Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹತ್ತಿ, ತೊಗರಿ ಬೇಸಾಯ ಕ್ರಮಗಳು: ಹೊರಾವರಣ ತರಬೇತಿ


ಕೊಪ್ಪಳ ಜೂನ್ 19 ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಕೊಪ್ಪಳ ಮತ್ತು ಸಹಾಯಕ ಕೃಷಿ ನಿರ್ದೇಶಕರು ಕೊಪ್ಪಳ ಇವರ ಸಹಯೋಗದಲ್ಲಿ ತೊಗರಿ ಮತ್ತು ಹತ್ತಿ ಬೆಳೆಗಳಲ್ಲಿ ಸುರಕ್ಷಿತ ಕೀಟನಾಶಕ ಬಳಕೆ ಹಾಗೂ ಸಮತೋಲಿತರಸಗೊಬ್ಬರ ಬಳಕೆ ಕುರಿತು ಅಳವಂಡಿ ಹೋಬಳಿಯ ಬಿಕನಹಳ್ಳಿ ಗ್ರಾಮದಲ್ಲಿ ಹೊರಾವರಣತರಬೇತಿ ಏರ್ಪಡಿಸಲಾಗಿತ್ತು.
 ಅಧಿಕ ಸಾಂದ್ರತೆ ಹತ್ತಿ ಬೇಸಾಯ ಹಾಗೂ ತೊಗರಿ ಬೆಳೆಯ ನಿರ್ವಹಣೆ ಕುರಿತು ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಡಾ.ಬದರಿ ಪ್ರಸಾದ್ ಪಿ.ಆರ್. ಅವರು ಸಮಗ್ರ ಮಾಹಿತಿ ನೀಡಿದರು. ಅಲ್ಲದೇ ಬರ ಭೂಮಿ ಬೆಳೆಯಾದ ಗೋಡಂಬಿಯ ಕುರಿತು ಮಾಹಿತಿ ನೀಡಿದರು.
 ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರಾದ ಜೀವಂತ ಸಾಬ್ ಅವರು, ರೈತರಿಗೆ ಬೀಜೋಪಚಾರ ಮಹತ್ವ ಪರ್ಯಾಯ ರಸಗೊಬ್ಬರಗಳ ಬಗ್ಗೆ ಮಾಹಿತಿ ನೀಡಿದರು.
 ಸಹಾಯಕ ತೋಟಗಾರಿಕಾ ಅಧಿಕಾರಿರಾದ ಆರಿಫ್ ಅವರು, ಕೃಷಿ ಮತ್ತು ತೋಟಗಾರಿಕಾ ಪದ್ಧತಿಯ ಬಗ್ಗೆ ಮಾಹಿತಿ ಕೊಟ್ಟರು.
 ಕೋರಮಂಡಲ ಇಂಟರ್ನ್ಯಾಷನಲ್ ಅಧಿಕಾರಿ ಅವಿನಾಶ್ ಅವರು, ನ್ಯಾನೋ ರಸಗೊಬ್ಬರಗಳ ಹಾಗೂ ಡ್ರೋನ್ ಬಳಕೆಯ ಬಗ್ಗೆ ರೈತರಿಗೆ ಅರಿವು ಮೂಡಿಸಿದರು.
 ಕಾರ್ಯಕ್ರಮದಲ್ಲಿ ಕೃಷಿ ಅಧಿಕಾರಿಗಳಾದ ಪ್ರತಾಪಗೌಡ, ಮಾರುತಿ, ತಾಂತ್ರಿಕ ವ್ಯವಸ್ಥಾಪಕೆಯವರಾದ ತಾರಾ ಹಾಗೂ ನೂರಾರು ರೈತರು ಭಾಗವಹಿಸಿದ್ದರು.
 ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದ ವಿಜ್ಞಾನಿಗಳನ್ನು (ಡಾ. ಬದರಿ ಪ್ರಸಾದಪಿ.ಆರ್., ವಿಸ್ತರಣಾ ಮುಂದಾಳು ಮೊ. ನಂ: 9900145705) ಸಂಪರ್ಕಿಸಬಹುದು.
****
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ