Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇಶದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ:  ಸುಭಾಷ ಪಾಟೀಲ

ಬೆಳಗಾವಿ.ದೇಶದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಹಾಗೂ ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಹೇಳಿದರು .
     ಅವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾ ಅಭಿಯಾನ- 2026  ಅಂಗವಾಗಿ ಖಾನಾಪೂರ ತಾಲೂಕಿನ ಜಾಂಬೋಟಿ ಹತ್ತಿರದ ಕೈವಲ್ಯಂ ಯೋಗ ರಿಟ್ರೀಟ್ ಸೆಂಟರ್ ದಲ್ಲಿ ನಡೆದ ಬಿಜೆಪಿ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗದ ಎರಡು ದಿನಗಳ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಯಾವುದೇ ಪಕ್ಷಗಳು ಸರ್ಕಾರ ನಡೆಸುವುದು ಮುಖ್ಯವಲ್ಲ, ಸರ್ಕಾರ ನಡೆಸುವ ಸಂದರ್ಭದಲ್ಲಿ ಪಕ್ಷದ ವಿಚಾರಧಾರೆ ದೇಶದ ಅಭಿವೃದ್ಧಿ ಸಿದ್ದಾಂತಗಳು ಮುಖ್ಯ ಇಡೀ ವಿಶ್ವದಲ್ಲಿ ಭಾರತ ದೇಶದ ಛಾಪನ್ನು ಮೂಡಿಸಿರುವ ಬಿಜೆಪಿ ಕೇಂದ್ರ ಸರ್ಕಾರ ರಾಷ್ಟ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದೆ ಎಂದು ಹೇಳಿದರು ಶಾಸಕ ವಿಠ್ಠಲ ಹಲಗೇಕರ ಮಾಜಿ ಶಾಸಕರಾದ ಮಹಾಂತೇಶ ದೊಡ್ಡಗೌಡರ  ಮಾತನಾಡಿ ವಿಚಾರಧಾರೆ ಸಿದ್ದಾಂತಗಳು ಇಲ್ಲದೆ ದಿಢೀರನೆ ಸರಕಾರವನ್ನು ಸ್ಥಾಪಿಸಿದ್ದ ಆಪ್, ಮತ್ತಿತರ ಪಕ್ಷಗಳ ಇತ್ತೀಚಿನ ಬೆಳವಣಿಗೆಗಳನ್ನು ಕಂಡಾಗ ಇವುಗಳು ಕೇವಲ ಕೆಲವೇ ವರ್ಷಗಳಿಗೆ ಮಾತ್ರ ಸೀಮಿತ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.  ವ್ಯಕ್ತಿಗಿಂತ ಪಕ್ಷ ಶ್ರೇಷ್ಠ ಪಕ್ಷಕ್ಕಿಂತ ದೇಶ ಪ್ರಮುಖವಾಗಿದೆ ಪಕ್ಷದ ಕಾರ್ಯಕರ್ತರಲ್ಲಿ ಅಭ್ಯಾಸ ವರ್ಗ ಕಾರ್ಯ ವೈಖರಿ ಜವಾಬ್ದಾರಿ ನೆನಪಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕಾಗಿದೆ. ಈ ಮೂಲಕ ತಳಮಟ್ಟದಲ್ಲಿ ಕಾರ್ಯಕರ್ತರ ಜವಾಬ್ದಾರಿಯನ್ನು ತಿಳಿ ಹೇಳುವುದು ಪ್ರತಿಯೊಬ್ಬರ ಹೊಣೆಯಾಗಿದೆ ಎಂದು ಹೇಳಿದರು ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಅರವಿಂದ ಪಾಟೀಲ, ಚಂದ್ರಶೇಖರ ಕವಟಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ ದೇಶಪಾಂಡೆ, ಮಲ್ಲಿಕಾರ್ಜುನ ಮಾದಮ್ಮನವರ, ಧನಶ್ರೀ ದೇಸಾಯಿ, ಪ್ರಕೋಷ್ಠಗಳ ಸಂಯೋಜಕ ಮಹೇಶ್ ಮೋಹಿತೆ, ಜಿಲ್ಲಾ ಉಪಾಧ್ಯಕ್ಷರಾದ ಪ್ರಮೋದ್ ಕೊಚೇರಿ,ವಿನಯ ಕದಂ, ಮಂಡಲ ಅಧ್ಯಕ್ಷ ಬಸವರಾಜ ಸಾಣಿಕೊಪ್ಪ, ಮುಖಂಡರಾದ ಸಂಜಯ ಕುಬಲ, ಪ್ರಶಾಂತ್ ಅಮ್ಮಿನಭಾವಿ ಹಾಗೂ ಪ್ರಮುಖರಿದ್ದರು

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*