Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೊಹರಂ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಸಿಪಿಐ ಆರ್.ಆರ್. ಪಾಟೀಲ ಕರೆ


ಮಹಾಲಿಂಗಪುರ, ಜೂನ್ ೧೯: ಇದೇ ಜೂನ್ ೨೬ ರಂದು ನಡೆಯಲಿರುವ ಮೊಹರಂ ಹಬ್ಬವನ್ನು ಮಹಾಲಿಂಗಪುರ ನಗರದಲ್ಲಿ ಯಾವುದೇ ಜಾತಿ, ಧರ್ಮ ಹಾಗೂ ಭೇದಭಾವವಿಲ್ಲದೆ ಸಹೋದರತ್ವ, ಸೌಹಾರ್ದತೆ ಮತ್ತು ಶಾಂತಿಯುತ ವಾತಾವರಣದಲ್ಲಿ ಆಚರಿಸಬೇಕೆಂದು ಸಿಪಿಐ ಆರ್.ಆರ್. ಪಾಟೀಲ ಕರೆ ನೀಡಿದರು.
ನಗರ ಪೊಲೀಸ್ ಠಾಣೆಯಲ್ಲಿ ಮೊಹರಂ ಹಬ್ಬದ ಅಂಗವಾಗಿ ಆಯೋಜಿಸಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಮಹಾಲಿಂಗಪುರ ನಗರವು ಸದಾ ಸೌಹಾರ್ದತೆಗೆ ಹೆಸರಾಗಿದ್ದು, ಎಲ್ಲಾ ಸಮುದಾಯದ ಜನರು ಪರಸ್ಪರ ಸಹಕಾರದಿಂದ ಹಬ್ಬ-ಹರಿದಿನಗಳನ್ನು ಆಚರಿಸುತ್ತ ಬಂದಿದ್ದಾರೆ. ಈ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ ಎಂದು ತಿಳಿಸಿದರು.
ನಂತರ ಮಾತನಾಡಿದ ಸ್ಥಳೀಯ ಪಿಎ ಕಿರಣ ಸತ್ತಿಗೇರಿ, ಮೊಹರಂ ಆಚರಣೆಯ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಎಲ್ಲರ ಕರ್ತವ್ಯವಾಗಿದೆ. ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡದೆ, ಶಾಂತಿ ಹಾಗೂ ಸಹಕಾರದಿಂದ ಹಬ್ಬವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಹಬ್ಬದ ವೇಳೆ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಅವರು ತಿಳಿಸಿದರು.
ಸಭೆಯಲ್ಲಿ ವಿವಿಧ ಸಮಾಜಗಳ ಮುಖಂಡರು, ಮೊಹರಂ ಸಮಿತಿಯ ಪದಾಧಿಕಾರಿಗಳು, ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.ನಗರದ ಸೌಹಾರ್ದತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಸಂಕಲ್ಪವನ್ನು ವ್ಯಕ್ತಪಡಿಸಿದರು.
ಇದೇ ವೇಳೆ ಮಹಮ್ಮದ ಹುಲಿಕಟ್ಟಿ, ಶಂಕರಗೌಡ ಪಾಟೀಲ, ಅಶೋಕ ಅಂಗಡಿ ಮಹಾಲಿಂಗಪ್ಪಾ ಹಡಪದ, ಪತ್ರಕರ್ತ ಮೀರಾ ತಟಾಗಾರ,ಜಯರಾಮ್ ಶೆಟ್ಟಿ ಅವರು ಮಾತನಾಡಿದರು.
ಇದೆ ಸಂಧರ್ಭದಲ್ಲಿ ವಿಷ್ಣು ಗೌಡ ಪಾಟೀಲ,ಬಾಬು ಸನದಿ , ಶೇಮ್ಸುದಿನ್ ತೇರದಾಳ, ರಸೂಲ ಕಾಲೇಕಾನ, ಜಬಿವುಲ್ಲಾ ಮುಲ್ಲಾ ,ಸಿರಾಜ್ ಮುಲ್ಲಾ, ಶ್ಯಾಮ ನದಾಫ್, ಮೈಹಿಬೂಬು ಮಲಾದಾರ, ಮೋಸಿನ ಅತ್ತಾರ , ಪ್ರಭು ಪಟ್ಟಣಶೆಟ್ಟಿ , ಬಸವರಾಜ ಜಂಬಗಿ , ಮೆಹಬೂಬ್ ಪೆಂಡಾರಿ , ಸಿಂಕದರ ಸಾಂಗ್ಲಿಕರ , ಪ್ರಲ್ಹಾದ ನೂಲಿ, ರಾಘು ಪವಾರ, ಉಸ್ಮಾನ್ ಪೆಂಡಾರಿ, ಸದಾಶಿವ ನಾವಿ, ಪೊಲೀಸ್ ಸಿಬ್ಬಂದಿಗಳಾದ ಜಗದೀಶ ದಳವಾಯಿ, ಭೀಮಶಿ ಹಡಪದ , ಬಸವರಾಜ ದೇಸಾಯಿ , ವಿರೇಶ ಮಸ್ಕಿ , ಮಂಜುನಾಥ ಸಣ್ಣಕ್ಕಿ, ಎಸ್ ಎಸ್ ಸರೂರ , ಪ್ರಶಾಂತ ಚಿಲ್ಲಾಪುರ, ಸೇರಿದಂತೆ ಇತರರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ