Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂಲ ಸೌಕರ್ಯ ಕಡೆಗಣಿಸಿದ ಕಾಂಗ್ರೆಸ್‌ ಸರ್ಕಾರ - ಶಾಸಕ ಗುಡಗುಂಟಿ ಆರೋಪ

ಜಮಖಂಡಿ;ರಾಜ್ಯದ ಕಾಂಗ್ರೆಸ್‌ ಸರ್ಕಾರ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ, ರಾಜ್ಯದಾದ್ಯಂತ ರಸ್ತೆಗಳು ಹದಗೆಟಗೆಟ್ಟು ಹೋಗಿದೆ. ತಾಲೂಕಿನ 12ನೂರು ಕಿಮಿ ರಸ್ತೆಯ ಪೈಕಿ 850 ಕಿ.ಮಿ ರಸ್ತೆ ಹಾಳಾಗಿವೆ. ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲ, ಔಷಧಿಯ ಕೊರತೆ ಇದೆ ಹಲವುಬಾರಿ ಸರ್ಕಾರಕ್ಕೆ, ಹಾಗೂ ಮಂತ್ರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಉಚಿತ ಯೋಜನೆಗಳನ್ನು ಜಾರಿಗೊಳಿಸಿದ ರಾಜ್ಯಸರ್ಕಾರದ ಆರ್ಥಿಕ ಪರಿಸ್ಥಿತಿ ಮುಗ್ಗರಿಸಿದೆ ಎಂದು ಶಾಸಕ ಜಗದೀಶ ಗುಡಗುಂಟಿ ಆರೋಪಿಸಿದರು. ಬುಧವಾರ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ರಸ್ತಾರೋಕೊ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಮುಧೋಳ ರಸ್ತೆ ಕಟ್ಟೆಕೆರೆಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಕೆಲಕಾಲ ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರಾಜ್ಯಸರ್ಕಾರ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಜವಾಬ್ದಾರಿಯನ್ನು ಮರೆತಂತಿದೆ, ರಸ್ತೆಗಳು ಹಾಳಾಗಿರುವದ ರಿಂದ ರಾಜ್ಯದ ಮರ್ಯಾದೆ ಹರಾಜಾಗುತ್ತಿದೆ. ಪರರಾಜ್ಯ ಹಾಗೂ ದೇಶಗಳ ಜನರು ರಸ್ತೆಯ ದುಸ್ತಿಯನ್ನು ಟೀಕಿಸುತ್ತಿದ್ದಾರೆ. ಕೆಲ ಕಂಪನಿಗಳು ಪಲಾಯನಕ್ಕೆ ಮುಂದಾಗಿವೆ. ರಾಜ್ಯಧಾನಿ ಬೆಂಗಳೂರಿನಲ್ಲಿಯು ಪರಿಸ್ಥಿತಿ ಹೊರತಾಗಿಲ್ಲ ಎಂದು ತಿಳಿಸಿದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಗಮನ ಹರಿಸುವ ಮೂಲಕ ರಾಜ್ಯದ ರಸ್ತೆಗಳ ಅಭಿವೃದ್ಧಿಗೆ ಮುಂದಾಗಬೇಕು ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ,ಮಾತನಾಡಿ ಕಾಂಗ್ರೆಸ್‌ ಸರ್ಕಾರದ ನೀತಿ ಯಿಂದಾಗಿ ರಾಜ್ಯದ ರಸ್ತೆಗಳ ಸ್ಥಿತಿ ಹದಗೆಟ್ಟು ಹೋಗಿದೆ. ಗುಂಡಿಗಳ ಊರು ಎಂಬ ಕುಗ್ಗಳಿಕೆಗೆ ಪಾತ್ರವಾಗಿದೆ, ಸರ್ಕಾರ ಎಚ್ಚೆತ್ತು ಕೊಂಡು ಗುಂಡಿಗಳನ್ನು ಮುಚ್ಚುವ ಕೆಲಸ ಮಾಡದಿದ್ದರೇ ರಾಜ್ಯದ ಜನರು ಅದೇ ಗುಂಡಿಗಳಲ್ಲಿ ಕಾಂಗ್ರೆಸ್‌ನ್ನು ಮುಚ್ಚುತ್ತಾರೆ ಎಂದು ಎಚ್ಚರಿಸಿದರು. ಕಾಂಗ್ರೆಸ್‌ನ ಮುಖಂಡರು ಜಮಖಂಡಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಬೇಕು ತಮ್ಮದೇ ಸರ್ಕಾರ ಇರುವದರಿಂದ ಅಭಿವೃದ್ಧಿಗೆ ಸಹಕಾರ ನೀಡಬೇಕು, ಕ್ಷೇತ್ರದ ವಿಷಯ ಬಂದಾಗ ಎಲ್ಲಪಕ್ಷದವರು ಒಂದಾಗಿ ಸಮಸ್ಯೆಗಳನ್ನು ಬಗೆ ಹರಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ವಿಜಯಲಕ್ಷ್ಮೀ ತುಂಗಳ ಮಲ್ಲು ದಾನಗೌಡ, ಧರೆಪ್ಪ ಗುಗ್ಗರಿ, ಅಜಯ ಕಡಪಟ್ಟಿ, ಮಲ್ಲೇಶ ಹುಟಗಿ, ರಾಜಾಸಾಬ ಕಡಕೋಳ, ಶಾಲಿನಿ ಹಿರೇಮಠ, ಗೀತಾ ಸೂರ್ಯವಂಶಿ, ಶ್ರೀಧರ ಕಂಬಿ, ಸುರೇಶಗೌಡ, ಪಾಟೀಲ, ಎಂ.ಬಿ.ಪಾಟೀಲ, ಗಣೇಶ ಸಿರಗಣ್ಣವರ, ಯಮನೂರು ಮುಲ್ಲಂಗಿ, ನ್ಯಾಯವಾದಿ ಝುಲ್ಪಿ, ಗುರುಪಾದಪ್ಪ ಮೆಂಡಿಗೇರಿ, ಪ್ರಕಾಶ ಅರಕೇರಿ ಸೇರಿದಂತೆ ಹಲವಾರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ