ರಾಜ್ಯ ಚುನಾವಣಾಧಿಕಾರಿಗೆ ಕಾಂಗ್ರೆಸ್ ನಾಯಕರಿಂದ ದೂರು ಹಿನ್ನೆಲೆ ಮುಖ್ಯ ಚುನಾವಣಾಧಿಕಾರಿ ಕಚೇರಿ ಬಳಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್, ಸುರ್ಜೇವಾಲ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ಗಷ್ಟೇ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ದೂರು ಸಲ್ಲಿಸಲು ಅನುಮತಿ ನೀಡಿದ್ದಾರೆ.
ಇನ್ನು ದೂರು ಸಲ್ಲಿಕೆ ವೇಳೆ ರಾಹುಲ್ ಗಾಂಧಿ ಡಿಕ್ಲರೇಶನ್ ಕಾಪಿಗೆ ಸಹಿ ಹಾಕುತ್ತಾರಾ ಅಥವಾ ಇಲ್ಲವಾ ಎಂಬ ಕುತೂಹಲ ಸೃಷ್ಟಿಯಾಗಿದೆ. ಏಕೆಂದರೆ ಡಿಕ್ಲರೇಶನ್ಗೆ ಸಹಿ ಹಾಕುವಂತೆ ಚುನಾವಣಾ ಆಯೋಗ ತಾಕೀತು ಮಾಡಿತ್ತು. ಡಿಕ್ಲರೇಶನ್ ಮಾದರಿಯನ್ನು ಚುನಾವಣಾ ಆಯೋಗ ತಾವೇ ಸ್ವತಃ ರಾಹುಲ್ ಗಾಂಧಿಗೆ ರವಾನಿಸಿದ್ದು, ಕಾನೂನು ಅಂಶಗಳ ಬಗ್ಗೆ ಉಲ್ಲೇಖಿಸಲಾಗಿದೆ. ಒಂದು ವೇಳೆ ರಾಹುಲ್ ಗಾಂಧಿ ಡಿಕ್ಲರೇಶನ್ಗೆ ಸಹಿ ಹಾಕಿದರೆ ಮುಂದೆ ಕಾನೂನಾತ್ಮಕ ಸಮಸ್ಯೆಗಳು ಎದುರಿಸಬೇಕಾಗಬಹುದು.