Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂವಿಧಾನ ಬದಲಾವಣೆ ಬಿಜೆಪಿ ಹಿಡನ್ ಅಜೆಂಡಾ-ಶ್ರೀಧರ ಕಲಿವೀರ







ಹುಕ್ಕೇರಿ02 : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವು ವಿಶ್ವದ  ಸರ್ವಶ್ರೇಷ್ಠ ಭಾರತದ ಸಂವಿಧಾನ ಬದಲಾಯಿಸುವ ಏಕೈಕ ಹಿಡನ್ ಅಜೆಂಡಾ ಹೊಂದಿದೆ. ಈ ಮೂಲಕ ದೇಶದಲ್ಲಿ ಮನುಸ್ಮೃತಿ ಹೇರುವ ಹುನ್ನಾರ ನಡೆಸಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯ ಸಮಿತಿ ಸಂಸ್ಥಾಪಕ ಅಧ್ಯಕ್ಷ ಶ್ರೀಧರ ಕಲಿವೀರ ಆರೋಪಿಸಿದರು.


ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಹುಕ್ಕೇರಿ ತಾಲೂಕಿನ ರಕ್ಷಿ ಕ್ರಾಸ್ ಬಳಿ ಖಾಸಗಿ ಹೊಟೇಲ್‌ನಲ್ಲಿ ಬುಧವಾರ ನಡೆದ ವಿವಿಧ ದಲಿತಪರ ಸಂಘಟನೆಗಳ ಸಭೆ ಬಳಿಕ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಸಂವಿಧಾನದ ಆಶಯಗಳಿಗೆ ತಿಲಾಂಜಲಿ ನೀಡಿದ್ದರಿಂದ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.


ಕಳೆದ 10 ವರ್ಷದ ಮೋದಿ ಸರ್ಕಾರದ ಅವಧಿಯಲ್ಲಿ ದಲಿತರ ಮೇಲೆ ಅತ್ಯಾಚಾರ, ಅನ್ಯಾಯ, ಕೊಲೆ, ಸುಲಿಗೆ ಹೆಚ್ಚಾಗಿದೆ. ಬಿಜೆಪಿ ಮತ್ತು ಸಂಘ ಪರಿವಾರವು ಪ್ರಜಾತಂತ್ರ ವಿರೋಧಿ ನಿಲುವು ತಳೆದು ಜಾತಿವಾದ, ಕೋಮುವಾದ ಬೆಳೆಸುತ್ತಿವೆ. ಇದರೊಂದಿಗೆ ದೇಶದ್ರೋಹಿ ಗೋಡ್ಸೆ, ಸಾವರಕರ್ ವಿಚಾರಗಳನ್ನು ಮುನ್ನಲೆಗೆ ತರುವ ಸಂಚು ರೂಪಿಸಲಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.


ಎಸ್ಸಿಎಸ್ಟಿ ದೌರ್ಜನ್ಯ ನಿಯಂತ್ರಣ ಜಿಲ್ಲಾ ಸಮಿತಿ ಮಾಜಿ ಸದಸ್ಯ ಸುರೇಶ ತಳವಾರ, ಹಾಸನದ ಎಂ.ಗೋವಿAದರಾಜ, ಶಿವಮೊಗ್ಗದ ಎಂ.ಗುರುಮೂರ್ತಿ, ಭೀಮ್ ಆರ್ಮಿಯ ರಾಜ್ಯಾಧ್ಯಕ್ಷ ಡಿ.ಎಸ್.ರಾಜಗೋಪಾಲ್ ಮಾತನಾಡಿ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಆರ್ಥಿಕ ಅಸಮಾನತೆ, ನಿರುದ್ಯೋಗ ನಿವಾರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಹಾಗಾಗಿ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಬಾಹ್ಯ ಬೆಂಬಲು ನೀಡಲು ನಿರ್ಧರಿಸಲಾಗಿದ್ದು ಚಿಕ್ಕೋಡಿ ಕ್ಷೇತ್ರದ ಪ್ರಜ್ಞಾವಂತ ಮತದಾರರು ಪ್ರಿಯಂಕಾ ಜಾರಕಿಹೊಳಿ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.


ಮುಖಂಡರಾದ ಎ.ಗೋಪಾಲ, ಮಲ್ಲೇಶ ಚೌಗಲೆ, ಸಿದ್ದಪ್ಪ ಕಾಂಬಳೆ, ಅಪ್ಪಾಸಾಹೇಬ ನಾಯಕ, ಶ್ರೀಕಾಂತ ತಳವಾರ, ದುರ್ಗೇಶ ಮೇತ್ರಿ, ಮಹಾದೇವ ತಳವಾರ, ಬಿ.ಕೆ.ಸದಾಶಿವ, ಅಪ್ಪಣ್ಣಾ ಖಾತೇದಾರ, ಕುಮಾರ ತಳವಾರ, ದೀಪಕ ವೀರಮುಖ, ಶಂಕರ ತಿಪ್ಪನಾಯಿಕ, ರೋಹಿತ ತಳವಾರ, ಕುಮಾರ ಗಸ್ತಿ, ಕಾಶಪ್ಪಾ ಹರಿಜನ ಮತ್ತಿತರರು ಉಪಸ್ಥಿತರಿದ್ದರು.


ಮುಖಂಡ ಸುರೇಶ ತಳವಾರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವು ಕಣಗಲಿ ನಿರೂಪಿಸಿದರು. ಮುತ್ತು ಕಾಂಬಳೆ ವಂದಿಸಿದರು. ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಆಯೋಜಿಸಿದ ಈ ಮಹತ್ವದ ಸಭೆಯಲ್ಲಿ ಎಸ್ಸಿಎಸ್ಟಿ, ಹಿಂದುಳಿದ ವರ್ಗ, ಧಾರ್ಮಿಕ ಅಲ್ಪಸಂಖ್ಯಾತರು ಹಾಗೂ ಮೇಲ್ವರ್ಗದ ಬಡವರನ್ನು ಕಾಂಗ್ರೆಸ್‌ನತ್ತ ಆಕರ್ಷಿಸಿ ಮತಸೆಳೆಯಲು ನಿರ್ಧರಿಸಲಾಯಿತು. ಚಿಕ್ಕೋಡಿ ಕ್ಷೇತ್ರದಲ್ಲಿ ದಲಿತ ಮತಗಳನ್ನು ವಿಭಜಿಸಲು ಬಿಜೆಪಿ ಹುನ್ನಾರ ನಡೆಸಿ ಪಕ್ಷೇತರ ಅಭ್ಯರ್ಥಿ ಶಂಭು ಕಲ್ಲೋಳಕರಗೆ ಕುಮ್ಮಕ್ಕು ನೀಡುತ್ತಿದೆ. ಬಿಜೆಪಿಯ ಬಿ ಟೀಮ್‌ನಂತಿರುವ ಕಲ್ಲೋಳಕರ ಅವರನ್ನು ಸಮಾಜ ತಿರಸ್ಕರಿಸಬೇಕು ಎಂದು ಮುಖಂಡರು ಕರೆ ನೀಡಿದರು.





Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ