Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ ಮನವೊಲಿಸಿ ಬೆಳೆ ವಿಮೆ ವ್ಯಾಪ್ತಿಗೆ ಒಳಪಡಿಸಿ : ಸಿಇಓ ಬಾಲೆ

ಫಸಲ್ ಬಿಮಾ ಯೋಜನೆ | ಬೆಳೆ ಸಾಲ ಪಡೆದವರಿಗೆ ಬೆಳೆ ವಿಮೆ ಕಡ್ಡಾಯ

ಬಾಗಲಕೋಟೆ, ಜುಲೈ ೧4 : ಜಿಲ್ಲೆಯ ಹೆಚ್ಚಿನ ಸಂಖ್ಯೆಯ ರೈತರು ಬೆಳೆ ವಿಮೆ ಯೋಜನೆಯ ಪ್ರಯೋಜನ ಪಡೆಯುವಂತೆ ಗ್ರಾಮ ಮಟ್ಟದಲ್ಲಿ ಜಾಗೃತಿ ಮೂಡಿಸಿ, ರೈತರನ್ನು ಮನವೊಲಿಸಿ ಬೆಳೆವಿಮೆ ವ್ಯಾಪ್ತಿಗೆ ಒಳಡಿಸಬೇಕೆಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ ಸಭಾಭವನದಲ್ಲಿಂದು ಬೆಳೆ ವಿಮೆ ಯೋಜನೆ ಅನುಷ್ಠಾನ ಕುರಿತು ಜರುಗಿದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬೆಳೆ ಸಾಲ ಪಡೆದ ರೈತರಿಗೆ ಬೆಳೆ ವಿಮೆ ಕಡ್ಡಾಯವಾಗಿರುವ ಹಿನ್ನಲೆಯಲ್ಲಿ ಯಾವುದೇ ಅರ್ಹ ರೈತರು ವಿಮೆಯಿಂದ ವಂಚಿತರಾಗದಂತೆ ಬ್ಯಾಂಕುಗಳು, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಗ್ರಾಮ ಮಟ್ಟದಲ್ಲಿ ರೈತರಿಗೆ ಬೆಳೆ ವಿಮೆಯ ಮಹತ್ವ, ನೋಂದಣಿ ವಿಧಾನ, ಕೊನೆಯ ದಿನಾಂಕ ಹಾಗೂ ಯೋಜನೆಯ ಪ್ರಯೋಜನಗಳ ಕುರಿತು ಸಮರ್ಪಕ ಮಾಹಿತಿ ನೀಡಬೇಕು. ಬ್ಯಾಂಕುಗಳು ಬೆಳೆಸಾಲ ಮಂಜೂರು ಮಾಡುವ ಸಂದರ್ಭದಲ್ಲಿ ವಿಮೆ ನೋಂದಣಿ ಪ್ರಕ್ರಿಯೆಯನ್ನು ನಿಯಮಾನುಸಾರ ಪೂರ್ಣಗೊಳಿಸಬೇಕು. ಯೋಜನೆಯ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ, ಜಿಲ್ಲೆಯಲ್ಲಿ ಶೇ.೧೦೦ ರಷ್ಟು ಅರ್ಹ ರೈತರನ್ನು ಬೆಳೆ ವಿಮೆ ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದರು.
ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳು ನೀಡಿದ ಬೆಳೆಸಾಲ ಪಡೆದ ರೈತರನ್ನು ವಿಮೆ ವ್ಯಾಪ್ತಿಗೆ ಒಳಪಡಿಸುವ ಕಾರ್ಯವಾಗಬೇಕು. ಕಳೆದ ಸಾಲಿನ ಹಂಗಾಮಿನಲ್ಲಿ ೨೨ ಸಾವಿರಕ್ಕೂ ಹೆಚ್ಚು ರೈತರು ಬೆಳೆ ವಿಮೆಗೆ ಒಳಪಡಿಸಿದ್ದರು. ಈ ಹಂಗಾಮಿನಲ್ಲಿ ಅದಕ್ಕೂ ಹೆಚ್ಚು ವಿಮೆಗೆ ನೋಂದಣಿಗೆ ಕ್ರಮವಹಿಸಲು ಸೂಕ್ತ ನಿರ್ದೇಶನ ನೀಡಿದರು. ಪ್ರತಿಯೊಂದು ಬ್ಯಾಂಕ್‌ಗಳು ಸಾಲ ಪಡೆದಿರುವ ರೈತರನ್ನು ಮನವೊಲಿಸಿ ಬೆಳೆವಿಮೆ ನೋಂದಣಿಗೆ ಕ್ರಮವಹಿಸಲು ತಿಳಿಸಿದರು. ಈ ಬಗ್ಗೆ ಪ್ರತಿದಿನ ಪ್ರಗತಿಯ ಬಗ್ಗೆ ಗಮನ ಹರಿಸಲಾಗುವುದೆಂದು ತಿಳಿಸಿದು. 
ಕೃಷಿ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಮಾತನಾಡಿ ಹೆಸರು, ಸೋಯಾ ಅವರೆ ಹಾಗೂ ಉದ್ದು ಬೆಳೆಗೆ ವಿಮೆ ಕಂತು ಪಾವತಿಗೆ ಜುಲೈ ೧೫ ಕೊನೆಯ ದಿನವಾದರೆ, ಅರಿಶಿಣ, ಸೂರ್ಯಕಾಂತಿ, ಸಜ್ಜೆ, ಮುಸುಕಿನ ಜೋಳ, ಜೋಳ, ತೊಗರಿ, ಶೇಂಗಾ, ಎಳ್ಳು (ಮ.ಆ), ಕೆಂಪು ಮೆಣಸಿನಕಾಯಿ, ಮುಸುಕಿನ ಜೋಳ, ಸಜ್ಜೆ, ತೊಗರಿ, ಶೇಂಗಾ (ನೀರಾವರಿ) ಬೆಳೆಗಳಿಗೆ ಜುಲೈ ೩೧ ಹಾಗೂ ಸೂರ್ಯಕಾಂತಿ, ಈರುಳ್ಳಿ (ನೀರಾವರಿ), ಈರುಳ್ಳಿ, ಕೆಂಪು ಮೆಣಸಿನಕಾಯಿ (ಮ.ಆ) ಬೆಳೆಗಳಿಗೆ ವಿಮೆ ಕಂತು ಪಾವತಿಗೆ ಆಗಸ್ಟ ೧೪ ಆಗಿರುತ್ತದೆ ಎಂದು ತಿಳಿಸಿದರು. 
ಈ ಸಂದರ್ಭದಲ್ಲಿ ವಿವಿಧ ಬೆಳೆ ವಿಮೆಯ ಪ್ರಚಾರದ ಪೋಸ್ಟರಗಳನ್ನು ಬಿಡುಗಡೆಗೊಳಿಸಲಾಯಿತು. ಸಭೆಯಲ್ಲಿ ಬಿಡಿಸಿಸಿ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಸಿದ್ದನಗೌಡ ನೀಲಪ್ಪನವರ, ಜಿಲ್ಲಾ ಅಗ್ರಣಿ ಬ್ಯಾಂಕ್‌ನ ವ್ಯವಸ್ಥಾಪಕ ರಾಜಕುಮಾರ ಹೂಗಾರ, ಸಹಕಾರ ಇಲಾಖೆಯ ಉಪನಿಬಂಧಕ ದಾನಯ್ಯ ಹಿರೇಮಠ ಸೇರಿದಂತೆ ವಿವಿಧ ರಾಷ್ಟ್ರೀಕೃತ ಬ್ಯಾಂಕ್ ಶಾಖಾ ವ್ಯವಸ್ಥಾಪಕರು ಉಪಸ್ಥಿತರಿದ್ದರು.

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ