Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ: ಪಂಚ ನ್ಯಾಯಗಳಿಗೆ ಒತ್ತು ನೀಡಿದ ಕೈ ಪಡೆ!

ನವದೆಹಲಿಏಪ್ರಿಲ್​ 05 : ಮುಂಬರಲಿರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಪ್ರಣಾಳಿಕೆ(Manifesto)ಯನ್ನು ಬಿಡುಗಡೆ ಮಾಡಿದೆ. ಲೋಕಸಭೆ ಚುನಾವಣೆಯ ರಣಕಹಳೆ ಮೊಳಗುತ್ತಿದ್ದಂತೆಯೇ ಎಲ್ಲ ಪಕ್ಷಗಳು ಜನತೆಗೆ ಭರವಸೆಗಳ ಸರಮಾಲೆಯನ್ನೇ ನೀಡಲಾರಂಭಿಸಿವೆ. ಕಾಂಗ್ರೆಸ್ ಕೂಡ ಚುನಾವಣಾ ರ್ಯಾಲಿಗಳಲ್ಲಿ ಜನರಿಗೆ ಹಲವು ಭರವಸೆಗಳನ್ನು ನೀಡಿದೆ. ಈ ನಡುವೆ ಇಂದು ಕಾಂಗ್ರೆಸ್ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಪ್ರಣಾಳಿಕೆಯಲ್ಲಿ ಪಕ್ಷವು  ಪಂಚ ನ್ಯಾಯ ಮತ್ತು 25 ಭರವಸೆಗಳನ್ನು ಭರವಸೆ ನೀಡಿದೆ.

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ‘ಯುವ ನ್ಯಾಯ’, ‘ನಾರಿ ನ್ಯಾಯ’, ‘ಕಿಸಾನ್ ನ್ಯಾಯ’, ‘ಶ್ರಮಿಕ್ ನ್ಯಾಯ’ ಮತ್ತು ‘ಹಿಸ್ಸೆದಾರಿ ನ್ಯಾಯ’ ಹಾಗೂ ಖಾತರಿಗಳು ಸೇರಿದಂತೆ ಪಂಚ ನ್ಯಾಯ ಅಥವಾ ನ್ಯಾಯದ ಐದು ಸ್ತಂಭಗಳಿಗೆ ಒತ್ತು ನೀಡಿದೆ.

ಕಾಂಗ್ರೆಸ್​ ಪಕ್ಷವು ದೇಶಾದ್ಯಂತ ಜಾತಿ ಆಧಾರಿತ ಜನಗಣತಿ ನಡೆಸುವುದಾಗಿ ಭರವಸೆ ನೀಡಿದೆ. 2024ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್​ ಸರ್ಕಾರ ರಚನೆಯಾದರೆ ಬಡ ಕುಟುಂಬದ ಮಹಿಳೆಯರಿಗೆ ಪ್ರತಿ ವರ್ಷ ಲಕ್ಷ ರೂ.ಗಳ ನೆರವು ನೀಡುವುದಾಗಿ ತಿಳಿಸಿದ ಅವರು ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದರು.

ಯುವ ನ್ಯಾಯ ಅಡಿಯಲ್ಲಿ ಪಕ್ಷವು ಮಾತನಾಡಿರುವ ಐದು ಖಾತರಿಗಳಲ್ಲಿ 30 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಒದಗಿಸುವ ಭರವಸೆ ಮತ್ತು ಒಂದು ವರ್ಷದವರೆಗೆ ಅಪ್ರೆಂಟಿಸ್‌ಶಿಪ್ ಕಾರ್ಯಕ್ರಮದಡಿಯಲ್ಲಿ ಯುವಕರಿಗೆ 1 ಲಕ್ಷ ರೂ. ನೀಡುವುದಾಗಿ ತಿಳಿಸಿದ್ದಾರೆ.

ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಪ್ರತಿ ವರ್ಷ ಎಂಎಸ್‌ಪಿ ಘೋಷಿಸುವ ಕಾನೂನು ಖಾತರಿ ನೀಡುವುದಾಗಿ ಘೋ‍ಷಿಸಿದೆ.

ಕಾರ್ಮಿಕ ನ್ಯಾಯ ಅಡಿಯಲ್ಲಿ, ಕಾರ್ಮಿಕರಿಗೆ ಆರೋಗ್ಯದ ಹಕ್ಕನ್ನು ಒದಗಿಸುವುದು, ದಿನಕ್ಕೆ ಕನಿಷ್ಠ 400 ರೂ. ವೇತನ ಮತ್ತು ನಗರ ಉದ್ಯೋಗ ಖಾತರಿಯನ್ನು ಖಚಿತಪಡಿಸುವುದಾಗಿ ಭರವಸೆ ನೀಡಿದ್ದಾರೆ.

ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಲಾಗಿದೆ.

ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಪ್ರಣಾಳಿಕೆಯಲ್ಲಿ 25 ಬಗೆಯ ಭರವಸೆಗಳನ್ನು ನೀಡಲಾಗಿದೆ. ನಮ್ಮ ಪ್ರಣಾಳಿಕೆ ಬಡವರಿಗೆ ಮೀಸಲಾಗಿದೆ ಎಂದು ಖರ್ಗೆ ಹೇಳಿದರು.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ