Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರ್ಮಿಕರ ಮಕ್ಕಳಿಗೆ ಶ್ರಮಿಕ ವಸತಿ ಶಾಲಾ ಕಟ್ಟಡ ನಿರ್ಮಾಣ : ಯಶವಂತರಾಯಗೌಡ ವ್ಹಿ ಪಾಟೀಲ್

ಇಂಡಿ : ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಶ್ರಮಿಕ ವಸತಿ ಶಾಲಾ ಕಟ್ಟಡ ನಿರ್ಮಾಣ ಅಂದಾಜು ೩೪ ಕೋಟಿ ೫ ಲಕ್ಷ ರೂಪಾಯಿಗಳ ವೆಚ್ಚದಲ್ಲಿ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಳಗುಣಕಿ ಗ್ರಾಮದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಶ್ರಮಿಕ ವಸತಿ ಶಾಲಾ ಕಟ್ಟಡ ನಿರ್ಮಾಣ ( ೬ ರಿಂದ ೧೨ ನೇ ತರಗತಿಯವರೆಗೆ) ಭೂಮಿ ಪೂಜಾ ಕಾರ್ಯಕ್ರಮವು ದಿನಾಂಕ ೦೯/೦೫/೨೦೨೬ ರಂದು ಸಾಯಂಕಾಲ ೦೫ ಗಂಟೆಗೆ ಇಂಡಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ  ಯಶವಂತರಾಯಗೌಡ ವ್ಹಿ ಪಾಟೀಲ್ ಇವರ ಅಮೃತ ಹಸ್ತದಿಂದ ನೆರವೇರಿತು

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾನ್ಯ ಶಾಸಕರು ಮಾತನಾಡುತ್ತಾ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಹಳಗುಣಕಿ ಗ್ರಾಮದ ವ್ಯಾಪ್ತಿಯಲ್ಲಿ ಸ್ವಚ್ಛ ಸುಂದರವಾದ ಸುಮಾರು ಐದು ಎಕರೆ ವ್ಯಾಪ್ತಿಯಲ್ಲಿ ಸುಸಜ್ಜಿತವಾದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಎಲ್ಲ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಸುಂದರ ವಸತಿ ನಿಲಯ ನಿರ್ಮಾಣವಾಗುತ್ತಿದ್ದು ಇದರ ಸದುಪಯೋಗ ಎಲ್ಲಾ ಕಾರ್ಮಿಕರ ಪಡೆದುಕೊಂಡು ತಮ್ಮ ಮಕ್ಕಳ ಉಜ್ವಲ ಭವಿಷ್ಯದ ಕನಸನ್ನು ಸಾಕಾರಗೊಳಿಸಬೇಕೆಂದು ತಿಳಿ ಹೇಳಿದರು  ಗುತ್ತಿಗೆದಾರರಿಗೆ ಒಂದು ವರ್ಷದ ಒಳಗೆ ಈ ಕಟ್ಟಡವನ್ನು ನಿರ್ಮಾಣ ಮಾಡಿ ಉದ್ಘಾಟನೆಗೆ ನೀಡಬೇಕೆಂದು ಹೇಳಿದರು ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿಯಾದ ಶ್ರೀಮತಿ ಉಮಾಶ್ರೀ ಕೋಳಿ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ವಸತಿ ನಿಲಯದ ಸದುಪಯೋಗ ಮತ್ತು ಕಾರ್ಮಿಕ ಇಲಾಖೆ ಮಂಡಳಿಯ ವಿವಿಧ ಯೋಜನೆಗಳ ಕುರಿತ್ತು ವಿವರಿಸಿ ಪ್ರಯೋಜನ ಪಡೆದುಕೊಳ್ಳಬೇಕೆಂದು ತಿಳಿಸಿದರು ಈ ಕಾರ್ಯಕ್ರಮದಲ್ಲಿ ಕಾರ್ಮಿಕ ನಿರೀಕ್ಷಕರಾದ ಡಿ ಎಮ್  ದೇವರಮನಿ  ಹಾಗೂ ಇಂಡಿ ತಾಲ್ಲೂಕಿನ ತಹಶೀಲ್ದಾರರು ಇ ಓ  ಸಾಹೇಬರು ಹಾಗೂ ಕಾರ್ಮಿಕ ಸಂಘಟನೆಗಳು ಪದಾಧಿಕಾರಿಗಳು ಹಳಗುಣಕಿ ಹಾಗೂ ಬಬಲಾದ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು

Advertisement

 

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಗಜೇವಣಿ ಗ್ರಾಮದ ಕೆರೆಗೆ ಅಳವಡಿಸಲಾದ ಪೈಪಲೈನ್ ತೆರವುಗೊಳಿಸುವಂತೆ ಮನವಿ ಸಿದ್ಧಾರ್ಥ ನಗರದ ಜನರ ಸಮಸ್ಯೆ ಆಲಿಸಿ, ಕ್ರಮಕ್ಕೆ ಸೂಚಿಸಿದ ಶಾಸಕ ನಾರಾ ಭರತ್ ರೆಡ್ಡಿಒಂದು ಚಿನ್ನ, ಎರಡು ಬೆಳ್ಳಿ, ಮೂರು ಕಂಚಿನ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ  ಅರ್ಜಿ ಅಹ್ವಾನಉಚಿತ ಬೇಸಿಗೆ ಶಿಬಿರಕ್ಕೆ ಡಿಸಿ ಸಂಗಪ್ಪ ಚಾಲನೆಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಹುಬ್ಬಳ್ಳಿಯಲ್ಲಿ ಮೇ 16, 17 ರಂದು 12ನೇ 'ಮೇ ಸಾಹಿತ್ಯ ಮೇಳ': ಅಲ್ಲಮಪ್ರಭು ಬೆಟ್ಟದೂರುವಿಶ್ವಕರ್ಮ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ: ಮೇ 31ರಂದು ಬೆಂಗಳೂರಿನಲ್ಲಿ ಬೃಹತ್ ಕಾರ್ಯಕ್ರಮಕೊಪ್ಪಳ ಜಿಲ್ಲೆಯ ತೋಟಗಾರಿಕೆ ಇಲಾಖೆಯ ಮಾವಿನ ಮೇಳಕ್ಕೆ 10 ವರ್ಷ; ಹಲವು ವಿಶೇಷಪ್ರಧಾನಿ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಬೇಡಿ: ಭೂಮರಡ್ಡಿ