LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಆಪರೇಷನ್‌ ಸಿಂಧೂರ್‌ ಕುರಿತು ಶಶಿ ತರೂರ್ ನಿಲುವಿಗೆ ಕಾಂಗ್ರೆಸ್‌ ನಾಯಕರು ಅಸಮಾಧಾನ

ನವದೆಹಲಿ: ‘ಆಪರೇಷನ್ ಸಿಂಧೂರ’ ಮತ್ತು ನಂತರದ ಬೆಳವಣಿಗೆಗಳಿಗೆ ಸಂಬಂಧಪಟ್ಟಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಹೊಗಳಿದ ಸಂಸದ ಶಶಿ ತರೂರ್ ನಿಲುವಿಗೆ ಕಾಂಗ್ರೆಸ್‌ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದು, ಕೈಪಡೆ ಇದೀಗ​ ಮನೆ ಒಡೆದ ಹಾಲಿನಂತಾಗಿದೆ.

ಭಾರತ-ಪಾಕಿಸ್ತಾನ ಸಂಘರ್ಷದ ಕುರಿತ ಪಕ್ಷದ ಅಧಿಕೃತ ಹೇಳಿಕೆಗಿಂತ ಭಿನ್ನವಾಗಿ ಪದೇ ಪದೇ ಶಶಿ ತರೂರ್ ಹೇಳಿಕೆ ನೀಡುತ್ತಿರುವುದು. ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ಅವರನ್ನು ಹೊಗಳುತ್ತಿರುವುದು ಪಕ್ಷದಲ್ಲಿ ಅಸಮಾಧಾನವನ್ನುಂಟು ಮಾಡಿದೆ.

ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆ, ಆ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆ ಕುರಿತು ಚರ್ಚಿಸಲು ಗುರುವಾರ ಕಾಂಗ್ರೆಸ್‌ನ ಹಿರಿಯ ನಾಯಕರ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ, ‘ಶಶಿ ತರೂರ್ ಲಕ್ಷಣ ರೇಖೆ ದಾಟಿದ್ದಾರೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಹೇಳಿದ್ದಾರೆಂದು ತಿಳಿದುಬಂದಿದೆ.

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜೈರಾಮ್ ರಮೇಶ್, “ಶಶಿ ತರೂರ್ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ, ಪಕ್ಷದ ಅಧಿಕೃತ ನಿಲುವಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ, ಆ ಬಳಿಕದ ಭಾರತ-ಪಾಕಿಸ್ತಾನ ಸಂಘರ್ಷ, ಕದನ ವಿರಾಮ ಘೋಷಣೆ, ಅದಕ್ಕೆ ನಾವು ಮಧ್ಯಸ್ಥಿಕೆ ವಹಿಸಿದ್ದೇವೆ ಎಂಬ ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿಕೆ, ಇವೆಲ್ಲವೂ ಮೋದಿ ಸರ್ಕಾರದ ವೈಫಲ್ಯ ಎಂಬುವುದು ಕಾಂಗ್ರೆಸ್‌ ಪಕ್ಷದ ಅಭಿಪ್ರಾಯವಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್