Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ರೈಸ್ತರ ಸ್ಮಶಾನ ಸ್ಥಳ  ಅತಿಕ್ರಮಣ  ಡಯಾಸಿಸ್ ಸಂಘದಿಂದ ಡಿ.ಸಿ ಗೆ ದೂರು 



ಬಳ್ಳಾರಿ, ಮಾ.28: ಕ್ರೈಸ್ತ ಜನಾಂಗದ ಸ್ಮಶಾನಕ್ಕಾಗಿ ಕಾಯ್ದಿರಿಸಿದ ಸರ್ಕಾರಿ ಜಾಗದಲ್ಲಿ ರಿಯಲ್ ಎಸ್ಟೇಟ್ ಮಾಫಿಯಾ ಗಳು  ಅತಿಕ್ರಮಣವನ್ನು ನಡೆಸುತ್ತಿದ್ದು ಅತಿಕ್ರಮಣಕಾರರನ್ನು  ತಕ್ಷಣ  ತೆರವುಗೊಳಿಸಿ ಕ್ರೈಸ್ತ ಸಮುದಾಯದ ಸ್ಮಶಾನವನ್ನು ರಕ್ಷಿಸಬೇಕೆಂದು  ಜಿಲ್ಲಾಧಿಕಾರಿಗಳಿಗೆ

ನಗರದ  ಡಯಾಸಿಸ್ ಕ್ಯಾಥೋಲಿಕ್ ಸಂಘದ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು.


 ದೂರು ಮನವಿಯನ್ನು ಸಲ್ಲಿಸಿ ಮಾತನಾಡಿದ ಜೆರಾಲ್ಡ್, 2011ರಲ್ಲಿ ಕ್ರೈಸ್ತ ಸಮುದಾಯದ ಸ್ಮಶಾನಕ್ಕಾಗಿ ಅಂದಿನ ಜಿಲ್ಲಾಧಿಕಾರಿ ನಕುಲ್ ಅವರಿಗೆ ಅರ್ಜಿಯನ್ನು ಸಲ್ಲಿಸಿಕೊಳ್ಳಲಾಗಿತ್ತು   ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ, 2012ರಲ್ಲಿ ಜಿಲ್ಲಾಧಿಕಾರಿಗಳು ಬಳ್ಳಾರಿ ನಗರದ 29ನೇ ವಾರ್ಡಿನ ಟಿ.ಎಸ್. ನಂ. 956/1ರಲ್ಲಿ 1.53 ಎಕರೆ ಜಾಗವನ್ನು ಸ್ಮಶಾನಕ್ಕಾಗಿ ಮಂಜೂರು ಮಾಡಿದ್ದರು.

ಆದರೆ ನಂತರ ಈ ಜಾಗದಲ್ಲಿ ಕೆಲವರು ಅಕ್ರಮವಾಗಿ ಮನೆಗಳು ಹಾಗೂ ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸಿಕೊಂಡು ಸ್ಮಶಾನದ ಜಾಗವನ್ನು ಅತಿಕ್ರಮಿಸಿಕೊಂಡಿರುತ್ತಾರೆ  2014ರಿಂದ ಈ ಕುರಿತು ಸಂಬಂಧಿಸಿದ  ಅಧಿಕಾರಿಗಳಿಗೆ ದೂರು ನೀಡಲಾಗುತ್ತಿದೆ. ಆದರೆ ಅಧಿಕಾರಿಗಳಿಂದ ಯಾವುದೇ ಚಕಾರಾತ್ಮಕ ಸ್ಪಂದನೆ ದೊರೆತಿರುವುದಿಲ್ಲ ಮತ್ತು 2015 ಮತ್ತು 2017ರಲ್ಲಿ ಕೂಡ ಅತಿಕ್ರಮಣ ತೆರವುಗೆ ಆದೇಶಗಳಿದ್ದರೂ, ನಮ್ಮ ಸಮಸ್ಯೆಯನ್ನು ಪರಿಹರಿಸಲು ಯಾರು ಮುಂದಾಗಿಲ್ಲ ಎಂದು ಜೆರ್ರಿ  ಬೇಸರವನ್ನು ವ್ಯಕ್ತಪಡಿಸಿದರು.


2017ರಲ್ಲಿ 14 ಜನರಿಗೆ ತಾತ್ಕಾಲಿಕವಾಗಿ ನೀಡಿದ್ದ ಮಂಜೂರಾತಿಯನ್ನು ಜಿಲ್ಲಾಧಿಕಾರಿಗಳು ರದ್ದುಪಡಿಸಿದರೂ, ಅಕ್ರಮ ನಿರ್ಮಾಣಗಳು ಮುಂದುವರಿದಿವೆ. 2019ರಲ್ಲಿ ಕೆಲವು ಮನೆಗಳನ್ನು ತೆರವುಗೊಳಿಸಿದರೂ, ಮತ್ತೆ ಅತಿಕ್ರಮಣ ಹೆಚ್ಚಾಗಿದೆ.


ಇದರಿಂದಾಗಿ 2022 ಮತ್ತು 2025ರಲ್ಲಿ ಪುನಃ ಅರ್ಜಿಗಳನ್ನು ಸಲ್ಲಿಸಿದರೂ ಫಲ ಕಂಡಿಲ್ಲ. ಇತ್ತೀಚೆಗೆ 2026 ಮಾರ್ಚ್ 23ರಂದು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಅತಿಕ್ರಮಣ ತಡೆಯಲು ಪ್ರಯತ್ನಿಸಿದ ವೇಳೆ ನಮ್ಮ ಸಂಘದ ಪದಾಧಿಕಾರಿಗಳ ಮೇಲೆ ದೌರ್ಜನ್ಯ ಏಸಗಲಾಗಿದೆ   ಎಂದು  ಆರೋಪಿಸಿದ್ದಾರು.

ಹೀಗಾಗಿ, ತಕ್ಷಣ ಅತಿಕ್ರಮಣ ತೆರವುಗೊಳಿಸಿ, ಸ್ಮಶಾನ ಜಾಗವನ್ನು ರಕ್ಷಿಸುವಂತೆ ಧರ್ಮಗುರುಗಳು ಹಾಗೂ ಕ್ರೈಸ್ತ ಸಮುದಾಯದ ಮುಖಂಡರು ಅಧಿಕಾರಿಗಳಿಗೆ ವಿನಂತಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ