದ ಪ್ರಮುಖರಾದ ಎನ್.ಎಂ. ಶ್ರೀಕಂಠಯ್ಯತಾತ, ನಿವೃತ್ತ ವೈದ್ಯ ಮಲ್ಲಿಕಾರ್ಜುನ ಸ್ವಾಮಿ, ಕಲಿಗಣನಾಥ, ನಾಗರಹಾಳು ಚಂದ್ರಗೌಡ, ಗಿರೀಶಗೌಡ, ಬಿ.ಎಂ ಸೂಗೂರು ಚಂದ್ರಶೇಖರ, ಕುಂಟನಹಾಳು ಮಂಜುನಾಥಗೌಡ, ಶಿವಕುಮಾರ, ಸಿರುಗುಪ್ಪ ಜಂಗಮ ಸಂಘದ ಮಹಾಂತೇಶ ಹಳೇಕೋಟೆ ಸೇರಿದಂತೆ ಭಕ್ತರು ಹಾಜರಿದ್ದರು.

ಬಳಿಕ ಅನ್ನಸಂತರ್ಪಣೆ ಜರುಗಿತು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ