Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಪರಸ್ಪರ ನಿಂದನೆ ಪ್ರಕರಣ ರಾಜ್ಯಪಾಲರ ಅಂಗಳಕ್ಕೆ

ಬೆಂಗಳೂರು, ಡಿಸೆಂಬರ್ 30: ಡಿಸೆಂಬರ್ 19 ರ ಬೆಳಗಾವಿ ಅಧಿವೇಶನದ ಕಲಾಪದಲ್ಲಿ ಆಡಳಿತ ಪಕ್ಷ ಪ್ರತಿಪಕ್ಷಗಳ ನಡುವೆ ವಾಗ್ಯುದ್ಧ ತಾರಕಕ್ಕೇರುತ್ತಿದ್ದಂತೆ, ಎದ್ದು ನಿಂತಿದ್ದ ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಪರಸ್ಪರ ಬೈದಾಡಿಕೊಂಡಿದ್ದರು. ಸದನದಲ್ಲೇ ರವಿ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆಂದು ಆರೋಪಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣವನ್ನೂ ದಾಖಲಿಸಿದ್ದರು. ಪ್ರಕರಣದ ಹಿನ್ನೆಲೆ ಹಿರೇಬಾಗೇವಾಡಿ ಪೊಲೀಸರು ರವಿಯನ್ನ ಬಂಧಿಸಿದ್ದೂ ಆಯ್ತು, ಕೋರ್ಟ್​ ಸೂಚನೆ ಮೇರೆಗೆ ರಿಲೀಸ್​ ಮಾಡಿದ್ದೂ ಆಯ್ತು. ಕೊನೆಗೆ ಈಗ





ಇನ್ನು ಈಗಾಗಲೇ ಅಂದರೆ, ಡಿಸೆಂಬರ್ 25ರಂದೇ ಎರಡೂ ಪ್ರಕರಣಗಳು ಸಿಐಡಿಗೆ ವರ್ಗಾವಣೆಯಾಗಿದೆ. ಆದರೂ ಇದುವರೆಗೂ ಸಿಐಡಿ ತಂಡ ಬೆಳಗಾವಿಗೆ ಭೇಟಿ ನೀಡಿಲ್ಲ. ಸದ್ಯದಲ್ಲೇ ಸಿಐಡಿ ಟೀಂ ಬೆಳಗಾವಿಗೆ ತಲುಪಲಿದೆ. ಆದರೆ ಸಿಐಡಿಗೆ ಇಲ್ಲೊಂದು ಸವಾಲು ಎದುರಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್​ ದೂರಿನನ್ವಯ ಸ್ಥಳ ಮಹಜರು ನಡೆಸಬೇಕಾದರೆ ಸುವರ್ಣಸೌಧಕ್ಕೆ ಕಾಲಿಡಬೇಕು. ಆದರೆ, ಪರಿಷತ್​ ಸಭಾಪತಿ ಬಸವರಾಜ್ ಹೊರಟ್ಟಿ ಸ್ಥಳ ಮಹಜರಿಗೆ ಅವಕಾಶ ಕೊಡಲ್ಲ ಅಂತ ಖಡಾಖಂಡಿತವಾಗಿ ನುಡಿದಿದ್ದಾರೆ. ಹೀಗಾಗಿ ಸಿಐಡಿ ಮುಂದಿನ ಯೋಜನೆ ಏನು ಎಂಬುದು ಇನ್ನೂ ಗೌಪ್ಯವಾಗಿಯೇ ಇದೆ.





ಇನ್ನು ಡಿ.22 ರಂದು ಸಿ.ಟಿ.ರವಿ ಮೇಲೆ ಹಲ್ಲೆ ಸಂಬಂಧ ಅಪರಿಚಿತರ ವಿರುದ್ಧ ದೂರು ದಾಖಲಾಗಿತ್ತು. ಹಿರೇಬಾಗೇವಾಡಿ ಪೊಲೀಸರು ಖುದ್ದು ಸ್ವಯಂಪ್ರೇರಿತ ಕೇಸ್​ ದಾಖಲಿಸಿಕೊಂಡಿದ್ದರು. ಆದರೆ, ದೂರು ದಾಖಲಾಗಿ 8 ದಿನಗಳಾದರೂ ಇನ್ನೂ ಆರೋಪಿಗಳು ಮಾತ್ರ ಪತ್ತೆಯಾಗಿಲ್ಲ. ಇದರಿಂದ ಸಿಡಿದಿರುವ ಪರಿಷತ್ ಸದಸ್ಯ ಸಿ.ಟಿ.ರವಿ, ಯಾಕೆ ಗೂಂಡಾಗಳನ್ನ ಇದುವರೆಗೂ ಬಂಧಿಸಿಲ್ಲ. ನಾನು ಕೊಟ್ಟಿರುವ ದೂರಿನಲ್ಲಿ ಹೆಸರು ದಾಖಲಿಸಿದ್ದರೂ ಅಪರಿಚಿತರು ಎಂದು ನಮೂದಿಸಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ.

ಸದ್ಯ ಸಿಐಡಿ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಲು ತಯಾರಿ ನಡೆಸಿದ್ದಾರೆ. ಈಗಾಗಲೇ ಎರಡು ಘಟನಾವಳಿಗಳ ಕುರಿತು ಮಾಹಿತಿ ಪಡೆದಿರುವ ಸಿಐಡಿ ತನಿಖೆ ಇನ್ನಷ್ಟು ಚುರುಕುಗೊಳಿಸಿದೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*