LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪರಿಷತ್‌ನ ಪದವೀಧರರು ಮತ್ತು ಶಿಕ್ಷಕರ ಚುನಾವಣೆಯ ಮತ ಎಣಿಕೆ ಆರಂಭ

ಕಲಬುರಗಿ: ವಿಧಾನ ಪರಿಷತ್‌ನ ಪದವೀಧರರು ಮತ್ತು ಶಿಕ್ಷಕರ ಆರು ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಮೈಸೂರು, ಬೆಂಗಳೂರು ಮತ್ತು ಕಲಬುರಗಿಯಲ್ಲಿ ಮತ ಎಣಿಕೆ ನಡೆಯುತ್ತಿದೆ. ಸಂಜೆ ವೇಳೆಗೆ ಫಲಿತಾಂಶ ಹೊರಬೀಳುವ ಸಾಧ್ಯತೆಗಳಿವೆ.ಜೂನ್‌ 3 ರಂದು ಈ ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಮತಪತ್ರ ಬಳಕೆ ಮಾಡಿದ್ದು, ಪ್ರಾಶಸ್ತ್ಯದ ಮತಗಳನ್ನು ಎಣಿಕೆ ಮಾಡಬೇಕಾಗಿರುವುದರಿಂದ ಫಲಿತಾಂಶ ವಿಳಂಬವಾಗಲಿದೆ.

ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌‍ನ ಆರು, ಬಿಜೆಪಿಯ ನಾಲ್ಕು, ಜೆಡಿಎಸ್‌‍ನ ಇಬ್ಬರು ಅಭ್ಯರ್ಥಿಗಳು ಸೇರಿದಂತೆ ಒಟ್ಟು 78 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.ಇಂದು ಬೆಳಿಗ್ಗೆ 8 ಗಂಟೆಗೆ ಮೈಸೂರಿನ ಮಹಾರಾಣಿ ಕಾಲೇಜಿನ ಮತ ಎಣಿಕೆ ಕೇಂದ್ರದಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರಗಳ ಬೆಂಗಳೂರು ಸರ್ಕಾರಿ ಕಲಾ ಕಾಲೇಜಿನ ಮತ ಎಣಿಕೆ ಕೇಂದ್ರದಲ್ಲಿ ಬೆಂಗಳೂರು ಪದವೀಧರ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರಗಳ ಹಾಗೂ ಗುಲ್ಬರ್ಗ ವಿಶ್ವವಿದ್ಯಾಲಯದ ಮತ ಎಣಿಕೆ ಕೇಂದ್ರದಲ್ಲಿ ಈಶಾನ್ಯ ಪದವೀಧರ ಕ್ಷೇತ್ರದ ಮತ ಎಣಿಕೆ ಆರಂಭಗೊಂಡಿದೆ.

ಮತಪೆಟ್ಟಿಗೆಗಳನ್ನು ಇಟ್ಟಿರುವ ಭದ್ರತಾ ಕೊಠಡಿಗಳನ್ನು ‌ಚುನಾವಣಾ ಅಧಿಕಾರಿಯೂ ಆಗಿರುವ ಪ್ರಾದೇಶಿಕ ಆಯುಕ್ತ ಜಿ.ಸಿ. ಪ್ರಕಾಶ್‌ ಹಾಗೂ ಚುನಾವಣೆ ವೀಕ್ಷಕ ರವಿಶಂಕರ್ ಜೆ. ಅವರ ಸಮ್ಮುಖದಲ್ಲಿ ತೆರೆಯಲಾಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್