Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಗರಹಾಳು: ಲಿಂಗೈಕ್ಯ ಸಿದ್ದಲಿಂಗ ಶಿವಾಚಾರ್ಯರ ಪುಣ್ಯಸಂಸ್ಮರಣೋತ್ಸವ


ಸಿರುಗುಪ್ಪ09..: ‘ಅಖಂಡ ಬಳ್ಳಾರಿ ಜಿಲ್ಲೆಯ ವೀರಶೈವ ವಿದ್ಯಾವರ್ಧಕ ಸಂಘದ ಆರಂಭಕ್ಕೆ ಉಜ್ಜಯಿನಿ ಜಗದ್ಗುರು ಲಿಂಗೈಕ್ಯ ಸಿದ್ದಲಿಂಗ ಶಿವಾಚಾರ್ಯರು ಮೂಲ ನಿಧಿಯಾಗಿ ಐದು ಸಹಸ್ರ ರೂಪಾಯಿಗಳನ್ನಿತ್ತು ಹಾರೈಸಿದ್ದರು’ ಎಂದು ಸಿರುಗುಪ್ಪ ನಗರದ ಗುರುಬಸವ ಮಠದ ಬಸವಭೂಷಣ ಸ್ವಾಮೀಜಿ ಸ್ಮರಿಸಿದರು.

ತಾಲ್ಲೂಕಿನ ನಾಗರಹಾಳು ಬೃಹನ್ಮಠದಲ್ಲಿ ಬುಧವಾರ ಆಯೋಜಿಸಿದ್ದ ಉಜ್ಜಯಿನಿ ಜಗದ್ಗುರು ಲಿಂಗೈಕ್ಯ ಸಿದ್ದಲಿಂಗ ಶಿವಾಚಾರ್ಯರ 90ನೇ ಪುಣ್ಯಸಂಸ್ಮರಣೋತ್ಸವ ಉದ್ಘಾಟಿಸಿ ಶ್ರೀಗಳು ಆಶೀರ್ವಚನ ನೀಡಿದರು.

‘ಸಂಘ ಹಲವು ಶಾಲಾ, ಕಾಲೇಜು, ವಿದ್ಯಾಲಯಗಳನ್ನು ಸ್ಥಾಪಿಸಿ ಇಂದು ಹೆಮ್ಮರವಾಗಿ ಬೆಳೆದಿದ್ದು, ಆ ಮೂಲಕ ಮಕ್ಕಳ ಭವಿಷ್ಯ ಉಜ್ವಲಗೊಳಿಸುವಲ್ಲಿ ನಿರತವಾಗಿದೆ’ ಎಂದರು.

ಗಡಿನಾಡ ಸಾಹಿತಿ ನಾ.ಮ. ಮರುಳಾರಾಧ್ಯ ಮಾತನಾಡಿ, ಸನಾತನ ಸಂಸ್ಕೃತಿಯಲ್ಲಿ ಗುರು-ಹಿರಿಯರನ್ನು, ಪ್ರಾಜ್ಞರನ್ನು ಗೌರವಿಸುವ ಪರಂಪರೆ ಉದಾತ್ತವಾಗಿ ಬೆಳೆದು ಬಂದಿದೆ. ಎಲ್ಲರಿಗಿಂತ ಕಿರಿಯ ನಾನೆಂಬ ಮನೋಭಾವ ಪ್ರತಿಯೊಬ್ಬರಲ್ಲೂ ನೆಲೆಗೊಂಡಾಗ, ಅಹಂ ನಾಶಗೊಂಡು ಭಗವಂತನನ್ನು ಕಾಣಲು ಸಾಧ್ಯವಾಗುತ್ತದೆ. ಜೀವನದಲ್ಲಿ ಧನಾತ್ಮಕ ಚಿಂತನೆಗಳು ಬೆಳೆದಷ್ಟು ಸತ್ಕರ್ಮಗಳು ಹೆಚ್ಚಿ ಪುಣ್ಯ ಪ್ರಾಪ್ತಿಯಾಗುವುದು ಎಂದು ಹೇಳಿದರು.

ನಾ.ಮ. ಜಗದೀಶ ಗವಾಯಿಗಳ ವಚನ ಗಾಯನಕ್ಕೆ ಅಂಬಣ್ಣ ತಬಲಸಾಥ್ ನೀಡಿದರು. ಇದಕ್ಕು ಮುನ್ನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಬೃಹನ್ಮಠದ ನಾ.ಮ. ಬಸವರಾಜತಾತ ಅವರ 90ನೇ ಜನ್ಮದಿನ ಅಂಗವಾಗಿ ಭಕ್ತರು ಸತ್ಕರಿಸಿದರು.

ಶ್ರೀಮಠದ ಪ್ರಮುಖರಾದ ಎನ್.ಎಂ. ಶ್ರೀಕಂಠಯ್ಯತಾತ, ನಿವೃತ್ತ ವೈದ್ಯ ಮಲ್ಲಿಕಾರ್ಜುನ ಸ್ವಾಮಿ, ಕಲಿಗಣನಾಥ, ನಾಗರಹಾಳು ಚಂದ್ರಗೌಡ, ಗಿರೀಶಗೌಡ, ಬಿ.ಎಂ ಸೂಗೂರು ಚಂದ್ರಶೇಖರ, ಕುಂಟನಹಾಳು ಮಂಜುನಾಥಗೌಡ, ಶಿವಕುಮಾರ, ಸಿರುಗುಪ್ಪ ಜಂಗಮ ಸಂಘದ ಮಹಾಂತೇಶ ಹಳೇಕೋಟೆ ಸೇರಿದಂತೆ ಭಕ್ತರು ಹಾಜರಿದ್ದರು.

ಬಳಿಕ ಅನ್ನಸಂತರ್ಪಣೆ ಜರುಗಿತು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*