LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕಾಂಗ್ರೆಸ್​ ನಿಯೋಗ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು, ಏಪ್ರಿಲ್ 25: ಒಬಿಸಿ ಕೋಟಾಕ್ಕೆ ಮುಸ್ಲಿಮರನ್ನು ಸೇರಿಸುವ ಮೂಲಕ ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕಿದ್ದ ದೊಡ್ಡ ಪಾಲನ್ನು ಕಿತ್ತುಕೊಳ್ಳಲಾಗಿದೆ. ಈ ವಿಧಾನವನ್ನು ದೇಶದಾದ್ಯಂತ ಜಾರಿಗೆ ತರಲು ಕಾಂಗ್ರೆಸ್​ ಯೋಜಿಸಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ  ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ , ನರೇಂದ್ರ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಇಂದು (ಏಪ್ರಿಲ್ 25) ಮಾಜಿ ಸಂಸದ ವಿಎಸ್ ಉಗ್ರಪ್ಪ ಅವರ ನೇತೃತ್ವದ ಕಾಂಗ್ರೆಸ್​ ನಿಯೋಗ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ದೂರು ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಉಗ್ರಪ್ಪ, ನರೇಂದ್ರ ಮೋದಿ ಮಾನಸಿಕ ಸ್ಮಿತೆ ಕಳೆದುಕೊಂಡಿದ್ದಾರೆ. ರಾಜಸ್ಥಾನದ ಚುನಾವಣಾ ರ್ಯಾಲಿ ಭಾಗಿ ಆಗಿದ್ದಾಗ ಈ ರೀತಿ ಮಾತನಾಡಿದ್ದಾರೆ. ದೇಶದ ಆಸ್ತಿ ಸರ್ವೆ ಮಾಡುತ್ತಾರೆ ಎಂದು ಮಾತನಾಡಿದ್ದಾರೆ.

ಸಾವನ್ನಪ್ಪಿದ ಮೇಲೆ ಅವರ ಆಸ್ತಿಗಳನ್ನು ಹಂಚಿಕೆ ಮಾಡುತ್ತಾರೆ ಎಂದು ಹೇಳಿದ್ದಾರೆ. ದಲಿತರ ಮೀಸಲಾತಿಯನ್ನು ಕಡಿತ ಮಾಡಿ ಮುಸ್ಲಿಮರಿಗೆ ಕೊಡುತ್ತಾರೆ ಎಂದು ಆರೋಪಿಸಿದ್ದಾರೆ. ಸಂವಿಧಾನ ಆಧಾರದ ಮೇಲೆ ನಾವು ಮೀಸಲಾತಿ ಕೊಡುವುದು ಮಾಡಿದ್ದೇವೆ. ಸಂವಿಧಾನದ ವಿರುದ್ಧ ನಾವು ಯಾವುದು ಮಾಡಿಲ್ಲ. ಯಾರ ಆಸ್ತಿಯನ್ನು ಸರ್ವೆ ಮಾಡಲು ನಾವು ಪ್ರಣಾಳಿಕೆಯಲ್ಲೂ ಕೊಟ್ಟಿಲ್ಲ. ಈ ಹಿನ್ನಲೆ ಪ್ರಧಾನಿ ಮೋದಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿಕೊಳ್ಳಬೇಕು. ಅಲ್ಲದೇ ಮೋದಿ ಅವರನ್ನು ಚುನಾವಣಾ ಪ್ರಚಾರದಿಂದ ಕೈ ಬಿಡಬೇಕು ಎಂದು ಆಗ್ರಹಿಸಿದರು.

ಲೋಕಸಭಾ ಚುನಾವಣಾ ಪ್ರಚಾರದ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ನವರು ನಿಮ್ಮ ಆಸ್ತಿ, ನಿಮ್ಮ ಸಂಪತ್ತು, ನಿಮ್ಮ ಚಿನ್ನವನ್ನ ಕಸಿದುಕೊಳ್ಳುತ್ತಾರೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಮತ್ತೊಂದು ಬಾಣ ಬಿಟ್ಟ ಮೋದಿ, ಎಸ್‌ಸಿ-ಎಸ್‌ಟಿ, ಒಬಿಸಿ ಕೋಟಾದಲ್ಲಿರುವ ಮೀಸಲಾತಿಯನ್ನ ಕದ್ದು ಧರ್ಮ ಆಧಾರದಲ್ಲಿ ನೀಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದು, ಇದಕ್ಕೆ ಕರ್ನಾಟಕವನ್ನೇ ಉದಾಹರಣೆಯಾಗಿ ಕೊಟ್ಟಿದ್ದರು.

ಒಬಿಸಿ ಮೀಸಲಾತಿಯಡಿ ಎಲ್ಲಾ ಮುಸ್ಲಿಂ ಜಾತಿಗಳನ್ನು ಸೇರಿಸುವ ಮೂಲಕ ಹಿಂಬಾಗಿಲಿನ ಮೂಲಕ ಕರ್ನಾಟಕದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಕಾಂಗ್ರೆಸ್ ಮುಂದಾಗಿದೆ. ನಿಮ್ಮ ಭವಿಷ್ಯ ಪೀಳಿಗೆಯನ್ನು ಸಂಪೂರ್ಣವಾಗಿ ನಾಶಪಡಿಸಲು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು.

ಒಬಿಸಿ ಸಮುದಾಯದ ದೊಡ್ಡ ಶತ್ರು ಎಂದರೆ ಅದು ಕಾಂಗ್ರೆಸ್, ಒಬಿಸಿಗಳ ಹಕ್ಕುಗಳನ್ನು ಕಸಿದುಕೊಳ್ಳುವ ಮೂಲಕ ಸಾಮಾಜಿಕ ನ್ಯಾಯವನ್ನು ಕೊಲೆ ಮಾಡಿದೆ, ಸಂವಿಧಾನದ ಆಶಯವನ್ನು ಉಲ್ಲಂಘಿಸಿ ಅಂಬೇಡ್ಕರ್ ಅವರನ್ನು ಅವಮಾನಿಸಿದೆ ಎಂದು ಕಿಡಿಕಾರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್