Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇಶದ ಪ್ರಗತಿಗೆ ವಿಶ್ವಾಸಾರ್ಹ ಅಂಕಿಅAಶಗಳ ಕೊಡುಗೆ ಅಪಾರ: ಹರೀಶ್ವರನ್.ಕೆ


ಬಳ್ಳಾರಿ,ಜೂ.10:ಯಾವುದೇ ಸಮೀಕ್ಷೆಯ ಯಶಸ್ಸಿನಲ್ಲಿ ಪರಿಕಲ್ಪನೆಗಳು ಮತ್ತು ವ್ಯಾಖ್ಯಾನಗಳ ಏಕರುಪದ ಅರಿವು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಇಂತಹ ಸಮೀಕ್ಷಾ ಸಾಧನಗಳನ್ನು ಸಮರ್ಪಕವಾಗಿ ಅರ್ಥಮಾಡಿಕೊಳ್ಳಲು ಪ್ರಾದೇಶಿಕ ತರಬೇತಿ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿವೆ. ರಾಷ್ಟಿçÃಯ ಮಾದರಿ ಸಮೀಕ್ಷೆ ಸಂಸ್ಥೆಯು ದೇಶಕ್ಕೆ ವಿಶ್ವಾಸಾರ್ಹ ಅಂಕಿಅAಶಗಳನ್ನು ಒದಗಿಸುವ ದೇಶದ ಅತಿದೊಡ್ಡ ಸಂಸ್ಥೆಗಳಲ್ಲಿ ಒಂದಾಗಿದೆ ಎಂದು ರಾಷ್ಟಿçÃಯ ಸಂಖ್ಯಾ ಕಚೇರಿಯ ಪ್ರಾದೇಶಿಕ ಮುಖ್ಯಸ್ಥರು ಹಾಗೂ ನಿರ್ದೇಶಕ ಹರೀಶ್ವರನ್ ಕೆ. ಅವರು ಹೇಳಿದರು.
ಹುಬ್ಬಳ್ಳಿಯ ಭಾಗ್ಯಲಕ್ಷಿö್ಮ ನಗರದ ಎನ್‌ಎಸ್‌ಎಸ್‌ಒ ಭವನದಲ್ಲಿ ಹುಬ್ಬಳ್ಳಿ ಪ್ರಾದೇಶಿಕ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಾಗಿ ಮಂಗಳವಾರ ಆಯೋಜಿಸಲಾಗಿದ್ದ ನಾಲ್ಕು ದಿನಗಳ ಪ್ರಾದೇಶಿಕ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತ ಸರ್ಕಾರವು 1950ರಿಂದಲೇ ವೈಜ್ಞಾನಿಕ ಮಾದರಿ ಆಯ್ಕೆ ವಿಧಾನಗಳನ್ನು ಬಳಸಿಕೊಂಡು ಸಾಮಾಜಿಕ-ಆರ್ಥಿಕ ಮಾಹಿತಿಯನ್ನು ಸಂಗ್ರಹಿಸಲು ರಾಷ್ಟಿçÃಯ ಮಾದರಿ ಸಮೀಕ್ಷೆಗಳನ್ನು ನಡೆಸುತ್ತಾ ಬಂದಿದೆ. ಈ ಸರಣಿಯ ಮುಂದಿನ ಭಾಗವಾಗಿ ಎನ್‌ಎಸ್‌ಎಸ್ ನ 81ನೇ ಸುತ್ತಿನ ಸಮೀಕ್ಷೆಯು 2026ರ ಜುಲೈ 1ರಿಂದ ಆರಂಭವಾಗಲಿದೆ ಎಂದು ತಿಳಿಸಿದರು.
ಈ 81ನೇ ಸುತ್ತಿನ ಅಡಿಯಲ್ಲಿ ಮುಖ್ಯವಾಗಿ ಮೂರು ಪ್ರಮುಖ ಸಮೀಕ್ಷೆಗಳನ್ನು ಕೈಗೊಳ್ಳಲಾಗುತ್ತಿದೆ. ಕೃಷಿ ಕುಟುಂಬಗಳ ಸ್ಥಿತಿಗತಿ ಮೌಲ್ಯಮಾಪನ ಸಮೀಕ್ಷೆಯಲ್ಲಿ ಗ್ರಾಮೀಣ ಕುಟುಂಬಗಳ ಭೂಮಿ, ಸಕ್ರಿಯ ಹಿಡುವಳಿಗಳು, ಜಾನುವಾರುಗಳ ಮಾಲೀಕತ್ವ ಸೇರಿದಂತೆ ವಿವಿಧ ಸೂಚಕಗಳನ್ನು ಸೃಷ್ಟಿಸುವುದು ಹಾಗೂ ಕೃಷಿ ಕುಟುಂಬಗಳ ಸಾಮಾಜಿಕ-ಆರ್ಥಿಕ ಸ್ಥಿತಿಯ ಅಂದಾಜುಗಳನ್ನು ಒದಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಅಖಿಲ ಭಾರತ ಸಾಲ ಮತ್ತು ಹೂಡಿಕೆ ಸಮೀಕ್ಷೆಯಲ್ಲಿ ಭಾರತದ ಕುಟುಂಬಗಳ ಆಸ್ತಿಗಳು, ಬಂಡವಾಳ ನಿರ್ಮಾಣ ಹಾಗೂ ಸಾಲಬಾಧ್ಯತೆಗಳಿಗೆ ಸಂಬAಧಿಸಿದ ಸಮಗ್ರ ಪರಿಮಾಣಾತ್ಮಕ ಮಾಹಿತಿಯನ್ನು ಇದು ಸಂಗ್ರಹಿಸಲಿದೆ. (ಗಮನಾರ್ಹ ಸಂಗತಿಯೆAದರೆ, ಈ ಎರಡು ವಿಷಯಗಳ ಕುರಿತ ಹಿಂದಿನ ಸಮೀಕ್ಷೆಗಳನ್ನು 2019ರ ಜನವರಿಯಿಂದ ಡಿಸೆಂಬರ್ ಅವಧಿಯಲ್ಲಿ ಎನ್‌ಎಸ್‌ಎಸ್ ನ 77ನೇ ಸುತ್ತಿನಲ್ಲಿ ನಡೆಸಲಾಗಿತ್ತು).
ವಲಸೆ ಸಮೀಕ್ಷೆಯಲ್ಲಿ 2026ರ ಜುಲೈನಿಂದ 2027ರ ಜೂನ್‌ವರೆಗೆ ಈ ಸಮೀಕ್ಷೆ ನಡೆಯಲಿದ್ದು, ಕುಟುಂಬ ಸದಸ್ಯರ ವಲಸೆ ವೈಶಿಷ್ಟö್ಯಗಳು ಹಾಗೂ ಕುಟುಂಬಗಳಿAದ ಹೊರವಲಸೆ ಹೋದ ಸದಸ್ಯರ ಕುರಿತು ವಿವರವಾದ ಮಾಹಿತಿಯನ್ನು ಕಲೆಹಾಕಲಾಗುತ್ತದೆ ಎಂದು ಅವರು ವಿವರಿಸಿದರು.
ದೇಶದಾದ್ಯಂತ ತರಬೇತಿ ಪಡೆದ ಕ್ಷೇತ್ರಾಧಿಕಾರಿಗಳು ಈ ಮಾಹಿತಿ ಸಂಗ್ರಹ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ಸಮೀಕ್ಷೆಗಳು ರಾಷ್ಟಿçÃಯ ಮಟ್ಟದಲ್ಲಿ ಅತ್ಯಂತ ಮಹತ್ವದ್ದಾಗಿದ್ದು, ಮಾಹಿತಿ ಸಂಗ್ರಹಣೆಗಾಗಿ ಮನೆಗಳಿಗೆ ಭೇಟಿ ನೀಡುವ ಅಧಿಕಾರಿಗಳಿಗೆ ಸಾರ್ವಜನಿಕರು ಸಂಪೂರ್ಣವಾಗಿ ಸಹಕರಿಸಬೇಕು. ಮಾಧ್ಯಮ ಪ್ರತಿನಿಧಿಗಳೂ ಸಹ ಈ ರಾಷ್ಟಿçÃಯ ಕಾರ್ಯಕ್ಕೆ ಬೆಂಬಲ ನೀಡಬೇಕು ಎಂದು ವಿನಂತಿಸಿದರು.
ಹುಬ್ಬಳ್ಳಿ ಎನ್‌ಎಸ್‌ಒ (ಎಫ್‌ಒಡಿ) ಸಹಾಯಕ ನಿರ್ದೇಶಕ ಪ್ರಮೋದ್ ವಿ. ಪಂಡಿತ್ ಅವರ ಸ್ವಾಗತಿಸಿದರು. ಉಪನಿರ್ದೇಶಕ ಮಾದೇವಪ್ಪ ಅವರು ವಂದಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜಾ ಲಖಮಗೌಡ ಕಾನೂನು ಕಾಲೇಜಿನಲ್ಲಿ ನಡೆದ ಮಧ್ಯಸ್ಥಿಕೆ ಕುರಿತು ಕಾರ್ಯಕ್ರಮ ದೈವಜ್ಞ ಜ್ಯುವೆಲ್ಲರಿ ಅಸೋಸಿಯೇಶನ್ ವತಿಯಿಂದ  ಗೌರವಾನ್ವಿತ ಜಿಲ್ಲಾಧಿಕಾರಿಗಳಿಗೆ ಕೃತಜ್ಞತಾ ಭೇಟಿಅಳಗವಾಡಿ ಬೀರೇಶ್ವರ ಸಕ್ಕರೆ ಕಾರ್ಖಾನೆಗೆ ಬೀಗ ಜಡಿದು ಪ್ರತಿಭಟನೆ; ಅಹೋರಾತ್ರಿ ಧರಣಿ ಮುಂದುವರಿಕೆದೇಶದ ಪ್ರಗತಿಗೆ ವಿಶ್ವಾಸಾರ್ಹ ಅಂಕಿಅAಶಗಳ ಕೊಡುಗೆ ಅಪಾರ: ಹರೀಶ್ವರನ್.ಕೆನಾಳಿನ ಪೀಳಿಗೆಗೆ, ಇಂದಿನ ಬದಲಾವಣೆಗಾಗಿ ನೈಸರ್ಗಿಕ ಕೃಷಿಯತ್ತ ಮುಖ ಮಾಡಿ: ಮಂಜುನಾಥ್ಕಾಣೆಯಾದ ಯುವಕನ ಪತ್ತೆಗೆ ಮನವಿಬಳ್ಳಾರಿಯಲ್ಲಿ ರಾಷ್ಟಿçÃಯ ಶಸ್ತçಚಿಕಿತ್ಸಕರ ಸಾಪ್ತಾಹಿಕ ಆಚರಣೆ: ವೈದ್ಯಕೀಯ ವಿದ್ಯಾರ್ಥಿಗಳಿಂದ ಹೃದಯದ ಆರೋಗ್ಯ ಜಾಗೃತಿ ಬೀದಿ ನಾಟಕ ಪ್ರದರ್ಶನಕೆಪಿಎಸ್‌ಸಿ ನೇಮಕಾತಿ ಅಕ್ರಮದ ಕುರಿತು ಸ್ವತಂತ್ರ ತನಿಖೆ ಮಾಡಿ : ಸಿದ್ದೇಶ್ ಊಳೂರು ಆಗ್ರಹನಗರದ ಪ್ರಮುಖ ರಸ್ತೆಗೆ ಮುಂಡ್ಲೂರು ನರಸಿಂಹಪ್ಪ ರಸ್ತೆ ಎಂದು ನಾಮಕರಣ ಭೂ ಸಂತ್ರಸ್ತ ರೈತರಿಗೆ ನ್ಯಾಯಯುತ ಪರಿಹಾರಕ್ಕೆ ಆಗ್ರಸಿ ಜೂನ್ 18ರಂದು ಬಳ್ಳಾರಿ ಬಂದ್ ಗೆ  ಕರೆ