Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ನೇತೃತ್ವದ ಸರ್ಕಾರವು 2028ರವರೆಗೆ ಉಳಿಯುವುದಿಲ್ಲ: ಎಚ್‌ಡಿ ಕುಮಾರಸ್ವಾಮಿ ಭವಿಷ್ಯ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವು 2028ರವರೆಗೆ ಉಳಿಯುವುದಿಲ್ಲ. ಕಾಂಗ್ರೆಸ್ ಶಾಸಕರಲ್ಲಿ ಹೆಚ್ಚುತ್ತಿರುವ ಅತೃಪ್ತಿಯೇ ಸರ್ಕಾರದ ಅಸ್ಥಿರತೆಗೆ ಕಾರಣವಾಗಲಿದೆ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರ 2028 ರವರೆಗೂ ಉಳಿಯುವುದಿಲ್ಲ. ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನ ಹೆಚ್ಚಾಗುತ್ತಿದೆ, ಇದು ಯಾವಾಗ ಸ್ಫೋಟಗೊಳ್ಳುತ್ತದೆ ಎಂದು ನಮಗೆ ತಿಳಿದಿಲ್ಲ, ಆದರೆ ಕಾದು ನೋಡೋಣ. ಪ್ರತಿಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿವೆ ಎಂದು ಹೇಳುವುದು ಸರಿಯಲ್ಲ ಎಂದರು.

'ನಾವು ಅವರ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿರುವುದು ನಿಜವಲ್ಲ; ಅವರ ಶಾಸಕರು ಮತ್ತು ಜನರೇ ಈ ಸರ್ಕಾರದ ಅಡಿಪಾಯವನ್ನು ಅಸ್ಥಿರಗೊಳಿಸುತ್ತಿದ್ದಾರೆ. ಹಣಕಾಸಿನ ಮುಗ್ಗಟ್ಟಿನಿಂದಾಗಿ ಕಾಂಗ್ರೆಸ್ ಶಾಸಕರು ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ, ಇದು ಪಕ್ಷದೊಳಗೆ ವ್ಯಾಪಕ ಅಸಮಾಧಾನಕ್ಕೆ ಕಾರಣವಾಗಿದೆ' ಎಂದು ದೂರಿದರು.

ಸರ್ಕಾರದ ಕಾರ್ಯವೈಖರಿ ಬಗ್ಗೆ ಶಾಸಕರಲ್ಲಿ ವ್ಯಾಪಕ ಅಸಮಾಧಾನವಿದ್ದು, ಶೀಘ್ರವೇ ಅದು ಬಯಲಿಗೆ ಬರಲಿದೆ. ಸರ್ಕಾರ ಬೀಳಲು ಕಾರಣವಾಗುತ್ತದೆ ಎಂದು ಅವರು ಹೇಳಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*