Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸವ ಜಯ ಮೃತ್ಯುಂಜಯ ಶ್ರೀಗಳ ಮೇಲೆ  ಸುಳ್ಳು ಆರೋಪಕ್ಕೆ ಖಂಡನೆ.

ಬೆಳಗಾವಿ.ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧಿಪತಿಗಳಾದ ಶ್ರೀ ಬಸವಜಯಮೃತ್ಯುಂಜಯ ಮಹಾಸ್ವಾಮಿಜಿಯವರ ಮೇಲೆ ಸುಳ್ಳು ಆರೋಪ ಖಂಡಿಸಿ ಪತ್ರಿಕಾಗೋಷ್ಠಿ

ಇತ್ತೀಚಿನ ಖಾಸಗಿ ಸುದ್ದಿವಾಹಿನಿಯಲಿ ಒಬ್ಬ ಮಹಿಳೆಯನ್ನು ಬಳಸಿಕೊಂಡು ಪೂಜ್ಯರ ಮೇಲೆ ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಮಾಡಿ ಪೂಜ್ಯರ ತೋಜೋವಧೆ ಮಾಡಲಾಗಿತ್ತು. ಇದು ಪೂಜ್ಯರ ವಿರುದ್ಧ ಪಂಚಮಸಾಲಿ ಸಮಾಜದಲ್ಲಿ ಅಗೌರವವನ್ನುಂಟು ಮಾಡುವ ವ್ಯವಸ್ಥಿತ ಪಿತೂರಿಯಾಗಿತ್ತು.

ಪೂಜ್ಯರು ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿದ್ದ ಕಾರಣ ಇದು ಕೆಲವರಿಗೆ ಸಹನೆಯಾಗುತ್ತಿಲ್ಲ. ಸಮಾಜ ಮತ್ತು ಪೂಜ್ಯರ ಮನೋಭಲವನ್ನು ಕುಗ್ಗಿಸಲು ವ್ಯವಸ್ಥಿತ ಷಡ್ಯಂತ್ರ ನಡೆಸಲಾಗಿದೆ, ಈ ಸಂಚಿನ ಹಿಂದೆ ಒಬ್ಬ ರಾಜಕೀಯ ಪ್ರಭಾವಿ ನಾಯಕನಿದ್ದು ಅವರು ಯಾರು ಎಂಬುದು ಈಗಾಗಲೇ ಬಹಿರಂಗಗೊಂಡಿದೆ. ಈ ಪ್ರಕರಣದಲ್ಲಿ ಯಾವ ಮಹಿಳೆಯನ್ನು ಬಳಸಿಕೊಂಡು ಸುಳ್ಳು ಲೈಂಗಿಕ ದೌರ್ಜನ್ಯದ ಆರೋಪ ಮಾಡಲಾಗಿತ್ತೋ, ಈಗ ಅದೇ ಸಂತ್ರಸ್ತ ಮಹಿಳೆ ಸಾಮಾಜಿಕ ಜಾಲ ತಾಣದ ಮುಂದೆ ಬಂದು ಇದು ಎಲ್ಲ ಸುಳ್ಳು ಈ ಪ್ರಕರಣದಲ್ಲಿ ನನ್ನನ್ನು ಬಳಸಿಕೊಂಡು ಈ ರೀತಿ ಪೂಜ್ಯರ ತೇಜೋವಧೆ ಮಾಡುಲಾಗುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಯಾವುದೇ ರೀತಿ ಲೈಂಗಿಕ ದೌರ್ಜನ್ಯವಾಗಿಲ್ಲವೆಂದು ಮಹಿಳೆ ಸ್ಪಷ್ಟವಾಗಿ ತಿಳಿಸಿದ್ದಾರೆ.

ಪಂಚಮಸಾಲಿ ಸಮಾಜದ ಪೂಜ್ಯರ ಭಕ್ತ ಸಮುದಾಯ ಆಕ್ರೋಶಗೊಂಡಿದ್ದು ಇದನ್ನು ಖಂಡಿಸಿ ಈ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆ ಹಾಗೂ ಪೂಜ್ಯರಿಗೆ ನ್ಯಾಯ ಸಿಗಬೇಕು ಮತ್ತು ಈ ಪ್ರಕರಣದ ಹಿಂದೆ ಕೈವಾಡ ಇರುವ ವ್ಯಕ್ತಿಯನ್ನು ಬಂಧಿಸಬೇಕು ಎಂದು ಅಗ್ರಹಿಸಿ, ತಾಲೂಕಾಮಟ್ಟದಲ್ಲಿ ಬೃಹತ್‌ ಪ್ರತಿಭಟನೆ ಮಾಡಲು ಪಂಚಮಸಾಲಿ ಸಮುದಾಯ ಸಿದ್ದಗೊಂಡಿದೆ ಎಂದು ಗೋಕಾಕ ತಾಲೂಕಿನ ಘಟಕದ ಅಧ್ಯಕ್ಷರಾದ  ಗಂಗಾಧರ ಬಡಕುಂದ್ರಿ (ವಕೀಲರು ) ಘಟಪ್ರಭಾ ಇವರು ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ಮೂಲಕ ತಿಳಿಸಿದ್ದಾರೆ.

ಈ ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಹಿರಿಯಾರಾದ  ಕಲ್ಲಪ್ಪಕೊಂಕಣಿ,  ಕೆಂಚಪ್ಪಾಪಾಟೀಲ,

 ಮಾರುತಿ ಶಿಂದ್ರಿ, ಪಿಕೆಪಿಎಸ್ ಅಧ್ಯಕ್ಷರಾದ  ಮುತ್ತಣ ಹತ್ತರವಾಟ, ಬಾಬು ಬಡಕುಂದ್ರಿ,  ಅಪ್ಪಾಜಿ ಹುದ್ದಾರ,  ಮಾರುತಿ ಇಂಗಳಿ,  ಶಿವರಾಜ ಬಡಕುಂದ್ರಿ, ಪತ್ರಕರ್ತರಾದ  ವಿವೇಕಾನಂದ ಹುದ್ದಾರ,  ಭೀಮಪ್ಪಾ ಮದಿಹಳ್ಳಿ, ಶಿವಕುಮಾರ ಹತ್ತರವಾಟ,  ಭೀಮಪ್ಪಾಬನನ್ನವರ ಹಾಗೂ  ಕೆಂಪಣ್ಣಾಹತ್ತರವಾಟ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ