Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿಯಲ್ಲಿ ಭೀಕರ ಕಾಲ್ತುಳಿತ; ಮುಂಜಾಗೃತೆಗಾಗಿ ಸಿಆರ್‌ಪಿಎಫ್‌ ನಿಯೋಜನೆ

ನವದೆಹಲಿ: ನವದೆಹಲಿಯ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದ ಬಳಿಕ ಜನದಟ್ಟಣೆ ನಿರ್ವಹಣೆಗೆ ಇದೀಗ ದೆಹಲಿ ಪೊಲೀಸರೊಂದಿಗೆ ಕೇಂದ್ರ ಮೀಸಲು ಪೊಲೀಸ್​ ಪಡೆ (ಸಿಆರ್​ಪಿಎಫ್‌)ಯನ್ನು ನಿಯೋಜಿಸಲಾಗಿದೆ. ಹಿರಿಯ ಸಿಆರ್​ಪಿಎಫ್‌ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.


ಜನಸಂದಣಿ ನಿರ್ವಹಣೆ ಹೆಚ್ಚಿಸಲು ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ದೆಹಲಿ ಪೊಲೀಸರು 6 ಇನ್ಸ್‌ಪೆಕ್ಟರ್ ಶ್ರೇಣಿಯ ಅಧಿಕಾರಿಗಳನ್ನು ನಿಲ್ದಾಣದಲ್ಲಿ ನಿಯೋಜಿಸಿದ್ದಾರೆ. ವಿವಿಧ ಜಿಲ್ಲೆಗಳಿಂದ ಬಂದಿರುವ ಈ ಅಧಿಕಾರಿಗಳನ್ನು ವಿಶೇಷವಾಗಿ ದೇಶದ ಅತ್ಯಂತ ಜನನಿಬಿಡ ಸಾರಿಗೆ ಕೇಂದ್ರಗಳ ಪೈಕಿ ಒಂದಾದ ನವದೆಹಲಿ ರೈಲು ನಿಲ್ದಾಣದಲ್ಲಿ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.


ಈಗಾಗಲೇ ದಟ್ಟಣೆ ನಿರ್ವಹಣೆಯಲ್ಲಿ ಅನುಭವ ಹೊಂದಿರುವ, ಯಶಸ್ವಿಯಾಗಿ ನಿರ್ವಹಿಸಿರುವ ವಿವಿಧ ಜಿಲ್ಲೆಗಳ ಅಧಿಕಾರಿಗಳು ಇವರಾಗಿದ್ದಾರೆ. ಇವರಲ್ಲಿ ಕೆಲವರು ನಿಲ್ದಾಣಗಳಲ್ಲಿ ಎಸ್​ಎಚ್​ಒ ಆಗಿ ಕಾರ್ಯನಿರ್ವಹಿಸಿದ್ದು, ಜನಸಂದಣಿಯಲ್ಲಿ ಲಾಜಿಸ್ಟಿಕ್​ ಮತ್ತು ಭದ್ರತಾ ಸವಾಲುಗಳನ್ನು ಅರ್ಥೈಸಿಕೊಂಡು ಕೆಲಸ ಮಾಡಲಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ