Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಡುಗೆ ಅನಿಲ ಸಿಲಿಂಡರ್ ದರ ಏರಿಕೆಗೆ ಖಂಡನೆ

ಎಸ್‌ಯುಸಿಐ(ಸಿ) ರಾಜ್ಯ ಕಾರ್ಯದರ್ಶಿಗಳಾದ ಶ್ರೀಮತಿ ಕೆ. ಉಮಾ ಅವರು ನೀಡಿರುವ ಹೇಳಿಕೆ


ಕೇಂದ್ರ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗೃಹಬಳಕೆಯ ಅನಿಲ ಸಿಲಿಂಡರ್‌ಗೆ ರೂ. 60/ ಮತ್ತು ವಾಣಿಜ್ಯ ಬಳಕೆಯ ಸಿಲಿಂಡರ್‌ಗೆ ರೂ. 114/ ಹೆಚ್ಚಳ ಮಾಡಿರುವ ಕ್ರಮವನ್ನು ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷವು ತೀವ್ರವಾಗಿ ಖಂಡಿಸುತ್ತದೆ.


ಅಮೆರಿಕಾ ಮತ್ತು ಇಸ್ರೇಲ್, ಇರಾನ್ ಮೇಲೆ ದಾಳಿ ನಡೆಸಿದ ಪರಿಣಾಮವಾಗಿ, ಭಾರತಕ್ಕೆ ಕಚ್ಚಾತೈಲ ಹಾಗೂ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವುದೇ ಈ ಬೆಲೆ ಏರಿಕೆಗೆ ಕಾರಣ ಎಂದು ಹೇಳಲಾಗಿದೆ.


ಆದರೆ ಈ ಕುರಿತು ಕೇಂದ್ರ ಬಿಜೆಪಿ ಸರ್ಕಾರವು ಕೆಲವು ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ. ರಷ್ಯಾದಿಂದ ರಿಯಾಯಿತಿ ದರದಲ್ಲಿ ಕಚ್ಚಾತೈಲ ಖರೀದಿಸುತ್ತಿದ್ದಾಗ, ಅದರ ಪ್ರಯೋಜನವನ್ನು ಗ್ರಾಹಕರಿಗೆ ವರ್ಗಾಯಿಸಲಿಲ್ಲ ಏಕೆ? ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವಂತೆ ಅಮೆರಿಕಾ ಹಾಕಿದ ಒತ್ತಡಕ್ಕೆ ಮಣಿದಿರುವುದು ಯಾರ ಹಿತಾಸಕ್ತಿಗಾಗಿ? ಇನ್ನು 50 ದಿನಗಳಿಗೆ ಬೇಕಾದಷ್ಟು ಕಚ್ಚಾತೈಲ ಇದೆ ಎಂಬ ವರದಿ ಇರುವಾಗ ಹಳೆಯ ದರದಲ್ಲಿ ಖರೀದಿಸಿದ ಇದರ ಬೆಲೆ ಈಗಲೇ ಏರಿಕೆ ಮಾಡಿರುವುದು ಯಾಕಾಗಿ?

ಈಗಾಗಲೇ ಜನರ ಜೀವನ ವೆಚ್ಚ ಅತಿಯಾಗಿದೆ. ಅದೇ ಪ್ರಮಾಣದಲ್ಲಿ ವೇತನ ಹೆಚ್ಚಳ ಅಥವಾ ಉದ್ಯೋಗ ಸೃಷ್ಟಿ ಆಗಿಲ್ಲ. ದುಡಿಯುವ ಜನ ಸಾಲ ಮಾಡಿಯೇ ಬದುಕಬೇಕಾದ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ಇಂಧನ ದರ ಹೆಚ್ಚಳ ಮಾಡಿದಲ್ಲಿ ಅದು ಇನ್ನಷ್ಟು ಹಣದುಬ್ಬರಕ್ಕೆ ಕಾರಣವಾಗಲಿದೆ ಎಂಬ ಕನಿಷ್ಠ ತಿಳಿವಳಿಕೆ ಈ ಸರ್ಕಾರಕ್ಕೆ ಇರಬೇಕು.


 ಯುದ್ಧದ ಸಂಕಷ್ಟದಲ್ಲೂ ಜನರನ್ನು ದೋಚಬೇಕೆಂಬ ಕೇಂದ್ರ ಸರ್ಕಾರದ ಈ ಅಮಾನವೀಯ ಧೋರಣೆಯನ್ನು ಎಸ್‌ಯುಸಿಐ(ಸಿ) ಕಟುವಾಗಿ ವಿರೋಧಿಸುತ್ತದೆ. ತಕ್ಷಣವೇ ಈ ದರ ಏರಿಕೆಯನ್ನು ವಾಪಸ್ ಪಡೆಯಬೇಕು, ಕಚ್ಚಾತೈಲ ಖರೀದಿಗೆ ಪರ್ಯಾಯ ಮೂಲಗಳನ್ನು ತೀರ್ಮಾನಿಸುವ ಸಾರ್ವಭೌಮತ್ವವನ್ನು ಸರ್ಕಾರ ಉಳಿಸಿಕೊಳ್ಳಬೇಕು ಎಂದು ಒತ್ತಾಯಿಸುತ್ತದೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*