Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಮಖಂಡಿಯಲ್ಲಿ ಕಾಂಗ್ರೆಸ್‌ ವಿಜಯೋತ್ಸವ; ಜನಪರ ಆಡಳಿತಕ್ಕೆ ಮನ್ನಣೆ - ಆನಂದ ನ್ಯಾಮಗೌಡ

 

ಜಮಖಂಡಿ; ಕಾಂಗ್ರೆಸ್‌ನ ಜನಪರ ಆಡಳಿತಕ್ಕೆ ಜನರು ಮನ್ನಣೆ ನೀಡಿದ್ದು, ಬಾಗಲಕೊಟೆ ಹಾಗೂ ದಾವಣಗೇರೆ ಎರಡೂ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ತಿಳಿಸಿದರು. ಸೋಮವಾರ ಸಂಜೆ ನಗರದ ಎ.ಜಿ.ದೇಸಾಯಿ ವೃತ್ತದಲ್ಲಿ ಕಾಂಗ್ರೆಸ್‌ನ ಕಾರ್ಯಕರ್ತರು ಹಮ್ಮಿ ಕೊಂಡಿದ್ದ ವಿಜಯೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು. ಇಬ್ಬರೂ ನೂತನ ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ.ದಿ. ಎಚ್‌.ವೈ, ಮೇಟಿ ಅವರ ಎಲ್ಲ ಕನಸುಗಳನ್ನು ಉಮೇಶ ಮೇಟಿ ಪೂರ್ಣ ಮಾಡಲಿದ್ದಾರೆ ಅದರಂತೆ ದಾವಣಗೇರೆಯ ದಿ.ಶಾಮನೂರು ಶಿವಶಂಕರಪ್ಪ ಅವರಂತೆ ಸಮರ್ಥ ಅವರು ಸಹ ಉತ್ತಮವಾಗಿ ಸೇವೆ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು. ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸೇರಿದಂತೆ ಕಾಂಗ್ರೆಸ್‌ನ ಎಲ್ಲ ಸಚಿವರು, ಶಾಸಕರು, ಕಾರ್ಯಕರ್ತರು ಮುಖಂಡರು ಪಕ್ಷದ ಗೆಲುವಿಗಾಗಿ ಶ್ರಮಿಸಿದ್ದಾರೆ ಎಂದು ಹೇಳಿದರು. ಕಾಂಗ್ರಸ್‌ನ ಮುಖಂಡರಾದ ಮಹೇಶ ಕೋಳಿ, ಪರಮಾನಂದ ಗೌರೋಜಿ, ಅನ್ವರ ಮೋಮಿನ, ರವಿ ಯಡಳ್ಳಿ, ಈಶ್ವರವಾಳೆಣ್ಣವರ, ದಿಲಾವರ ಶಿರೋಳ, ಸುನೀಲ ಸಿಂಧೆ, ಯುವಕಾಂಗ್ರೆಸ್‌ನ ಕುಮಾರ ಆಲಗೂರ, ಬಿ.ಬಿ.ಪಾಟೀಲ, ಗುರುಲಿಂಗಪ್ಪ, ಶಶಿಧರ ನ್ಯಾಮಗೌಡ, ಬಸು ಹರಕಂಗಿ, ಸಾಧಿಕ ಬಂಟನೂರ, ಕಿರಣ ಪಿಸಾಳ, ಲಿಂಗರಾಜ ಪಾಟೀಲ, ನಾನಾ ಮೋರೆ, ಖಾಜಾ ಅವಟಿ ಸೇರಿದಂತೆ ಕಾಂಗ್ರೆಸ್‌ನ ಕಾರ್ಯಕರ್ತರು ಇದ್ದರು. ಪಠಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಯಿತು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಂಚಮಸಾಲಿ ಮಠದಲ್ಲಿ ಯಾವುದೇ ಸಭೆ, ಸಮಾರಂಭ ನಡೆಸುವಂತಿಲ್ಲ; ಬಿಎನ್​​ಎಸ್ 163 ಅಡಿ ನೋಟಿಸ್​ ಜಾರಿ ಅತ್ತೆಗೆ ಚಾಕು ಇರಿದ ಅಳಿಯಸಿಗ್ನಲ್ ಗಳಲ್ಲಿ ನೆರಳು ಛಾವಣಿ: ಸಾರ್ವಜನಿಕರ ಮೆಚ್ಚುಗೆ  ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವುಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಸೂಚನೆಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಸೂಚನೆಪಂಚರಾಜ್ಯ ಫಲಿತಾಂಶ ಹಿನ್ನೆಲೆ ಸಿರುಗುಪ್ಪದಲ್ಲಿ ಬಿಜೆಪಿ ಸಂಭ್ರಮಾಚರಣೆರೈಲ್ವೆ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಬೆಂಬಲಜಮಖಂಡಿಯಲ್ಲಿ ಕಾಂಗ್ರೆಸ್‌ ವಿಜಯೋತ್ಸವ; ಜನಪರ ಆಡಳಿತಕ್ಕೆ ಮನ್ನಣೆ - ಆನಂದ ನ್ಯಾಮಗೌಡಜಮಖಂಡಿಯಲ್ಲಿ ರಂಭಾಪುರಿ ಜಗದ್ಗುರುಗಳ ದಸರಾ ದರ್ಬಾರ- ಶಾಸಕ ಜಗದೀಶ ಗುಡಗುಂಟಿ