Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಅಭಿವೃದ್ಧಿ ಆಗ್ತಿಲ್ಲ , ಅರವಿಂದ ಬೆಲ್ಲದ

ಧಾರವಾಡ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಅಭಿವೃದ್ಧಿ ಆಗ್ತಿಲ್ಲ, ಆಡಳಿತ ಸುಧಾರಣೆ ಇಲ್ಲ. ಸರ್ಕಾತ ಬಂದ ಮೇಲೆ ಸರ್ಕಾರಿ ಅಧಿಕಾರಿಗಳಿಗೆ ಇವರು ಆತ್ಮಹತ್ಯೆ ಭಾಗ್ಯ ಕೊಟ್ಟಿದ್ದಾರೆ. ವಾಲ್ಮೀಕಿ ಹಗರಣದಲ್ಲಿ ಒಬ್ಬ ಅಧಿಕಾರಿಯನ್ನು ಇವರು ಬಲಿ ಪಡೆದರು. ಎಸ್‌ಟಿ ಸಮಾಜದ ಪೊಲೀಸ್‌ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡರು. ಸರ್ಕಾರಿ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯವನ್ನೆ ಈ ಸರ್ಕಾರ ತಂದು ಕೊಟ್ಟಿಚೆ ಎಂದು ಬೆಲ್ಲದ ವಾಗ್ದಾಳಿ ನಡೆಸಿದರು.



ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳಕರ ಪಿಎ ಹೆಸರು ಬರೆದಿಟ್ಟು ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡರು. ಕಲಬುರ್ಗಿ ಮಳಖೇಡ ಗ್ರಾಮದಲ್ಲಿ ಭಾಗ್ಯವತಿ ಎಂಬುವವರು ವೇತನ ಬಂದಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಲ್ಕು ತಿಂಗಳಿಂದ ಇವರಿಗೆ ವೇತನವಾಗಿರಲಿಲ್ಲ. ಸರ್ಕಾರಕ್ಕೆ ಮೊರೆ ಇಟ್ಟರೂ ಆ ಮಹಿಳೆಗೆ ವೇತನ ಸಿಕ್ಕಿಲ್ಲ.


ಇದರಿಂದ ಆಕರ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಂತಹ ಘಟನೆಗಳು ಸರ್ಕಾರಕ್ಕೆ ನಾಚಿಕೆ ಬರುವ ಸಂಗತಿಗಳು. ಸಿದ್ದರಾಮಯ್ಯ ಅವರು ಭ್ರಷ್ಟಾಚಾರ ಕಡಿಮೆ ಮಾಡೋದು ಬಿಟ್ಟು ಇಂತಹ ಆತ್ಮಹತ್ಯೆ ಭಾಗ್ಯ ಕೊಡುತ್ತಿದ್ದಾರೆ. ಇವರು ರೈತರ ಪರ, ಬಡವರ ಪರ ಕೆಲಸ ಮಾಡುತ್ತಿಲ್ಲ. ಕಲಬುರಗಿಯಿಂದ ಮೈಸೂರುವರೆಗೂ ಬೆಳೆಹಾನಿ ನೀಡಿಲ್ಲ. ದಿನಾಲೂ ಕೈ ಸರ್ಕಾರ, ಬರೀ ಜಾತಿ, ಧರ್ಮ, ಆರ್‌ಎಸ್‌ಎಸ್ ಬ್ಯಾನ್ ಇಂತವುಗಳನ್ನೇ ಚರ್ಚೆ ಮಾಡುತ್ತಿದೆ. ಸಿಎಂ ಅವರಿಗೆ ತಮ್ಮ ಖುರ್ಚಿ ಉಳಿಸಿಕೊಳ್ಳುವುದೇ ಕೆಲಸವಾಗಿದೆ. ಸಿಎಂ ತಮ್ಮ ಮೊಮ್ಮಕ್ಕಳಿಗೆ ಹಣ ಮಾಡಬೇಕಿದೆ ಎಂದರು.



ಸಿದ್ದರಾಮಯ್ಯ ಅಲ್ಮಾ ಎಡಪಂತೀಯರು, ಆರ್‌ಎಸ್‌ಎಸ್‌ ಏನು ಕೆಲಸ ಮಾಡುತ್ತಿದೆ ಎಂಬುದು ಅವರಿಗೆ ಗೊತ್ತಿರಲಿ. ಅದರ ಕಾರ್ಯವ್ಯಾಪ್ತಿ ಏನು ಎಂಬುದನ್ನೂ ಅವರು ತಿಳಿಯಬೇಕು. ಸಂಘದ ಮೂಲ ಉದ್ದೇಶ ಏನು ಎಂಬುದನ್ನು ಇವರು ಮೊದಲು ಅರ್ಥ ಮಾಡಿಕೊಳ್ಳಲಿ ಎಂದರು.


 ರಾಜಕೀಯದಲ್ಲಿ ಸಿದ್ದರಾಮಯ್ಯರವರಿಗೆ ತಮ್ಮ ಮಗನಿಗೆ ಭವಿಷ್ಯ ಇಲ್ಲ ಎಂದು ತಮ್ಮ ಮೊಮ್ಮಕ್ಕಳನ್ನು ಇದೀಗ ಸಿದ್ದರಾಮಯ್ಯ ಮುನ್ನೆಲೆಗೆ ತರುತ್ತಿದ್ದಾರೆ. ಅವರಿಗಾಗಿ ದುಡ್ಡು ಮಾಡುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆರೋಪಿಸಿದರು.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ