LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ತಲೆಬುರುಡೆ ಕೇಸ್‌ಗೆ ನಯಾ ಟ್ವಿಸ್ಟ್‌; ಕೇರಳದ ಕಮ್ಯೂನಿಷ್ಟ್‌ ಎಮ್‌ಪಿ ಸಂತೋಷಕುಮಾರ್‌ಗೆ ಸಂಕಷ್ಟ

ಮಂಗಳೂರು, ಸೆಪ್ಟೆಂಬರ್ 6: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೆ ಎಂದು ಮಾಸ್ಕ್​ಮ್ಯಾನ್ ಚಿನ್ನಯ್ಯ ತಂದಿದ್ದ ತಲೆಬುರುಡೆ ಪ್ರಕರಣದಲ್ಲಿ ಇದೀಗ ಕೇರಳದ ಕಮ್ಯೂನಿಸ್ಟ್  ಸಂಸದ ಸಂತೋಷ್ ಕುಮಾರ್​ಗೆ ಸಂಕಷ್ಟ ಎದುರಾಗಿದೆ. ತಲೆಬುರುಡೆಯನ್ನು ತೆಗೆದುಕೊಂಡು ಆರೋಪಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ ಕೇರಳದ ಸಂಸದನ ಬಳಿ ತೆರಳಿ ಅವರ ಮುಂದೆ ವಿಚಾರ ಪ್ರಸ್ತಾಪಿಸಿತ್ತು ಎಂಬ ಸ್ಫೋಟಕ ಮಾಹಿತಿ ಎಸ್​​ಐಟಿ ತನಿಖೆ ವೇಳೆ ತಿಳಿದು ಬಂದಿರುವುದಾಗಿ ಮೂಲಗಳು ತಿಳಿಸಿವೆ. ಇದರೊಂದಿಗೆ ಪ್ರಕರಣಕ್ಕೆ ಇದೀಗ ಮತ್ತೊಂದು ತಿರುವು ದೊರೆತಂತಾಗಿದೆ.

ಏತನ್ಮಧ್ಯೆ, ತಲೆಬುರುಡೆಯನ್ನು ಕೊಟ್ಟಿದ್ದು ಜಯಂತ್. ತಾನು ಅದನ್ನು ಧರ್ಮಸ್ಥಳದಿಂದ ತಂದೇ ಇಲ್ಲವೆಂದು ಚೆನ್ನಯ್ಯ ಎಸ್​ಐಟಿ ಮುಂದೆ ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ಆದರೆ, ಜಯಂತ್ ಮಾತ್ರ ಬುರುಡೆಯನ್ನು ಗಿರೀಶ್ ಮಟ್ಟಣ್ಣನವರ್ ಕೊಟ್ಟಿದ್ದು ಎಂದಿದ್ದಾರೆ. ಮಟ್ಟಣನವರ್ ನಿರಾಕರಿಸಿದ್ದಾರೆ. ಈ ಎಲ್ಲ ಬೆಳವಣಿಗೆ ಮಧ್ಯೆ ಕೇರಳ ಸಂಸದನ ಹೆಸರು ಪ್ರಕರಣದಲ್ಲಿ ತಳಕುಹಾಕಿಕೊಂಡಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ