Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಲ್ಲಾ ವಲಯಗಳಲ್ಲೂ ಕಾಂಗ್ರೆಸ್ ಸರ್ಕಾರ ವಿಫಲ: ಆರ್.ಅಶೋಕ್ ವಾಗ್ದಾಳಿ

ಮೈಸೂರು,17: : ಮುಂಬರುವ ವಿಧಾನ ಪರಿಷತ್ ಚುನಾವಣೆ ಪ್ರತಿಷ್ಠೆಯ ಕದನವಾಗಿದ, ರಾಜ್ಯದಲ್ಲಿನ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಸೋಲಿಸುವ ಗುರಿ ಹೊಂದಿದ್ದೇವೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಗುರುವಾರ ಹೇಳಿದರು.

ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮಾತನಾಡಿದ ಅವರ, ಮೇಲ್ಮನೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬಹುಮತ ಹೊಂದಿರುವುದ್ದು ಹಾಗೂ ಎಲ್ಲಾ ವಲಯಗಳಲ್ಲೂ ಕಾಂಗ್ರೆಸ್ ಸರ್ಕಾರ ವಿಫಲವಾಗಿರುವ ಕಾರಣ ಆ ಪಕ್ಷಕ್ಕೆ ಸೋಲು ಕಾಣವಂತೆ ಮಾಡಬೇಕಿದೆ ಎಂದು ಹೇಳಿದರು.

ಮನೆಹಾಳ ಕಾಂಗ್ರೆಸ್‌ ಒಂದು ವರ್ಷವಾದರೂ ಒಳ್ಳೆಯ ಕೆಲಸ ಮಾಡಲಿಲ್ಲ.ಮೊನ್ನೆ ನೇಹಾಳ ಹತ್ಯೆ ಆಯಿತು, ಮಣ್ಣು ಇನ್ನೂ ಆರಿಲ್ಲ. ಇದೀಗ ಮತ್ತೆ ಅಂಜಲಿ ಎನ್ನುವ ಹೆಣ್ಣು ಮಗುವಿನ ಹತ್ಯೆಯಾಗಿದೆ. ಈ ರೀತಿ ಹೆಣ್ಣು ಮಕ್ಕಳು ಹತ್ಯೆ ಆಗುತ್ತಿರೋದು ಸರ್ಕಾರ ಸಂಪೂರ್ಣ ಹದಗೆಟ್ಟಿರೋದಕ್ಕೆ ಸಾಕ್ಷಿ. ರಾಜ್ಯದಲ್ಲಿ ಪೋಲಿಸ್ ಇಲಾಖೆ ಬದುಕಿದಿಯಾ? ಸರ್ಕಾರ ಬದುಕಿದೆಯಾ ಸತ್ತಿದೆಯಾ? ಎಂದು ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ವಿರುದ್ಧ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಕಾಲುಗುಣ ಅಂತಹದ್ದು, ಅಧಿಕಾರಕ್ಕೆ ಬರುತ್ತಿದ್ದಂತೆ ರಾಜ್ಯದಲ್ಲಿ ಬರಗಾಲದ ಬಂದಿದೆ. ಸರ್ಕಾರ ಬರಗಾಲ ಸರಿಯಾಗಿ ನಿಭಾಯಿಸುತ್ತಿಲ್ಲ. ಕೇಂದ್ರ ಸರ್ಕಾರ 3545 ಕೋಟಿ ಪರಿಹಾರ ನೀಡಿದೆ. ಕೇಂದ್ರ ಸರ್ಕಾರ ಹಣಕ್ಕೊಟ್ಟರೂ ಸಿದ್ದರಾಮಯ್ಯ ಏಕೆ ಇನ್ನೂ ಬಿಡುಗಡೆ ಮಾಡುತ್ತಿಲ್ಲ ಅಂದರೆ ಸಿದ್ದರಾಮಯ್ಯ ಸರ್ಕಾರ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಎಂಟು ತಿಂಗಳಿಂದ ರೈತರ ಹಾಲಿಗೆ ಹಣವನ್ನು ಕೊಟ್ಟಿಲ್ಲ, ಆಂಬುಲೆನ್ಸ್ ಚಾಲಕರಿಗೆ ಹಣಕೊಟ್ಟಿಲ್ಲ, ಗೆಸ್ಟ್ ಲಚ್ಚರರ್ ಗೆ ವೇತನ ಕೊಟ್ಟಿಲ್ಲ. ಹೀಗೆ ಆದರೆ ಪಕ್ಕದ ಕೇರಳ ರಾಜ್ಯ ಆದ ರೀತಿ ಕರ್ನಾಟಕ ಪಾಪರ್ ಆಗುತ್ತೆ. ಪಾಕಿಸ್ತಾನದಲ್ಲಿ ಹಾಲಿನ ಬೆಲೆ, ಅಕ್ಕಿ ಬೆಲೆ, ಟೀ ಬೆಲೆ , ಗೋದಿ ಹಿಟ್ಟು ಬೆಲೆ ನೋಡಿದರೆ ಆ ಪರಿಸ್ಥಿತಿ ಸಿದ್ದರಾಮಯ್ಯ ಸರ್ಕಾರ ಬರಲಿದೆ ಎನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*