Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಪರ್ಧಾಳುಗಳು ಸೋಲು - ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು : ನಾರಾ ಭರತ್ ರೆಡ್ಡಿ

ಜಿಕೆ ಫೌಂಡೇಶನ್ ಬಳ್ಳಾರಿ ಆಶ್ರಯದಲ್ಲಿ ಕ.ಕ.ವಿಭಾಗ ಮಟ್ಟದ ಪುರುಷರ, ಮಹಿಳೆಯರ ದೇಹದಾಡ್ಯ ಸ್ಪರ್ಧೆ, ಪವರ್ ಲಿಫ್ಟಿಂಗ್ ಸ್ಪರ್ಧೆ


ಬಳ್ಳಾರಿ: 23..ಸ್ಪರ್ಧೆಗಳಲ್ಲಿ ಸೋಲು, ಗೆಲುವು ಸಾಮಾನ್ಯ. ಆದರೆ, ಭಾಗವಹಿಸುವುದು ಮುಖ್ಯ, ಸ್ಪರ್ಧಾಳುಗಳು   ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು. ಕೆ.ಕ.ಭಾಗದ ಯುವಕರಿಗೆ ಮತ್ತಷ್ಟು ಪ್ರೋತ್ಸಾಹ ನೀಡಲು ಜಿಕೆ ಫೌಂಡೇಶನ್  ವಿಜಯ್ ಅವರಿಗೆ ಅತ್ಯಂತ ಅಭಿನಂದನೆಗಳನ್ನು ಸಲ್ಲಿಸುವೆ ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದರು.

ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಜಿಕೆ ಫೌಂಡೇಶನ್, ಬಳ್ಳಾರಿ ಫಿಟ್ನೆಸ್ ಅಸೋಸಿಯೇಶನ್ ಆಶ್ರಯದಲ್ಲಿ ಗುರುವಾರ ಸಂಜೆ ಹಮ್ಮಿಕೊಂಡಿದ್ದ ಕ.ಕ.ವಿಭಾಗ ಮಟ್ಟದ ಪುರುಷರ, ಮಹಿಳೆಯರ ದೇಹದಾಡ್ಯ ಸ್ಪರ್ಧೆ, ಪವರ್ ಲಿಫ್ಟಿಂಗ್ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದರು. ಕ್ರಿಕೆಟ್, ಫುಟ್ಬಾಲ್, ಟೆನ್ನಿಸ್, ಫುಟ್ಬಾಲ್ ಸೇರಿ ನಾನಾ ಕ್ರೀಡೆಗಳನ್ನು ಆಯೋಜಿಸುವುದು ಸಾಮಾನ್ಯ. ಆದರೆ, ಜಿ.ಕೆ.ಫೌಂಡೇಶನ್ ಅಧ್ಯಕ್ಷ ವಿಜಯ್ ಜಿ.ಕೆ.ಅವರು ಯುವಕರನ್ನು ಪ್ರೋತ್ಸಾಹಿಸಲು ಕ.ಕ. ವಿಭಾಗ ಮಟ್ಟದ ದೇಹದಾಡ್ಯ ಸ್ಪರ್ಧೆಗಳನ್ನು ಅಚ್ಚುಕಟ್ಟಾಗಿ ಆಯೋಜಿಸಿರುವುದು ಸಂತಸ ಮೂಡಿಸಿದೆ.

ಜಿ.ಕೆ.ಸ್ವಾಮಿ (ವಿಜಯ್) ಅವರು ಸಿಂಗಪುರ ನಲ್ಲಿ ಕೆಲಸ ಮಾಡಿ, ನಾನು ಹುಟ್ಟಿದ ನಾಡಿಗೆ ಏನಾದ್ರೂ ಮಾಡ್ಬೇಕು ಎನ್ನುವ ಹಂಬಲಲ್ಲಿದ್ದಾರೆ, ಅವರ ಕಾಳಜಿಗೆ ನನ್ನ ಸಂಪೂರ್ಣ ಸಹಕಾರ, ಬೆಂಬಲ ಇರಲಿದೆ. ಇಂದಿನ ಯುವಕರೇ ದೇಶದ ಮುಂದಿನ ಸ್ಫೂರ್ತಿ, ಜಿ.ಕೆ.ಸ್ವಾಮಿ ಅವರು ಯುವಕರಾಗಿದ್ದು, ಹೈ.ಕ.ಭಾಗದ ಯುವಕರಿಗೆ ಪ್ರಾಧಾನ್ಯತೆ ನೀಡಬೇಕು ಎನ್ನುವ ಉದ್ದೇಶದಿಂದ ಮುಂದೆ ಬಂದಿದ್ದಾರೆ. ಜಿಕೆ ಫೌಂಡೇಶನ್ ವತಿಯಿಂದ ಜಿಕೆ ಸ್ವಾಮಿ ಅವರು, ಬಡವರು, ಮಹಿಳೆಯರು, ವೃದ್ಧರ ಸೇವೆ ಜೊತೆಗೆ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿ ಮಾದರಿಯಾಗಿದ್ದಾರೆ. ಅವರೊಂದಿಗೆ ನಾನಿರುವೆ ಎಂದರು. ಜಿ.ಕೆ.ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಜಿ.ಕೆ.ಸ್ವಾಮಿ ಅವರು ಮಾತನಾಡಿ, ಯುವಕರಿಗೆ ಪ್ರೋತ್ಸಾಹಿಸಲು ವೇದಿಕೆ ಕಲ್ಪಿಸಬೇಕು ಎನ್ನುವ ಉದ್ದೇಶ ನನ್ನದು, ನಮ್ಮ ಫೌಂಡೇಶನ್ ಆಶ್ರಯದಲ್ಲಿ ಇಲ್ಲಿವರೆಗೂ ಶಿಕ್ಷಣ, ಆರೋಗ್ಯ, ಸಾಮಾಜಿಕ ಕ್ಷೆತ್ರದಲ್ಲಿ ಸಾಕಷ್ಟು ಸೇವೆ ಮಾಡಿಕೊಂಡು ಬರುತ್ತಿದ್ದು, ಕ.ಕ.ವಿಭಾಗ ಮಟ್ಟದ  ದೇಹದಾಡ್ಯ ಸ್ಪರ್ಧೆಯನ್ನು ಆಯೋಜಿಸಿದ್ದು, ಬರುವ ದಿನಗಳಲ್ಲಿ ರಾಜ್ಯಮಟ್ಟದ ಸ್ಫರ್ಧೆ ಆಯೋಜಿಸುವ ಕನಸಿದೆ. ಎಲ್ಲರ ಸಹಕಾರ ಅತ್ಯಗತ್ಯ ಎಂದರು.

ಇದಕ್ಕೂ ಮುನ್ನ ಬೆಳಿಗ್ಗೆ ಕೊಪ್ಪಳ, ವಿಜಯನಗರ, ಕಲಬುರ್ಗಿ, ರಾಯಚೂರು, ಬೀದರ್, ಬಳ್ಳಾರಿ ಸೇರಿ ನಾನಾ ಕಡೆಯಿಂದ ಆಗಮಿಸಿದ್ದ ಸ್ಪರ್ಧಾಳುಗಳು, ತೂಕ, ಎತ್ತರ ಮಾಡಿಸಿಕೊಂಡು ತಮ್ಮ ಹೆಸರುಗಳನ್ನು ನೊಂದಾಯಿಸಿಕೊಂಡು, ಸ್ಪರ್ಧೆಗಳಲ್ಲಿ ಭಾಗವಹಿಸಲು ಸಿದ್ಧತೆ ನಡೆಸಿದರು.

ಈ ಸಂದರ್ಭದಲ್ಲಿ  ಪಾಲಿಕೆ ಮಾಜಿ ಮೇಯರ್ ರಾಜೇಶ್ವರಿ ಸುಬ್ಬರಾಯಡೂ, ಮುಖಂಡರಾದ ಲೋಕೇಶ್, ಕರಾಟೆ ಕಟ್ಟೆಸ್ವಾಮೀ, ಸುರೇಶ್ ಸೇರಿದಂತೆ ಇತರರಿದ್ದರು.

ತೀರ್ಪುಗಾರರಾಗಿ ಮಿಸ್ಟರ್. ಏಶಿಯಾ ಚಿನ್ನದ ಪ್ರಶಸ್ತಿ ವಿಜೇತ ಬಿ.ಮಾರುತೇಶ, ಗದಗನ ಅನಿಲ ಬೆಳವಣಿಕೆ, ಸೂರಜ್, ಶಶಿಕುಮಾರ್ ಅವರುಆಗಮಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ