Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಂಗಭದ್ರಾ ಜಲಾಶಯಕ್ಕೆ ಹೊಸ ಗೇಟ್ ಅಳವಡಿಕೆಗೆ ಚಿಂತನೆ; ಪರಿಶೀಲನೆ ಆರಂಭ

ಕೊಪ್ಪಳ, ನವೆಂಬರ್​ 06: ತುಂಗಭದ್ರಾ ಜಲಾಶಯ , ರಾಜ್ಯದ ಹಳೆಯ ಜಲಾಶಯಗಳಲ್ಲೊಂದು. ಈ ಜಲಾಶಯದ ಕ್ರಸ್ಟ್ ಗೇಟ್  ಕೊಚ್ಚಿಕೊಂಡು ಹೋಗಿದ್ದು ದೊಡ್ಡ ಸುದ್ದಿಯಾಗಿತ್ತು. ಜೊತೆಗೆ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಇಂತಹದೊಂದು ಘಟನೆ ನಡೆದಿದೆ ಎಂಬ ಆರೋಪ ಕೂಡ ಕೇಳಿ ಬಂದಿತ್ತು. ಯಾವುದೇ ಜಲಾಶಯದ ಗೇಟ್​ಗಳನ್ನು ಐವತ್ತು ವರ್ಷದ ನಂತರ ಬದಲಾವಣೆ ಮಾಡಬೇಕು. ಆದರೆ ತುಂಗಭದ್ರಾ ಜಲಾಶಯದ ಗೇಟ್ ಬದಲಾವಣೆ ಮಾಡಿಲ್ಲ. ಕೆಟ್ಟ ಮೇಲೆ ಬುದ್ದಿ ಬಂತು ಅನ್ನುವ ಹಾಗೆ ಟಿಬಿ ಡ್ಯಾಂ ಬೋರ್ಡ್, ಹೊಸ ಗೇಟ್ ಅಳವಡಿಕೆಗೆ ಪರಿಶೀಲನೆ ಆರಂಭಿಸಿದೆ.





ಗೇಟ್ ಕೊಚ್ಚಿಕೊಂಡು ಹೋಗಲು ತುಂಗಭದ್ರಾ ಡ್ಯಾಂ ಬೋರ್ಡ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಯ್ತಾ ಎಂಬ ಪ್ರಶ್ನೆ ಉದ್ಬವಿಸಿತ್ತು. ಇದಕ್ಕೆ ಕಾರಣ, ಯಾವುದೇ ಜಲಾಶಯದ ಕ್ರಸ್ಟಗೇಟ್ ಗಳು, ಚೈನ್ ಲಿಂಕ್​ಗಳನ್ನು ಬದಲಾಯಿಸದೇ ಇರುವುದು. ತುಂಗಭದ್ರಾ ಜಲಾಶಯಕ್ಕೆ ಎಪ್ಪತ್ತು ವರ್ಷಗಳ ಹಿಂದೆ ಕ್ರಸ್ಟಗೇಟ್, ಚೈನ್ ಲಿಂಕ್​ಗಳನ್ನು ಅಳವಡಿಸಿದ್ದು, ಇಲ್ಲಿಯವರಗೆ ಒಮ್ಮೆಯೂ ಬದಲಾಯಿಸಿಲ್ಲ. ಬದಲಾವಣೆ ಮಾಡಬೇಕು ಅನ್ನೋ ತಜ್ಞರ ಸೂಚನೆಯನ್ನು ಕೂಡಾ ಡ್ಯಾಂ ನಿರ್ವಹಣೆ ಮಾಡುವ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದಕ್ಕೆ ಇಂತಹದೊಂದು ಘಟನೆ ನಡೆಯಿತು ಅಂತ ತಜ್ಞರು ಹೇಳಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ