ಮುಡಾ ಹಗರಣಕ್ಕೆ ತನಿಖೆಯಲ್ಲಿ ರಾಜಕಾರಣಿಗಳ ಪ್ರಭಾವಕ್ಕೆ ಒಳಗಾಗಿ ಕ್ರಮ ಕೈಗೊಂಡಿಲ್ಲ. ಸುಳ್ಳು ದಾಖಲೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಲೋಕಾಯುಕ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮನೀಶ್ ಖರ್ಬಿಕರ್, ಪೊಲೀಸ್ ಮಹಾ ನಿರೀಕ್ಷಕ ಸುಬ್ರಹ್ಮಣೇಶ್ವರರಾವ್, ಮೈಸೂರು ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ವಿರುದ್ಧ ದೂರು ನೀಡಿದ್ದಾರೆ.
ಭ್ರಷ್ಟ ರಾಜಕಾರಣಿ ಹಾಗೂ ಹಾಲಿ ಸಿಎಂ ಸಿದ್ದರಾಮಯ್ಯನವರ ಪ್ರಭಾವಕ್ಕೆ ಒಳಗಾಗಿ, ಸಾಮಾನ್ಯ ತಿಳುವಳಿಕೆ ಇಲ್ಲದವರಂತೆ ನಡೆದುಕೊಂಡಿರುವ ಬಗ್ಗೆ ವಿಚಾರಣೆ ನಡೆಸಿ, ಇವರಿಗೆ ನಿಜವಾಗಿಯೂ ಸಾಮಾನ್ಯ ಜ್ಞಾನ ಎಂಬುದು ಇಲ್ಲವೆ? ಅಥವಾ ಪ್ರಭಾವಕ್ಕೆ ಒಳಗಾಗಿ ತಮ್ಮ ಭೌದ್ಧಿಕತೆಯನ್ನು ಭ್ರಷ್ಟರಿಗೆ ಅರ್ಪಣೆ ಮಾಡಿರುತ್ತಾರೆಯೆ?ಇಂತಹವರಿಂದ ಭ್ರಷ್ಟಚಾರ, ಅಕ್ರಮ, ಅನ್ಯಾಯಗಳನ್ನು ತಡೆಯಲು ಸಾಧ್ಯವೆ? ಇಂತಹ ಅಧಿಕಾರಿಗಳು ಐ.ಪಿ.ಎಸ್.ಅಧಿಕಾರಿಗಳಾಗಿ ಮುಂದುವರೆಯುವುದು ಸೂಕ್ತವೆ? ಎಂಬುದನ್ನು ಖಚಿತಪಡಿಸಿಕೊಂಡು ಇವರುಗಳ ವಿರುದ್ದ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ದೂರು ನೀಡಿದ್ದಾರೆ.