Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಪರಸ್ಪರ ನಿಂದನೆ ಪ್ರಕರಣ ರಾಜ್ಯಪಾಲರ ಅಂಗಳಕ್ಕೆ

ಬೆಂಗಳೂರು, ಡಿಸೆಂಬರ್ 30: ಡಿಸೆಂಬರ್ 19 ರ ಬೆಳಗಾವಿ ಅಧಿವೇಶನದ ಕಲಾಪದಲ್ಲಿ ಆಡಳಿತ ಪಕ್ಷ ಪ್ರತಿಪಕ್ಷಗಳ ನಡುವೆ ವಾಗ್ಯುದ್ಧ ತಾರಕಕ್ಕೇರುತ್ತಿದ್ದಂತೆ, ಎದ್ದು ನಿಂತಿದ್ದ ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಪರಸ್ಪರ ಬೈದಾಡಿಕೊಂಡಿದ್ದರು. ಸದನದಲ್ಲೇ ರವಿ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆಂದು ಆರೋಪಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣವನ್ನೂ ದಾಖಲಿಸಿದ್ದರು. ಪ್ರಕರಣದ ಹಿನ್ನೆಲೆ ಹಿರೇಬಾಗೇವಾಡಿ ಪೊಲೀಸರು ರವಿಯನ್ನ ಬಂಧಿಸಿದ್ದೂ ಆಯ್ತು, ಕೋರ್ಟ್​ ಸೂಚನೆ ಮೇರೆಗೆ ರಿಲೀಸ್​ ಮಾಡಿದ್ದೂ ಆಯ್ತು. ಕೊನೆಗೆ ಈಗ





ಇನ್ನು ಈಗಾಗಲೇ ಅಂದರೆ, ಡಿಸೆಂಬರ್ 25ರಂದೇ ಎರಡೂ ಪ್ರಕರಣಗಳು ಸಿಐಡಿಗೆ ವರ್ಗಾವಣೆಯಾಗಿದೆ. ಆದರೂ ಇದುವರೆಗೂ ಸಿಐಡಿ ತಂಡ ಬೆಳಗಾವಿಗೆ ಭೇಟಿ ನೀಡಿಲ್ಲ. ಸದ್ಯದಲ್ಲೇ ಸಿಐಡಿ ಟೀಂ ಬೆಳಗಾವಿಗೆ ತಲುಪಲಿದೆ. ಆದರೆ ಸಿಐಡಿಗೆ ಇಲ್ಲೊಂದು ಸವಾಲು ಎದುರಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್​ ದೂರಿನನ್ವಯ ಸ್ಥಳ ಮಹಜರು ನಡೆಸಬೇಕಾದರೆ ಸುವರ್ಣಸೌಧಕ್ಕೆ ಕಾಲಿಡಬೇಕು. ಆದರೆ, ಪರಿಷತ್​ ಸಭಾಪತಿ ಬಸವರಾಜ್ ಹೊರಟ್ಟಿ ಸ್ಥಳ ಮಹಜರಿಗೆ ಅವಕಾಶ ಕೊಡಲ್ಲ ಅಂತ ಖಡಾಖಂಡಿತವಾಗಿ ನುಡಿದಿದ್ದಾರೆ. ಹೀಗಾಗಿ ಸಿಐಡಿ ಮುಂದಿನ ಯೋಜನೆ ಏನು ಎಂಬುದು ಇನ್ನೂ ಗೌಪ್ಯವಾಗಿಯೇ ಇದೆ.





ಇನ್ನು ಡಿ.22 ರಂದು ಸಿ.ಟಿ.ರವಿ ಮೇಲೆ ಹಲ್ಲೆ ಸಂಬಂಧ ಅಪರಿಚಿತರ ವಿರುದ್ಧ ದೂರು ದಾಖಲಾಗಿತ್ತು. ಹಿರೇಬಾಗೇವಾಡಿ ಪೊಲೀಸರು ಖುದ್ದು ಸ್ವಯಂಪ್ರೇರಿತ ಕೇಸ್​ ದಾಖಲಿಸಿಕೊಂಡಿದ್ದರು. ಆದರೆ, ದೂರು ದಾಖಲಾಗಿ 8 ದಿನಗಳಾದರೂ ಇನ್ನೂ ಆರೋಪಿಗಳು ಮಾತ್ರ ಪತ್ತೆಯಾಗಿಲ್ಲ. ಇದರಿಂದ ಸಿಡಿದಿರುವ ಪರಿಷತ್ ಸದಸ್ಯ ಸಿ.ಟಿ.ರವಿ, ಯಾಕೆ ಗೂಂಡಾಗಳನ್ನ ಇದುವರೆಗೂ ಬಂಧಿಸಿಲ್ಲ. ನಾನು ಕೊಟ್ಟಿರುವ ದೂರಿನಲ್ಲಿ ಹೆಸರು ದಾಖಲಿಸಿದ್ದರೂ ಅಪರಿಚಿತರು ಎಂದು ನಮೂದಿಸಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ.

ಸದ್ಯ ಸಿಐಡಿ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಲು ತಯಾರಿ ನಡೆಸಿದ್ದಾರೆ. ಈಗಾಗಲೇ ಎರಡು ಘಟನಾವಳಿಗಳ ಕುರಿತು ಮಾಹಿತಿ ಪಡೆದಿರುವ ಸಿಐಡಿ ತನಿಖೆ ಇನ್ನಷ್ಟು ಚುರುಕುಗೊಳಿಸಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ