ಚನ್ನಪಟ್ಟಣದಲ್ಲೇ ತಂಗಿದ್ದ ಸಿಪಿವೈ ಮಂಗಳವಾರಪೇಟೆಯಲ್ಲಿರುವ ಬಸವನಗುಡಿಯಲ್ಲಿ ಪೂಜೆ ಸಲ್ಲಿಸಿ ಒಂದೂವರೆ ಕಿಲೋ ಮೀಟರ್ ಱಲಿ ನಡೆಸಿದರು. ಱಲಿಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡರು. ಱಲಿಯುದ್ದಕ್ಕೂ ಘೋಷಣೆ ಮೊಳಗಿಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿಕೆ ಸುರೇಶ್ ಱಲಿಯಲ್ಲಿ ಪಾಲ್ಗೊಂಡರು.
ರೋಡ್ ಶೋ ವೇಳೆ ಹಿಂದೆ ನಿಂತಿದ್ದ ಸಿಪಿ ಯೋಗೇಶ್ವರ್ರನ್ನ ಗಮನಿಸಿದ ಸಿಎಂ ಮುಂದೆ ಕರೆದರು. ಈ ವೇಳೆ, ‘ಇರಲಿ ಪರವಾಗಿಲ್ಲ ನಿಲ್ಲಿ ಸರ್’ ಅಂತಾ ಯೋಗೇಶ್ವರ್ ಹೇಳಿದ್ದಾರೆ.