LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಕಾಂಗ್ರೆಸ್ ಪ್ರಣಾಳಿಕೆ ಮುಸ್ಲಿಂ ಲೀಗ್‌ನ ಚಿಂತನೆಗಳನ್ನು ಪ್ರತಿಬಿಂಬಿಸುತ್ತದೆ: ಪ್ರಧಾನಿ ಮೋದಿ ವಾಗ್ದಾಳಿ

ಲಖನೌ, ಏಪ್ರಿಲ್ 6: ‘ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕಾಂಗ್ರೆಸ್ ದಶಕಗಳ ಹಿಂದಿನದು. ಈಗ ಉಳಿದುಕೊಂಡಿರುವ ಪಕ್ಷವು ಭಾರತದ ನಿರೀಕ್ಷೆಗಳನ್ನು ಈಡೇರಿಸುವಂಥದ್ದಲ್ಲ. ಶುಕ್ರವಾರ ಬಿಡುಗಡೆಯಾದ ಪ್ರಣಾಳಿಕೆಯಿಂದ ಇದು ಸ್ಪಷ್ಟವಾಗಿದೆ. ಪ್ರಣಾಳಿಕೆಯು ಮುಸ್ಲಿಂ ಲೀಗ್‌ನ ಚಿಂತನೆಗಳನ್ನು ಪ್ರತಿಬಿಂಬಿಸುತ್ತದೆ. ಈ ಪಕ್ಷವು 21ನೇ ಶತಮಾನದಲ್ಲಿ ಭಾರತವನ್ನು ಮುನ್ನಡೆಸುವ ಸಾಮರ್ಥ್ಯ ಹೊಂದಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು.

ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಚುನಾವಣಾ ಪ್ರಚಾರ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪ್ರಣಾಳಿಕೆಯು ಸ್ವಾತಂತ್ರ್ಯದ ಸಮಯದಲ್ಲಿ ಮುಸ್ಲಿಂ ಲೀಗ್‌ನಲ್ಲಿ ಪ್ರಚಲಿತದಲ್ಲಿದ್ದ ಅದೇ ಚಿಂತನೆಯನ್ನು ಪ್ರತಿಬಿಂಬಿಸುತ್ತದೆ. ಕಾಂಗ್ರೆಸ್ ಪ್ರಣಾಳಿಕೆಯು ಸಂಪೂರ್ಣವಾಗಿ ಮುಸ್ಲಿಂ ಲೀಗ್‌ನ ಮುದ್ರೆಯನ್ನು ಹೊಂದಿದೆ. ಈ ಮುಸ್ಲಿಂ ಲೀಗ್ ಪ್ರಣಾಳಿಕೆಯ ಉಳಿದ ಭಾಗಗಳಲ್ಲಿ ಎಡಪಂಥೀಯರು ಸಂಪೂರ್ಣವಾಗಿ ಪ್ರಾಬಲ್ಯ ಸಾಧಿಸಿದ್ದಾರೆ ಎಂದು ಹೇಳಿದರು.

ಕಳೆದ 10 ವರ್ಷಗಳಲ್ಲಿ ನಾವು ಭಾರತವನ್ನು ವಿಶ್ವದ 5 ನೇ ಅತಿದೊಡ್ಡ ಆರ್ಥಿಕ ಸೂಪರ್ ಪವರ್ ದೇಶವನ್ನಾಗಿ ಮಾಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಬಿಜೆಪಿ ಅಧಿಕಾರಕ್ಕೆ ಬರುವ ಮೊದಲು ಭಾರತ ವಿಶ್ವದ ಅಗ್ರ 15 ಆರ್ಥಿಕತೆಗಳಲ್ಲಿ ಒಂದಾಗಿತ್ತು. ನಾವು ಅಧಿಕಾರಕ್ಕೆ ಬಂದು 10 ವರ್ಷಗಳಲ್ಲಿ ದೇಶವು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ ಎಂದು ಅವರು ಹೇಳಿದರು.

ನಾನು 10 ವರ್ಷಗಳ ಹಿಂದೆ ರಾಜಕೀಯ ರ‍್ಯಾಲಿಗಾಗಿ ಸಹರಾನ್‌ಪುರಕ್ಕೆ ಬಂದಾಗ, ದೇಶವು ದುಃಖದಲ್ಲಿ ಮುಳುಗಿತ್ತು. ನಾನು ದೇಶವನ್ನು ಹಾಳುಮಾಡುವುದಿಲ್ಲ ಎಂದು ಭರವಸೆ ನೀಡಿದ್ದೆ. ಅದರಂತೆಯೇ ನಡೆದುಕೊಂಡಿದ್ದೇವೆ ಎಂದು ಅವರು ಹೇಳಿದರು. ಬಡವರಿಗೆ ಬಿಜೆಪಿ ಪಡಿತರ ನೀಡಿದೆ. ಇದನ್ನು ಮುಂದಿನ 5 ವರ್ಷ ಕೂಡ ಮುಂದುವರಿಸುವುದಾಗಿ ನಾವು ಭರವಸೆ ನೀಡುತ್ತೇವೆ ಎಂದು ಮೋದಿ ಹೇಳಿದರು.

ಕಳೆದ 10 ವರ್ಷಗಳಲ್ಲಿ 25 ಕೋಟಿ ಜನರನ್ನು ಬಡತನದಿಂದ ಹೊರತರಲಾಗಿದೆ. ಹಲವು ದಶಕಗಳಲ್ಲಿ ಕಾಂಗ್ರೆಸ್‌ಗೆ ಸಾಧ್ಯವಾಗದ್ದನ್ನು ಬಿಜೆಪಿ ಸರ್ಕಾರ ಕೇವಲ 10 ವರ್ಷಗಳಲ್ಲಿ ಮಾಡಿದೆ. ಹಾಗಾಗಿ ಜೂನ್ 4 ರಂದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ದೇಶ ಹೇಳುತ್ತಿದೆ ಎಂದು ಮೋದಿ ಭರವಸೆ ವ್ಯಕ್ತಪಡಿಸಿದರು.

ಸರ್ಕಾರದ ಕಾರ್ಯಕ್ರಮಗಳು ದೇಶದ ಪ್ರತಿಯೊಬ್ಬ ವ್ಯಕ್ತಿಯನ್ನು ತಲುಪಬೇಕು ಎಂದು ನಾವು ಭಾವಿಸುತ್ತೇವೆ. ಸರ್ಕಾರದ ಯೋಜನೆಗಳು ಫಲಾನುಭವಿಗಳೆಲ್ಲರಿಗೂ ತಲುಪಬೇಕು ಎಂದು ಮೋದಿ ಹೇಳಿದರು.

ಎಲ್ಲ ಬಡವರಿಗೆ ಮನೆ, ಗ್ಯಾಸ್ ಸಂಪರ್ಕ ನೀಡಲಾಗಿದ್ದು, ಎಲ್ಲ ಮನೆಗಳಿಗೂ ನಲ್ಲಿ ನೀರು ನೀಡುತ್ತಿದ್ದೇವೆ. ಅಷ್ಟೇ ಅಲ್ಲ, ನಾವು ತ್ರಿವಳಿ ತಲಾಖ್ ವಿರುದ್ಧ ಕಾನೂನನ್ನು ತಂದಿದ್ದೇವೆ. ಮುಸ್ಲಿಂ ಮಹಿಳೆಯರು ಮಾತ್ರವಲ್ಲ, ಇಡೀ ಮುಸ್ಲಿಂ ಸಮುದಾಯವೂ ಸಹ ಇದನ್ನು ಸ್ವಾಗತಿಸಿದೆ ಎಂದು ಪ್ರಧಾನಿ ಹೇಳಿದರು.

ರಾಮಮಂದಿರ ರಾಜಕೀಯ ವಿಷಯವಲ್ಲ. ಆದರೆ ಅದು ನಮ್ಮ ಧ್ಯೇಯ ಎಂದು ಪ್ರಧಾನಿ ಹೇಳಿದರು. ಈ ವರ್ಷ ರಾಮ ನವಮಿಯಂದು ರಾಮ ಲಲ್ಲಾ ಟೆಂಟ್‌ನಲ್ಲಿ ಇರುವುದಿಲ್ಲ. ಬದಲಿಗೆ ಸುಂದರವಾದ ಭವ್ಯವಾದ ದೇವಾಲಯದಲ್ಲಿ ಇರುತ್ತಾನೆ ಎಂದು ಅವರು ಹೇಳಿದರು.

ಅವರು ಚುನಾವಣೆ ಗೆಲ್ಲುವ ಬಗ್ಗೆ ಮಾತನಾಡುತ್ತಿಲ್ಲ. ಬಿಜೆಪಿ ಮತ್ತು ಎನ್‌ಡಿಎ ಸ್ಥಾನಗಳನ್ನು ಕಡಿಮೆ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಆ ಪಕ್ಷಕ್ಕೆ ಅಭ್ಯರ್ಥಿಗಳನ್ನು ನಿರ್ಧರಿಸಲು ಸಾಧ್ಯವಾಗುತ್ತಿಲ್ಲ. ಕೆಲವು ಸಂದರ್ಭಗಳಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿಗಳು ಹಗ್ಗಜಗ್ಗಾಟ ನಡೆಸುತ್ತಿದ್ದಾರೆ ಎಂದು ಮೋದಿ ವ್ಯಂಗ್ಯವಾಡಿದರು.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್