Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅರುಣಾಚಲ ಪ್ರದೇಶದ ವಿಧಾನಸಭೆಯ ಚುನಾವಣೆಯ ಮತ ಎಣಿಕೆ ಇಂದ ಶುರು

ದೆಹಲಿ: 2024ರ ಏಪ್ರಿಲ್ 19 ರಂದು ನಡೆದಿದ್ದ ಅರುಣಾಚಲ ಪ್ರದೇಶ ವಿಧಾನಸಭೆಯ ಚುನಾವಣೆಯ ಮತ ಎಣಿಕೆ ಇಂದು (ಜೂನ್ 2, ಭಾನುವಾರ) ಆರಂಭವಾಗಿದೆ. ದೇಶಾದ್ಯಂತ ಲೋಕಸಭಾ ಸ್ಥಾನಗಳ ಮತ ಎಣಿಕೆಗೆ ಎರಡು ದಿನ ಮುಂಚಿತವಾಗಿ ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಮತ ಎಣಿಗೆ ನಡೆಯುತ್ತಿದೆ.

ಈಶಾನ್ಯ ರಾಜ್ಯಗಳಾದ ಈ ಎರಡು ರಾಜ್ಯಗಳ ಲೋಕಸಭಾ ಚುನಾವಣೆಯ ಮತ ಎಣಿಕೆ ಜೂನ್ 4 ರಂದು ನಡೆಯಲಿದ್ದು, ಅರುಣಾಚಲ ಪ್ರದೇಶ, ಸಿಕ್ಕಿಂ ವಿಧಾನಸಭೆಯ ಅವಧಿ ಇಂದಿಗೆ (ಜೂನ್ 2, ಭಾನುವಾರ) ಕೊನೆಗೊಳ್ಳುವುದರಿಂದ ಲೋಕಸಭಾ ಚುನಾವಣಾ ಫಲಿತಾಂಶದ 2 ದಿನ ಮುಂಚಿತವಾಗಿಯೇ ನಡೆಯುತ್ತಿದೆ.

ಅರುಣಾಚಲ ಪ್ರದೇಶ ವಿಧಾನಸಭೆಯಲ್ಲಿ 60 ಸದಸ್ಯರಿದ್ದರೂ, ಮುಖ್ಯಮಂತ್ರಿ ಖಂಡು ಮತ್ತು ಉಪಮುಖ್ಯಮಂತ್ರಿ ಚೌವಾ ಮೇನ್ ಸೇರಿದಂತೆ ಆಡಳಿತಾರೂಢ 10 ಬಿಜೆಪಿಯ ಅಭ್ಯರ್ಥಿಗಳು ತಮ್ಮ ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿದ್ದರಿಂದ 50 ಕ್ಷೇತ್ರಗಳಲ್ಲಿ ಮಾತ್ರ ಮತದಾನ ನಡೆದಿದೆ.

25 ಜಿಲ್ಲಾ ಕೇಂದ್ರಗಳ 40 ಮತ ಎಣಿಕೆ ಕೇಂದ್ರಗಳಲ್ಲಿ ಭಾನುವಾರ ಬೆಳಿಗ್ಗೆ 6 ಗಂಟೆಯಿಂದ ಮತ ಎಣಿಕೆ ಶುರುವಾಗಿದೆ. ಬೆಳಿಗ್ಗೆ 6.30ರ ರ ಸುಮಾರಿಗೆ ಅಂಚೆ ಮತಪತ್ರಗಳನ್ನು ಎಣಿಕೆ ಮಾಡಲಾಯಿತು. ನಂತರ ಎಲೆಕ್ಟ್ರಾನಿಕ್ ಮತದಾನ ಯಂತ್ರಗಳನ್ನು (ಇವಿಎಂ) ಎಣಿಕೆ ಮಾಡಲಾಗುತ್ತಿದೆ. ಮಧ್ಯಾಹ್ನದ ವೇಳೆಗೆ ಮತ ಎಣಿಕೆ ಮುಗಿಯುವ ನಿರೀಕ್ಷೆಯಿದೆ ಎಂದು ಅರುಣಾಚಲ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ ಪವನ್ ಕುಮಾರ್ ಸೈನ್ ತಿಳಿಸಿದ್ದಾರೆ.

ಈ ಪ್ರಕ್ರಿಯೆ ಸುಗಮವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಎಣಿಕೆ ಕೇಂದ್ರಗಳಲ್ಲಿ ಸಾಕಷ್ಟು ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ, ಫಲಿತಾಂಶ ಪ್ರಕಟವಾದ ನಂತರ ಯಾವುದೇ ವಿಜಯೋತ್ಸವ ಮೆರವಣಿಗೆಗೆ ಅವಕಾಶವಿರುವುದಿಲ್ಲ.

"50 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, 10 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಗೆದ್ದಿದ್ದಾರೆ. ಹಾಲಿ ವಿಧಾನಸಭೆಯ ಅಧಿಕಾರಾವಧಿ ಮುಗಿಯಲು ಜೂನ್ 2 ಕೊನೆಯ ದಿನವಾಗಿರುವುದರಿಂದ, ಎಣಿಕೆ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಲು ನಾವು ಬಯಸುತ್ತೇವೆ. ಅದಕ್ಕಾಗಿಯೇ ಮತ ಎಣಿಕೆಯು ಬೆಳಿಗ್ಗೆ 8 ರಿಂದ ಅಲ್ಲ, ಬೆಳಿಗ್ಗೆ 6 ರಿಂದ ಪ್ರಾರಂಭವಾಗಲಿದೆ" ಎಂದು ಸೈನ್ ಹೇಳಿದ್ದಾರೆ.

 

ಅರುಣಾಚಲ ಪ್ರದೇಶದಲ್ಲಿ ಏಪ್ರಿಲ್ 19ರಂದು ಶೇ.82.95ರಷ್ಟು ಮತದಾನವಾಗಿತ್ತು. ಬಿಜೆಪಿ ಎಲ್ಲಾ 60 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ, ಪ್ರತಿಪಕ್ಷ ಕಾಂಗ್ರೆಸ್ ಕೇವಲ 19 ಸ್ಥಾನಗಳಲ್ಲಿ ಸ್ಪರ್ಧಿಸಿದೆ. ಜಿರೋ-ಹಪೋಲಿ, ತಾಲಿಹಾ, ತಾಲಿ, ಸಾಗಲೀ, ರೋಯಿಂಗ್, ಮುಕ್ತೋ, ಇಟಾನಗರ್, ಹಯುಲಿಯಾಂಗ್, ಚೌಖಾಮ್ ಮತ್ತು ಬೊಮ್ಡಿಲಾ ಕ್ಷೇತ್ರಗಳಲ್ಲಿ ಬಿಜೆಪಿ ಅವಿರೋಧವಾಗಿ ಗೆದ್ದಿದೆ.

 

"ರಾಜ್ಯ ವಿಧಾನಸಭಾ ಚುನಾವಣೆಯ ಮತದಾನದ ಫಲಿತಾಂಶವನ್ನು ಜೂನ್ 2 ರಂದು ಘೋಷಿಸಲಾಗುತ್ತಿರುವುದರಿಂದ, ನಾನು ಎಲ್ಲಾ ಬಿಜೆಪಿ ಅಭ್ಯರ್ಥಿಗಳಿಗೆ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಬಿಜೆಪಿ ಭರ್ಜರಿ ಬಹುಮತದೊಂದಿಗೆ ಗೆಲ್ಲುತ್ತದೆ ಎಂದು ನನಗೆ ವಿಶ್ವಾಸವಿದೆ" ಎಂದು ಬಿಜೆಪಿ ನಾಯಕಿ ಮತ್ತು ಉಪಮುಖ್ಯಮಂತ್ರಿ ಚೌನಾ ಮೇನ್ ಶನಿವಾರ (ಜೂನ್ 1) ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. 2019ರ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ 41, ಜೆಡಿಯು 7, ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) 5, ಕಾಂಗ್ರೆಸ್ 4, ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ ಪ್ರದೇಶ 1 ಮತ್ತು ಉಳಿದ 2 ಸ್ಥಾನಗಳನ್ನು ಸ್ವತಂತ್ರರು ಗೆದ್ದಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ