Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೂನ್‌ 6ಕ್ಕೆ ಜೈನ್ ಕಾಲೇಜ್ ಆಫ್ ಇಂಜಿನಿಯರಿಂಗ್-ರಿಸರ್ಚ್ ಕಾಲೇಜಿನಲ್ಲಿ  ಘಟಿಕೋತ್ಸವ


ಬೆಳಗಾವಿ: ಇಲ್ಲಿನ ಉದ್ಯಮಬಾಗದಲ್ಲಿರುವ ಪ್ರಸಿದ್ಧ ತಾಂತ್ರಿಕ ಸಂಸ್ಥೆಯಾದ ಜೈನ್ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ರಿಸರ್ಚ್ (JCER) ಕಾಲೇಜಿನ ಘಟಿಕೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಗ್ರಾಜುಯೇಷನ್ ಸರ್ಟಿಫಿಕೇಟ್ ವಿತರಣೆ ಸಮಾರಂಭವನ್ನು ಜೂನ್ 06 ರ ಶನಿವಾರ ಆಯೋಜಿಸಲಾಗಿದೆ ಎಂದು ಜೆಸಿಇಆರ್‌ನ ಪ್ರಾಚಾರ್ಯ ಮತ್ತು ನಿರ್ದೇಶಕರಾದ ಡಾ. ಎಸ್.ವ್ಹಿ. ಗೋರಬಾಳ ಅವರು ತಿಳಿಸಿದರು.

ನಗರದ ಕಾಲೇಜು ಆವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 06 ರಂದು ಬೆಳಗ್ಗೆ 10:00 ಗಂಟೆಗೆ ಈ ಪ್ರತಿಷ್ಠಿತ ಕಾರ್ಯಕ್ರಮವು ಆರಂಭವಾಗಲಿದೆ. ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆದ ಡಾ. ಪ್ರಸಾದ್ ರಾಂಪುರೆ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ಕನ್ನಡ ವಾಹಿನಿಯ ಮುಖ್ಯ ಸಂಪಾದಕರಾದ ಅಜಿತ್ ಹನಮಕ್ಕನವರ್ ಅವರು ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿರುವ ಈ ಕಾಲೇಜಿನ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗಗಳು ಈಗಾಗಲೇ ಎನ್‌ಬಿಎ ಮಾನ್ಯತೆ ಪಡೆದುಕೊಂಡಿವೆ. ಪ್ರಸಕ್ತ ಸಾಲಿನಲ್ಲಿ ವಿವಿಧ ವಿಭಾಗಗಳಲ್ಲಿ ಯಶಸ್ವಿಯಾಗಿ ತೇರ್ಗಡೆ ಹೊಂದಿದ ಒಟ್ಟು 260 ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಈ ಸಮಾರಂಭದಲ್ಲಿ ಅಧಿಕೃತವಾಗಿ ಪದವಿ ಪ್ರದಾನ ಮಾಡಲಾಗುವುದು ಎಂದು ಅವರು ವಿವರಿಸಿದರು.

ಶನಿವಾರ ನಡೆಯಲಿರುವ ಈ ಘಟೀಕೋತ್ಸವ ಹಾಗೂ ಪದವಿ ಪ್ರಮಾಣಪತ್ರ ವಿತರಣೆ ಸಮಾರಂಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಪ್ರಾಂಶುಪಾಲರು ಕರೆ ನೀಡಿದರು.

ಈ ಸುದ್ದಿಗೋಷ್ಠಿಯಲ್ಲಿ  ಡಾ. ಪ್ರಕಾಶ ಸೋನವಾಲಕರ್, ನಿವೃತ್ತ ಕರ್ನಲ್ ಜಾನಿ ಹಾಗೂ ಡಾ. ಜ್ಯೋತಿ ಬಿ.ಆರ್ ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ