Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಹಕರಿಸಿ






ಬಳ್ಳಾರಿ,ಮಾ.23.

ಸಮಾಜಕ್ಕೆ ಶಾಪವಾಗಿರುವ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಮತ್ತು ಅಂತಹ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಲು ಸಹಕರಿಸುವಂತೆ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯು ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಬಾಲ ಕಾರ್ಮಿಕ ಪದ್ಧತಿಯು ಮಕ್ಕಳ ಶಾರೀರಿಕ, ಮಾನಸಿಕ ಮತ್ತು ಶೈಕ್ಷಣಿಕ ಬೆಳವಣಿಗೆಗೆ ಮಾರಕವಾಗಿದೆ. ಬಡತನ ಹಾಗೂ ಅಜ್ಞಾನದ ಕಾರಣದಿಂದ ಅನೇಕ ಮಕ್ಕಳು ಶಿಕ್ಷಣದಿಂದ ವಂಚಿತರಾಗಿ ದುಡಿಮೆಗೆ ಸೇರುತ್ತಿದ್ದಾರೆ. ಈ ಪಿಡುಗನ್ನು ಹೋಗಲಾಡಿಸಲು ಜಿಲ್ಲಾಡಳಿತವು ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳು, ಪತ್ತೆ ಹಚ್ಚುವ ಕಾರ್ಯ ಮತ್ತು ಪುನರ್ವಸತಿ ಪ್ರಕ್ರಿಯೆಗಳನ್ನು ನಡೆಸುತ್ತಾ ಬಂದಿದೆ.

ಬಾಲ ಕಾರ್ಮಿಕ ಪದ್ಧತಿಯಿಂದ ಮುಕ್ತರಾದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ವಸತಿ ಮತ್ತು ಉತ್ತಮ ಜೀವನೋಪಾಯ ಕಲ್ಪಿಸಲು ಆರ್ಥಿಕ ನೆರವಿನ ಅಗತ್ಯವಿದೆ. ಈ ಸಾಮಾಜಿಕ ಕಾರ್ಯಕ್ಕೆ ಕೈಜೋಡಿಸಲು ಇಚ್ಛಿಸುವ ದಾನಿಗಳು, ಕೈಗಾರಿಕೋದ್ಯಮಿಗಳು ಮತ್ತು ಸಾರ್ವಜನಿಕರು ಈ ಕೆಳಗಿನ ಬ್ಯಾಂಕ್ ಖಾತೆಗೆ ದೇಣಿಗೆ ನೀಡಬಹುದಾಗಿದೆ.


ಬ್ಯಾಂಕ್ ಹೆಸರು: ಕೆನರಾ ಬ್ಯಾಂಕ್ (Canara Bank)

Advertisement

ಖಾತೆ ಸಂಖ್ಯೆ: 110058103941


IFSC ಕೋಡ್: CNRB0007295

ಶಾಖೆ: ಬೆಂಗಳೂರು ವರ್ಕರ್ಸ್ ವೆಲ್ಫೇರ್ ಬೋರ್ಡ್ ಶಾಖೆ, ಬೆಂಗಳೂರು.

ಮಕ್ಕಳ ಹಕ್ಕುಗಳನ್ನು ರಕ್ಷಿಸಿ, ಅವರ ಸುಂದರ ಭವಿಷ್ಯಕ್ಕಾಗಿ ಉದಾರವಾಗಿ ಧನಸಹಾಯ ಮಾಡುವ ಮೂಲಕ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಅಧ್ಯಕ್ಷರು ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಕೋರಿದ್ದಾರೆ.







Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*