Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಲ್ಲಾ ವಲಯಗಳಲ್ಲೂ ಕಾಂಗ್ರೆಸ್ ಸರ್ಕಾರ ವಿಫಲ: ಆರ್.ಅಶೋಕ್ ವಾಗ್ದಾಳಿ

ಮೈಸೂರು,17: : ಮುಂಬರುವ ವಿಧಾನ ಪರಿಷತ್ ಚುನಾವಣೆ ಪ್ರತಿಷ್ಠೆಯ ಕದನವಾಗಿದ, ರಾಜ್ಯದಲ್ಲಿನ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಸೋಲಿಸುವ ಗುರಿ ಹೊಂದಿದ್ದೇವೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಗುರುವಾರ ಹೇಳಿದರು.

ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮಾತನಾಡಿದ ಅವರ, ಮೇಲ್ಮನೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬಹುಮತ ಹೊಂದಿರುವುದ್ದು ಹಾಗೂ ಎಲ್ಲಾ ವಲಯಗಳಲ್ಲೂ ಕಾಂಗ್ರೆಸ್ ಸರ್ಕಾರ ವಿಫಲವಾಗಿರುವ ಕಾರಣ ಆ ಪಕ್ಷಕ್ಕೆ ಸೋಲು ಕಾಣವಂತೆ ಮಾಡಬೇಕಿದೆ ಎಂದು ಹೇಳಿದರು.

ಮನೆಹಾಳ ಕಾಂಗ್ರೆಸ್‌ ಒಂದು ವರ್ಷವಾದರೂ ಒಳ್ಳೆಯ ಕೆಲಸ ಮಾಡಲಿಲ್ಲ.ಮೊನ್ನೆ ನೇಹಾಳ ಹತ್ಯೆ ಆಯಿತು, ಮಣ್ಣು ಇನ್ನೂ ಆರಿಲ್ಲ. ಇದೀಗ ಮತ್ತೆ ಅಂಜಲಿ ಎನ್ನುವ ಹೆಣ್ಣು ಮಗುವಿನ ಹತ್ಯೆಯಾಗಿದೆ. ಈ ರೀತಿ ಹೆಣ್ಣು ಮಕ್ಕಳು ಹತ್ಯೆ ಆಗುತ್ತಿರೋದು ಸರ್ಕಾರ ಸಂಪೂರ್ಣ ಹದಗೆಟ್ಟಿರೋದಕ್ಕೆ ಸಾಕ್ಷಿ. ರಾಜ್ಯದಲ್ಲಿ ಪೋಲಿಸ್ ಇಲಾಖೆ ಬದುಕಿದಿಯಾ? ಸರ್ಕಾರ ಬದುಕಿದೆಯಾ ಸತ್ತಿದೆಯಾ? ಎಂದು ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ವಿರುದ್ಧ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಕಾಲುಗುಣ ಅಂತಹದ್ದು, ಅಧಿಕಾರಕ್ಕೆ ಬರುತ್ತಿದ್ದಂತೆ ರಾಜ್ಯದಲ್ಲಿ ಬರಗಾಲದ ಬಂದಿದೆ. ಸರ್ಕಾರ ಬರಗಾಲ ಸರಿಯಾಗಿ ನಿಭಾಯಿಸುತ್ತಿಲ್ಲ. ಕೇಂದ್ರ ಸರ್ಕಾರ 3545 ಕೋಟಿ ಪರಿಹಾರ ನೀಡಿದೆ. ಕೇಂದ್ರ ಸರ್ಕಾರ ಹಣಕ್ಕೊಟ್ಟರೂ ಸಿದ್ದರಾಮಯ್ಯ ಏಕೆ ಇನ್ನೂ ಬಿಡುಗಡೆ ಮಾಡುತ್ತಿಲ್ಲ ಅಂದರೆ ಸಿದ್ದರಾಮಯ್ಯ ಸರ್ಕಾರ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಎಂಟು ತಿಂಗಳಿಂದ ರೈತರ ಹಾಲಿಗೆ ಹಣವನ್ನು ಕೊಟ್ಟಿಲ್ಲ, ಆಂಬುಲೆನ್ಸ್ ಚಾಲಕರಿಗೆ ಹಣಕೊಟ್ಟಿಲ್ಲ, ಗೆಸ್ಟ್ ಲಚ್ಚರರ್ ಗೆ ವೇತನ ಕೊಟ್ಟಿಲ್ಲ. ಹೀಗೆ ಆದರೆ ಪಕ್ಕದ ಕೇರಳ ರಾಜ್ಯ ಆದ ರೀತಿ ಕರ್ನಾಟಕ ಪಾಪರ್ ಆಗುತ್ತೆ. ಪಾಕಿಸ್ತಾನದಲ್ಲಿ ಹಾಲಿನ ಬೆಲೆ, ಅಕ್ಕಿ ಬೆಲೆ, ಟೀ ಬೆಲೆ , ಗೋದಿ ಹಿಟ್ಟು ಬೆಲೆ ನೋಡಿದರೆ ಆ ಪರಿಸ್ಥಿತಿ ಸಿದ್ದರಾಮಯ್ಯ ಸರ್ಕಾರ ಬರಲಿದೆ ಎನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ